AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪ್​ ಟಾರ್ಗೆಟ್​: ಪಂಜಾಬ್​ ಆಯ್ತು ಈಗ ಇನ್ನೆರಡು ರಾಜ್ಯಗಳ ಮೇಲೆ ಕಣ್ಣಿಟ್ಟಿದ್ದೇವೆ ಎಂದ ಆಮ್​ ಆದ್ಮಿ ಪಾರ್ಟಿ ಮುಖಂಡ

ನಮ್ಮನ್ನು ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಪರಿಗಣಿಸುವುದಿಲ್ಲ. ರಾಜಕೀಯ ದಿಗ್ಗಜರೂ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆದರೆ ಈಗ ನೋಡಿ, ದಿಗ್ಗಜ ಪಕ್ಷವೆನಿಸಿದ್ದ ಕಾಂಗ್ರೆಸ್​​ನ್ನು ಸೋಲಿಸಿದ್ದೇವೆ. ಬಿಜೆಪಿಯೂ ನಮಗೆ ಸ್ಪರ್ಧೆ ಕೊಡಲು ಸಾಧ್ಯವಾಗಲಿಲ್ಲ ಎಂದು ಆಪ್​ ಮುಖಂಡ ಹೇಳಿದ್ದಾರೆ.

ಆಪ್​ ಟಾರ್ಗೆಟ್​: ಪಂಜಾಬ್​ ಆಯ್ತು ಈಗ ಇನ್ನೆರಡು ರಾಜ್ಯಗಳ ಮೇಲೆ ಕಣ್ಣಿಟ್ಟಿದ್ದೇವೆ ಎಂದ ಆಮ್​ ಆದ್ಮಿ ಪಾರ್ಟಿ ಮುಖಂಡ
ಅರವಿಂದ್ ಕೇಜ್ರಿವಾಲ್​
TV9 Web
| Edited By: |

Updated on: Mar 12, 2022 | 1:11 PM

Share

ಆಮ್​ ಆದ್ಮಿ ಪಕ್ಷ (Aam Aadmy Party) ಲೋಕಸಭೆ ಚುನಾವಣೆಯಲ್ಲಿ ಎಷ್ಟರಮಟ್ಟಿಗೆ ಪ್ರಬಲ ಪಕ್ಷವೋ ಗೊತ್ತಿಲ್ಲ, ಆದರೆ ಆ ಪಕ್ಷವನ್ನು ನಿರ್ಲಕ್ಷ್ಯ ಮಾಡುವಂತೆ ಇಲ್ಲ. ಅದರಲ್ಲೂ ವಿಧಾನಸಭೆ ಚುನಾವಣೆಯಲ್ಲಿ ಈಗಾಗಲೇ ಕಾಂಗ್ರೆಸ್​​ಗೆ ಪರ್ಯಾಯವಾಗಿ ಹೊರಹೊಮ್ಮುವ ಎಲ್ಲ ಲಕ್ಷಣಗಳೂ ಸ್ಪಷ್ಟವಾಗಿ ಗೋಚರಿಸುತ್ತಿವೆ. ಅದರಲ್ಲೂ ಪಂಜಾಬ್​ನಲ್ಲಿ ಆಡಳಿತ ರೂಢ ಕಾಂಗ್ರೆಸ್​ ಪಕ್ಷವನ್ನು ಸೋಲಿಸಿ, ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಕೆಲವೇ ದಿನಗಳಲ್ಲಿ ಪಂಜಾಬ್​ನಲ್ಲಿ ಆಪ್ ಸರ್ಕಾರ ರಚನೆ ಮಾಡಲಿದೆ. ಭಗವಂತ್ ಮಾನ್​ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. 

ಪಂಜಾಬ್​ ಗೆಲುವಿನ ಬೆನ್ನಲ್ಲೇ ಮಾಧ್ಯಮವೊಂದರೊಂದಿಗೆ ಮಾತನಾಡಿದ ಆಪ್​ ಮುಖಂಡ ಅಕ್ಷಯ್ ಮರಾಠೆ, ನಮ್ಮ ಪಕ್ಷ ಪಂಜಾಬ್​​ನಲ್ಲಿ ಅದ್ಭುತ ಗೆಲುವು ಸಾಧಿಸಿದೆ. ಈಗ ಇನ್ನೆರಡು ರಾಜ್ಯಗಳ ಮೇಲೆ ಕಣ್ಣಿಟ್ಟಿದ್ದು, ಅಲ್ಲಿಯೂ ಕೂಡ ಅಧಿಕಾರಕ್ಕೆ ಬರಲು ಈಗಿನಿಂದಲೇ ಪ್ರಯತ್ನಗಳು ಶುರುವಾಗಿದೆ ಎಂದು ಹೇಳಿದ್ದಾರೆ.  ಅಂದಹಾಗೇ, ಆಮ್​ ಆದ್ಮಿ ಪಕ್ಷ ಕಣ್ಣಿಟ್ಟಿರುವ ಎರಡು ರಾಜ್ಯಗಳು ಗುಜರಾತ್ ಮತ್ತು ಹಿಮಾಚಲ ಪ್ರದೇಶ. ಗುಜರಾತ್​ನಲ್ಲಿ 2022ರ ಡಿಸೆಂಬರ್​ನಲ್ಲಿ ಚುನಾವಣೆ ನಡೆಯಲಿದ್ದು, ಹಿಮಾಚಲ ಪ್ರದೇಶದಲ್ಲಿ ನವೆಂಬರ್ ಅಷ್ಟೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿದೆ.

ಎನ್​ಡಿಟಿವಿ ಮಾಧ್ಯಮದೊಂದಿಗೆ ಮಾತನಾಡಿದ ಆಪ್​ ಮುಖಂಡ ಅಕ್ಷಯ್ ಮರಾಠೆ, ಗುಜರಾತ್​ ಮತ್ತು ಹಿಮಾಚಲಯ ಪ್ರದೇಶಗಳ ಚುನಾವಣೆಯ ಮೇಲೆ ನಾವು ತುಂಬ ಗಮನನೆಟ್ಟಿದ್ದೇವೆ. ಅಲ್ಲಿಗೆ ನಮ್ಮ ಕಾರ್ಯಕರ್ತರನ್ನು ಕಳಿಸುವ ಸಿದ್ಧತೆಗಳು ನಡೆಯುತ್ತಿವೆ. ಅದೆಷ್ಟೋ ದಶಕಗಳಿಂದ ಭಾರತದ ಜನರು ಬಿಜೆಪಿ ಮತ್ತು ಕಾಂಗ್ರೆಸ್ ಎರಡೇ ಪಕ್ಷಗಳನ್ನು ಆಯ್ಕೆ ಮಾಡುತ್ತ ಬಂದರು. ಆದರೆ ಇವೆರಡೂ ಪಕ್ಷಗಳು ಸಾಮಾನ್ಯ ಜನರಿಗಾಗಿ ಏನೇನೂ ಕೆಲಸ ಮಾಡಲಿಲ್ಲ. ಇದೇ ಮೊದಲ ಬಾರಿಗೆ ಜನರು ಪರ್ಯಾಯ ಪಕ್ಷದತ್ತ ಒಲವು ತೋರುತ್ತಿದ್ದಾರೆ. ಅದಕ್ಕೆ ಸಾಕ್ಷಿ ಪಂಜಾಬ್​​ನಲ್ಲಿ ಆಪ್​ ಗೆಲುವು ಎಂದು ವಿಶ್ಲೇಷಣೆ ಮಾಡಿದರು.

ನಮ್ಮನ್ನು ಹೆಚ್ಚಿನ ಚುನಾವಣೋತ್ತರ ಸಮೀಕ್ಷೆಗಳು ಪರಿಗಣಿಸುವುದಿಲ್ಲ. ರಾಜಕೀಯ ದಿಗ್ಗಜರೂ ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ. ಆದರೆ ಈಗ ನೋಡಿ, ದಿಗ್ಗಜ ಪಕ್ಷವೆನಿಸಿದ್ದ ಕಾಂಗ್ರೆಸ್​​ನ್ನು ಸೋಲಿಸಿದ್ದೇವೆ. ಬಿಜೆಪಿಯೂ ನಮಗೆ ಸ್ಪರ್ಧೆ ಕೊಡಲು ಸಾಧ್ಯವಾಗಲಿಲ್ಲ. ಕಳೆದ 10 ವರ್ಷಗಳಿಂದ ದೆಹಲಿಯಲ್ಲಿ ಆಡಳಿತ ನಡೆಸಿದ ಆಪ್​ ಸರ್ಕಾರದ ಕೆಲಸವನ್ನು ಜನರು ನೋಡಿದ್ದಾರೆ. ನಾವು ಮಾನವೀಯತೆಯ ಆಧಾರದ ಮೇಲೆ ಜನ ಸೇವೆ ಮಾಡುತ್ತಿದ್ದೇವೆ. ಹಾಗಾಗಿ ಈಗ ಪಂಜಾಬ್​​ನಲ್ಲಿಯೂ ಅಧಿಕಾರ ಸಿಕ್ಕಿತು ಎಂದು ಹೇಳಿಕೊಂಡಿದ್ದಾರೆ.

ಇನ್ನೊಂದೆಡೆ ಹಿಮಾಚಲ ಪ್ರದೇಶದ ಆಮ್​ ಆದ್ಮಿ ಪಕ್ಷದ ಅಧ್ಯಕ್ಷ ಅನೂಪ್ ಕೇಸರಿ ಕೂಡ ಇದೇ ಮಾತುಗಳನ್ನಾಡಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕೂಡ ಆಪ್​ ಅಧಿಕಾರಕ್ಕೆ ಬರುತ್ತದೆ. ಪಂಜಾಬ್​​ನಲ್ಲಿ ಇತಿಹಾಸ ಸೃಷ್ಟಿಸಿದಂತೆ, ಹಿಮಾಚಲ ಪ್ರದೇಶದಲ್ಲೂ ಇತಿಹಾಸ ಸೃಷ್ಟಿ ಮಾಡುತ್ತದೆ. ಜನರು ಬಿಜೆಪಿ ಮತ್ತು ಕಾಂಗ್ರೆಸ್​ ಬಗ್ಗೆ ತುಂಬ ಬೇಸರಗೊಂಡಿದ್ದಾರೆ ಎಂದು ಅನೂಪ್​ ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ. ಆದರೆ ಬಿಜೆಪಿ ಇದಕ್ಕೆ ತಿರುಗೇಟು ನೀಡಿದೆ. ಹಿಮಾಚಲ ಪ್ರದೇಶದಲ್ಲಿ ಬಿಜೆಪಿಯೇ ಮತ್ತೆ ಅಧಿಕಾರ ಹಿಡಿಯಲಿದೆ ಎಂಬ ಭರವಸೆಯನ್ನು ರಾಜ್ಯ ಬಿಜೆಪಿ ಮುಖ್ಯ ವಕ್ತಾರ ರಣಧೀರ್ ಶರ್ಮಾ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸೋಲಿಗೆ ಮಾಧ್ಯಮಗಳು ಕಾರಣವೆಂದ ಮಾಯಾವತಿ; ಟಿವಿ ಡಿಬೇಟ್​ಗಳನ್ನು ಬಹಿಷ್ಕರಿಸಿದ ಬಹುಜನ ಸಮಾಜ ಪಕ್ಷ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ