AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲ ಬಂದರೂ ಮುಗಿದಿಲ್ಲ ಮಳೆ; ಜ.11ರಿಂದ ಈ ರಾಜ್ಯಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಿಸಿದ ಐಎಂಡಿ

ಪಂಜಾಬ್​, ರಾಜಸ್ಥಾನ, ಹರ್ಯಾಣ ರಾಜ್ಯಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಲೇ ಇದೆ. ನಿನ್ನೆಯಿಂದ ಸ್ವಲ್ಪಮಟ್ಟಿಗೆ ತಗ್ಗಿದೆ. 

ಚಳಿಗಾಲ ಬಂದರೂ ಮುಗಿದಿಲ್ಲ ಮಳೆ; ಜ.11ರಿಂದ ಈ ರಾಜ್ಯಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ, ಯೆಲ್ಲೋ ಅಲರ್ಟ್​ ಘೋಷಿಸಿದ ಐಎಂಡಿ
ಮಳೆಯ ಚಿತ್ರ
TV9 Web
| Edited By: |

Updated on: Jan 10, 2022 | 8:38 AM

Share

ಚಳಿಗಾಲ ಮುಗಿದರೂ ಮಳೆಗಾಲ ಮುಗಿಯುವ ಲಕ್ಷಣಗಳೇ ಇಲ್ಲ. ದೆಹಲಿ ಸೇರಿ ಒಟ್ಟು ನಾಲ್ಕು ರಾಜ್ಯಗಳಲ್ಲಿ ಜನವರಿ 11ರಿಂದ 13ರವರೆಗೆ ಭರ್ಜರಿ ಮಳೆಯಾಗುವ ಸಾಧ್ಯತೆ ಇದ್ದು ಭಾರತೀಯ ಹವಾಮಾನ ಇಲಾಖೆ (India Meteorological Department (IMD) ಆ ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್ (Yello Alert) ಘೋಷಿಸಿದೆ. ದೆಹಲಿಯಲ್ಲಿ ಕಳೆದ ಕೆಲವು ದಿನಗಳಿಂದಲೂ ಮಳೆಯಾಗುತ್ತಲೇ ಇದೆ. ಐಎಂಡಿಯ ಹಿರಿಯ ವಿಜ್ಞಾನಿ ಆರ್​. ಕೆ.ಜೇನಾಮನಿ ಎಎನ್​ಐ ಜತೆ ಪ್ರತಿಕ್ರಿಯಿಸಿ, ಜನವರಿ 11ರಿಂದ  ದೇಶದ ಪೂರ್ವ ಭಾಗಕ್ಕೆ ಪಶ್ಚಿಮ ಅಡಚಣೆಗಳು ಅಪ್ಪಳಿಸಲಿವೆ. ಹೀಗಾಗಿ ದೇಶದ ಮಧ್ಯ ಮತ್ತು ಪೂರ್ವ ಭಾಗಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ತಿಳಿಸಿದ್ದಾರೆ. 

ಅಂದಹಾಗೇ, ಜನವರಿ 11ರಿಂದ ಒಡಿಶಾ, ಬಿಹಾರ್, ಜಾರ್ಖಂಡ ಮತ್ತು ಪಶ್ಚಿಮ ಬಂಗಾಳ, ದೆಹಲಿಯಲ್ಲಿ ಮಳೆಯಾಗಲಿದೆ. ಒಡಿಶಾದಲ್ಲಿ ಜನವರಿ 11 ಮತ್ತು 12ರಂದು ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಜನವರಿ 11ರಂದು ಒಡಿಶಾದಲ್ಲಿ ಆಲಿಕಲ್ಲು ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಆರೆಂಜ್​ ಅಲರ್ಟ್​ ಎಂದರೆ ಒಡಿಶಾದಲ್ಲಿ ಅತ್ಯಂತ ಕೆಟ್ಟ ವಾತಾವರಣ ಇರಲಿದೆ ಎಂದೇ ಅರ್ಥ. ಅಂದರೆ ರಸ್ತೆ ತಡೆ, ರೈಲು ಸೇವೆಗಳು ಬಂದ್​ ಆಗುವಷ್ಟು ಮಳೆಯಾಗಬಹುದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ.

ಇನ್ನು ಬಿಹಾರ, ಜಾರ್ಖಂಡ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಜನವರಿ 11ರಿಂದ 13ರವರೆಗೆ ಯೆಲ್ಲೋ ಅಲರ್ಟ್​ ಹೇರಲಾಗಿದೆ.  ಇದು ಗಂಭೀರ ಸ್ವರೂಪದ ಕೆಟ್ಟ ವಾತಾವರಣದ ಮುನ್ನೆಚ್ಚರಿಕೆಯಾಗಿದ್ದು, ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಇನ್ನು ದೆಹಲಿಯಲ್ಲಿ ಮಳೆಯ ಪ್ರಮಾಣ ಸ್ವಲ್ಪ ತಗ್ಗಲಿದೆ.  ಇನ್ನು ಪಂಜಾಬ್​, ರಾಜಸ್ಥಾನ, ಹರ್ಯಾಣಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಲೇ ಇದೆ. ನಿನ್ನೆಯಿಂದ ಸ್ವಲ್ಪಮಟ್ಟಿಗೆ ತಗ್ಗಿದೆ.

ಇದನ್ನೂ ಓದಿ: IPL 2022: ಹರಾಜಿನ ಬಳಿಕ ಅಂತಿಮ ನಿರ್ಧಾರ: ಐಪಿಎಲ್ ಬಗ್ಗೆ ವಿಶೇಷ ಮಾಹಿತಿ ಹಂಚಿಕೊಂಡ ಬಿಸಿಸಿಐ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ