AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಶ್ವಾನಗಳಿಗೆ ಹೆದರಿ, ಕದ್ದ ಹಣವನ್ನು ಇನ್​​ಸ್ಟಾಲ್​​ಮೆಂಟ್​​ನಲ್ಲಿ ಹಿಂದಿರುಗಿಸಿದ ಕಳ್ಳ; ಅವನ್ಯಾರೆಂಬುದು ಮಾತ್ರ ಗೊತ್ತಾಗಿಲ್ಲ

ತನಿಖೆಯ ಮೊದಲ ಹಂತವಾಗಿ ಅಪರಾಧ ವಿಭಾಗದ ಪೊಲೀಸರು, ಶ್ವಾನದಳದೊಂದಿಗೆ ರೈತನ ಮನೆಯ ಬಳಿ ತೆರಳಿದ್ದರು. ಈ ಎಲ್ಲ ಚಟುವಟಿಕೆಗಳ ಮೇಲೆ ಕಳ್ಳ ಕಣ್ಣಿಟ್ಟಿದ್ದ. ಯಾವಾಗ ಶ್ವಾನದಳ ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿತೋ, ಆತ ಅಕ್ಷರಶಃ ಹೆದರಿದ್ದ.

ಪೊಲೀಸ್ ಶ್ವಾನಗಳಿಗೆ ಹೆದರಿ, ಕದ್ದ ಹಣವನ್ನು ಇನ್​​ಸ್ಟಾಲ್​​ಮೆಂಟ್​​ನಲ್ಲಿ ಹಿಂದಿರುಗಿಸಿದ ಕಳ್ಳ; ಅವನ್ಯಾರೆಂಬುದು ಮಾತ್ರ ಗೊತ್ತಾಗಿಲ್ಲ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Mar 24, 2021 | 7:17 PM

Share

ಹೈದರಾಬಾದ್​: ವಾಸನೆಯಿಂದಲೇ ಅಪರಾಧಿಗಳನ್ನು ಪತ್ತೆಹಚ್ಚುವ ಸ್ನಿಫರ್ ಶ್ವಾನಗಳಿಂದ ಅದೆಷ್ಟೋ ಅಪರಾಧ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಹಲವು ತಳಿಯ ನಾಯಿಗಳನ್ನು ಸ್ನಿಫರ್ ಶ್ವಾನಗಳ ವಿಭಾಗಕ್ಕೆ ಸೇರಿಸಲಾಗಿದ್ದು, ಸೈನ್ಯ ಹಾಗೂ ಪೊಲೀಸ್​ ಇಲಾಖೆಯಲ್ಲಿ ಹೆಚ್ಚು ಬಳಕೆಯಾಗುತ್ತವೆ. ಇದೀಗ ಇಂಥ ಪೊಲೀಸ್ ಸ್ನಿಫರ್​ ನಾಯಿಗಳಿಗೆ ಹೆದರಿ ಕಳ್ಳನೊಬ್ಬ ತಾನು ಕದ್ದ ಹಣವನ್ನು ಸದ್ದಿಲ್ಲದೆ ಮರಳಿಸಿದ್ದಾನೆ.

ಈ ಘಟನೆ ನಡೆದದ್ದು ಹೈದರಾಬಾದ್​​ನ ಖಮ್ಮಮ್​ ಜಿಲ್ಲೆಯ ದುಬ್ಬತಾಂಡಾ ಗ್ರಾಮದಲ್ಲಿ. ಕಳ್ಳನೊಬ್ಬ ರೈತ ಗುಗುಲೋತ್ ಲಚ್ಚರಾಮ್ ಮನೆಯಿಂದ 1ಲಕ್ಷ ರೂಪಾಯಿಯನ್ನು ಕಳವು ಮಾಡಿದ್ದ. ಗುಗಲೋತ್​ ಅವರು, ತಮ್ಮ ಮನೆಯಿಂದ ಮಾರ್ಚ್​ 17ರಂದು, 1.7ಲಕ್ಷ ರೂ. ಕಳವಾಗಿದೆ ಎಂದು ದೂರು ನೀಡಿದ್ದರು. ಪೊಲೀಸರು ಮಾ.20ರಿಂದ ತನಿಖೆಯನ್ನೂ ಪ್ರಾರಂಭಿಸಿದ್ದರು.

ಅದರ ಮೊದಲ ಹಂತವಾಗಿ ಅಪರಾಧ ವಿಭಾಗದ ಪೊಲೀಸರು, ಶ್ವಾನದಳದೊಂದಿಗೆ ರೈತನ ಮನೆಯ ಬಳಿ ತೆರಳಿದ್ದರು. ಈ ಎಲ್ಲ ಚಟುವಟಿಕೆಗಳ ಮೇಲೆ ಕಳ್ಳ ಕಣ್ಣಿಟ್ಟಿದ್ದ. ಯಾವಾಗ ಶ್ವಾನದಳ ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿತೋ, ಆತ ಅಕ್ಷರಶಃ ಹೆದರಿದ್ದ. ಮಾರ್ಚ್​ 21ರಂದು, ಅಂದರೆ ಪೊಲೀಸರು ತನಿಖೆ ಶುರು ಮಾಡಿದ ಮರುದಿನವೇ ರೈತ ಲಚ್ಚರಾಮ್ ಮನೆಯೆದುರು 1 ಲಕ್ಷ ರೂ. ಇಟ್ಟು ಹೋಗಿದ್ದ. ಮಾರ್ಚ್​ 22ರಂದು ಉಳಿದ 70,000 ರೂ.ನ್ನೂ ಇಟ್ಟ. ಹಣವನ್ನು ರೈತ ವಾಪಸ್​ ಪಡೆದರೂ, ನಾವು ತನಿಖೆ ಮುಂದುವರಿಸುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ. ಕಳ್ಳ ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: 20 ವಿದೇಶಿ ತಳಿಯ ಶ್ವಾನಗಳ ಪಾಲನೆ: ಬೀದರ್ ರಾಜಕಾರಣಿಯ ಶ್ವಾನ ಪ್ರೀತಿ ಇತರರಿಗೆ ಮಾದರಿ

‘ಮಹಿಳೆಯರು 8ರ ಶೇಪ್​ ಕಳೆದುಕೊಳ್ಳುತ್ತಿದ್ದಾರೆ.. ಸೊಂಟವೆಲ್ಲ ದೊಡ್ಡದಾಗುತ್ತಿದೆ’-ಅಸಭ್ಯ ಕೈಸನ್ನೆಯೊಂದಿಗೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಜಕಾರಣಿ

Published On - 7:15 pm, Wed, 24 March 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ