Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಶ್ವಾನಗಳಿಗೆ ಹೆದರಿ, ಕದ್ದ ಹಣವನ್ನು ಇನ್​​ಸ್ಟಾಲ್​​ಮೆಂಟ್​​ನಲ್ಲಿ ಹಿಂದಿರುಗಿಸಿದ ಕಳ್ಳ; ಅವನ್ಯಾರೆಂಬುದು ಮಾತ್ರ ಗೊತ್ತಾಗಿಲ್ಲ

ತನಿಖೆಯ ಮೊದಲ ಹಂತವಾಗಿ ಅಪರಾಧ ವಿಭಾಗದ ಪೊಲೀಸರು, ಶ್ವಾನದಳದೊಂದಿಗೆ ರೈತನ ಮನೆಯ ಬಳಿ ತೆರಳಿದ್ದರು. ಈ ಎಲ್ಲ ಚಟುವಟಿಕೆಗಳ ಮೇಲೆ ಕಳ್ಳ ಕಣ್ಣಿಟ್ಟಿದ್ದ. ಯಾವಾಗ ಶ್ವಾನದಳ ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿತೋ, ಆತ ಅಕ್ಷರಶಃ ಹೆದರಿದ್ದ.

ಪೊಲೀಸ್ ಶ್ವಾನಗಳಿಗೆ ಹೆದರಿ, ಕದ್ದ ಹಣವನ್ನು ಇನ್​​ಸ್ಟಾಲ್​​ಮೆಂಟ್​​ನಲ್ಲಿ ಹಿಂದಿರುಗಿಸಿದ ಕಳ್ಳ; ಅವನ್ಯಾರೆಂಬುದು ಮಾತ್ರ ಗೊತ್ತಾಗಿಲ್ಲ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on:Mar 24, 2021 | 7:17 PM

ಹೈದರಾಬಾದ್​: ವಾಸನೆಯಿಂದಲೇ ಅಪರಾಧಿಗಳನ್ನು ಪತ್ತೆಹಚ್ಚುವ ಸ್ನಿಫರ್ ಶ್ವಾನಗಳಿಂದ ಅದೆಷ್ಟೋ ಅಪರಾಧ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ. ಹಲವು ತಳಿಯ ನಾಯಿಗಳನ್ನು ಸ್ನಿಫರ್ ಶ್ವಾನಗಳ ವಿಭಾಗಕ್ಕೆ ಸೇರಿಸಲಾಗಿದ್ದು, ಸೈನ್ಯ ಹಾಗೂ ಪೊಲೀಸ್​ ಇಲಾಖೆಯಲ್ಲಿ ಹೆಚ್ಚು ಬಳಕೆಯಾಗುತ್ತವೆ. ಇದೀಗ ಇಂಥ ಪೊಲೀಸ್ ಸ್ನಿಫರ್​ ನಾಯಿಗಳಿಗೆ ಹೆದರಿ ಕಳ್ಳನೊಬ್ಬ ತಾನು ಕದ್ದ ಹಣವನ್ನು ಸದ್ದಿಲ್ಲದೆ ಮರಳಿಸಿದ್ದಾನೆ.

ಈ ಘಟನೆ ನಡೆದದ್ದು ಹೈದರಾಬಾದ್​​ನ ಖಮ್ಮಮ್​ ಜಿಲ್ಲೆಯ ದುಬ್ಬತಾಂಡಾ ಗ್ರಾಮದಲ್ಲಿ. ಕಳ್ಳನೊಬ್ಬ ರೈತ ಗುಗುಲೋತ್ ಲಚ್ಚರಾಮ್ ಮನೆಯಿಂದ 1ಲಕ್ಷ ರೂಪಾಯಿಯನ್ನು ಕಳವು ಮಾಡಿದ್ದ. ಗುಗಲೋತ್​ ಅವರು, ತಮ್ಮ ಮನೆಯಿಂದ ಮಾರ್ಚ್​ 17ರಂದು, 1.7ಲಕ್ಷ ರೂ. ಕಳವಾಗಿದೆ ಎಂದು ದೂರು ನೀಡಿದ್ದರು. ಪೊಲೀಸರು ಮಾ.20ರಿಂದ ತನಿಖೆಯನ್ನೂ ಪ್ರಾರಂಭಿಸಿದ್ದರು.

ಅದರ ಮೊದಲ ಹಂತವಾಗಿ ಅಪರಾಧ ವಿಭಾಗದ ಪೊಲೀಸರು, ಶ್ವಾನದಳದೊಂದಿಗೆ ರೈತನ ಮನೆಯ ಬಳಿ ತೆರಳಿದ್ದರು. ಈ ಎಲ್ಲ ಚಟುವಟಿಕೆಗಳ ಮೇಲೆ ಕಳ್ಳ ಕಣ್ಣಿಟ್ಟಿದ್ದ. ಯಾವಾಗ ಶ್ವಾನದಳ ಅಪರಾಧ ನಡೆದ ಸ್ಥಳಕ್ಕೆ ಭೇಟಿ ನೀಡಿತೋ, ಆತ ಅಕ್ಷರಶಃ ಹೆದರಿದ್ದ. ಮಾರ್ಚ್​ 21ರಂದು, ಅಂದರೆ ಪೊಲೀಸರು ತನಿಖೆ ಶುರು ಮಾಡಿದ ಮರುದಿನವೇ ರೈತ ಲಚ್ಚರಾಮ್ ಮನೆಯೆದುರು 1 ಲಕ್ಷ ರೂ. ಇಟ್ಟು ಹೋಗಿದ್ದ. ಮಾರ್ಚ್​ 22ರಂದು ಉಳಿದ 70,000 ರೂ.ನ್ನೂ ಇಟ್ಟ. ಹಣವನ್ನು ರೈತ ವಾಪಸ್​ ಪಡೆದರೂ, ನಾವು ತನಿಖೆ ಮುಂದುವರಿಸುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ. ಕಳ್ಳ ಯಾರು ಎಂಬುದು ಇನ್ನೂ ಪತ್ತೆಯಾಗಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: 20 ವಿದೇಶಿ ತಳಿಯ ಶ್ವಾನಗಳ ಪಾಲನೆ: ಬೀದರ್ ರಾಜಕಾರಣಿಯ ಶ್ವಾನ ಪ್ರೀತಿ ಇತರರಿಗೆ ಮಾದರಿ

‘ಮಹಿಳೆಯರು 8ರ ಶೇಪ್​ ಕಳೆದುಕೊಳ್ಳುತ್ತಿದ್ದಾರೆ.. ಸೊಂಟವೆಲ್ಲ ದೊಡ್ಡದಾಗುತ್ತಿದೆ’-ಅಸಭ್ಯ ಕೈಸನ್ನೆಯೊಂದಿಗೆ, ವಿವಾದಾತ್ಮಕ ಹೇಳಿಕೆ ನೀಡಿದ ರಾಜಕಾರಣಿ

Published On - 7:15 pm, Wed, 24 March 21

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ