AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಮನೆಯಲ್ಲೇ ಕಳ್ಳತನ ಮಾಡಿ ಕ್ಷಮೆ ಪತ್ರ ಬರೆದಿಟ್ಟ ಖದೀಮ; ಮತ್ತೊಂದೆಡೆ ಕಳ್ಳನಿಗೆ ಮನೆ ಮಾಲೀಕನ ಜಾಣ ಪತ್ರ!

ಗರದ ಪೊಲೀಸ್ನ ಮನೆಯಿಂದ ಬೆಲೆಬಾಳುವ ವಸ್ತುಗಳನ್ನು ಕದ್ದು ಕ್ಷಮೆಯಾಚಿಸುವ ಪತ್ರವೊಂದನ್ನು ಕಳ್ಳ ಬರೆದಿಟ್ಟು ಪರಾರಿಯಾಗಿದ್ದಾನೆ.

ಪೊಲೀಸ್ ಮನೆಯಲ್ಲೇ ಕಳ್ಳತನ ಮಾಡಿ ಕ್ಷಮೆ ಪತ್ರ ಬರೆದಿಟ್ಟ ಖದೀಮ; ಮತ್ತೊಂದೆಡೆ ಕಳ್ಳನಿಗೆ ಮನೆ ಮಾಲೀಕನ ಜಾಣ ಪತ್ರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 07, 2021 | 11:48 AM

Share

ಒಬ್ಬ ವ್ಯಕ್ತಿ ಕಳ್ಳನಾಗಬೇಕೆಂದರೆ ಅದರ ಹಿಂದೆ ಯಾವುದಾದರೂ ಬಲವಾದ ಕಾರಣವಿರುತ್ತೆ ಅನ್ನುತ್ತಾರೆ ಮನಶಾಸ್ತ್ರಜ್ಞರು. ಆದ್ರೆ ಒಮ್ಮೆ ಕಳ್ಳತನ ಮಾಡಿದ ಮೇಲೆ ಅದೇ ಕಸುಬು ಚೆನ್ನಾಗಿದೆ ಎಂದು ಮುಂದುವರೆಸುವವರೇ ಹೆಚ್ಚು. ಆದ್ರೆ ಅವಶ್ಯಕತೆ ನೀಗಿಸಲು ಮೊದಲ ಬಾರಿಗೆ ಪೊಲೀಸ್ ಅಧಿಕಾರಿಯ ಮನೆಯಲ್ಲಿ ಕಳ್ಳತನ ಮಾಡಿದಂತಹ ವಿಚಿತ್ರ ಘಟನೆ ನಡೆದಿದೆ. ಖದೀಮನೊಬ್ಬ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ಬೆಲೆ ಬಾಳುವ ವವಸ್ತುಗಳನ್ನು ಕಳ್ಳತನ ಮಾಡಿ ಪತ್ರ ಬರೆದಿಟ್ಟು ಕ್ಷಮೆ ಕೇಳಿರುವ ಘಟನೆ ಮಧ್ಯಪ್ರದೇಶದ ಭಿಂದ್ ನಗರದಲ್ಲಿ ನಡೆದಿದೆ.

ನಗರದ ಪೊಲೀಸ್​ ಅಧಿಕಾರಿಯ  ಮನೆಯಿಂದ ಬೆಲೆಬಾಳುವ ವಸ್ತುಗಳನ್ನು ಕದ್ದು ಕ್ಷಮೆಯಾಚಿಸುವ ಪತ್ರವೊಂದನ್ನು ಕಳ್ಳ ಬರೆದಿಟ್ಟು ಪರಾರಿಯಾಗಿದ್ದಾನೆ. ಸ್ನೇಹಿತನ ಜೀವ ಉಳಿಸುವ ಸಲುವಾಗಿ ನಾನು ನಿಮ್ಮ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದೇನೆ ಮತ್ತು ಕದ್ದ ಹಣವನ್ನು ಹಿಂದಿರುಗಿಸುತ್ತೇನೆ ಎಂದು ಕಳ್ಳ ತನ್ನ ಪತ್ರದಲ್ಲಿ ಬರೆದಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇನ್ನು ಈ ಬಗ್ಗೆ ಮಾಹಿತಿ ನೀಡಿದ ಕೊತ್ವಾಲ್​ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಕಮಲೇಶ್ ಕಟಾರೆ, ಛತ್ತೀಸ್ ಗಡದಲ್ಲಿ ಕೆಲಸ ಮಾಡುತ್ತಿರುವ ಪೊಲೀಸ್ ಮನೆಯಲ್ಲಿ ಕಳ್ಳತನ ನಡೆದಿದ್ದು, ಅವರ ಕುಟುಂಬ ಭಿಂಡ್​ ನಗರದಲ್ಲಿ ವಾಸಿಸುತ್ತಿದೆ. ಪೊಲೀಸರ ಪತ್ನಿ ಮತ್ತು ಅವರ ಮಕ್ಕಳು ಜೂನ್ 30 ರಂದು ಸಂಬಂಧಿಕರ ಮನೆಗೆ ತೆರಳಿದ್ದರು.

ಸೋಮವಾರ ಹಿಂದಿರುಗಿದಾಗ, ಅವರ ಮನೆಯ ಬೀಗ ಮುರಿದು ಬಿದ್ದಿತ್ತು. ವಸ್ತುಗಳು ಎಲ್ಲೆಡೆ ಹರಡಿದ್ದವು. ಬಳಿಕ ಮನೆಯೊಳಗೆ ಸಿಕ್ಕ ಪತ್ರದಲ್ಲಿ ಕಳ್ಳ, ‘ಕ್ಷಮಿಸಿ ಫ್ರೆಂಡ್, ಇದು ಅನಿವಾರ್ಯವಾಗಿತ್ತು. ನಾನು ಇದನ್ನು ಮಾಡದಿದ್ದರೆ, ನನ್ನ ಸ್ನೇಹಿತನು ತನ್ನ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದನು. ಚಿಂತಿಸಬೇಡಿ, ನಾನು ಹಣವನ್ನು ಪಡೆದ ತಕ್ಷಣ ಕದ್ದ ಹಣವನ್ನು ಹಿಂದಿರುಗಿಸುತ್ತೇನೆ’ ಎಂದು ಕಳ್ಳ ಬರೆದಿದ್ದ.

ಪೊಲೀಸರ ಪ್ರಕಾರ ಬೆಳ್ಳಿ ಮತ್ತು ಚಿನ್ನದ ಆಭರಣಗಳನ್ನು ಕಳ್ಳತನ ಮಾಡಲಾಗಿದೆ ಮತ್ತು ಕುಟುಂಬದ ಕೆಲವು ಪರಿಚಯಸ್ಥರು ಈ ಕೃತ್ಯದಲ್ಲಿ ಭಾಗಿಯಾಗಿರಬಹುದು ಎಂಬ ಶಂಕೆ ಕೂಡ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಕಳ್ಳನಿಗೆ ಮನೆ ಮಾಲೀಕನ ಜಾಣ ಪತ್ರ! ಇನ್ನು ಕಳ್ಳತನಕ್ಕೆ ಸಂಬಂಧಿಸಿದ ಮತ್ತೊಂದು ಘಟನೆಯಲ್ಲಿ, ಮನೆಯ ಮಾಲೀಕ ತನ್ನ ಮನೆಯ ಮುಂದೆ ಕಳ್ಳರಿಗೆ ಸಂದೇಶವನ್ನು ಬಿಟ್ಟಿರುವ ಘಟನೆ ನಡೆದಿದೆ. ರಾಂಚಿಯಲ್ಲಿರುವ ಮನೆಯೊಂದರ ಮನೆ ಮಾಲೀಕ ತಮ್ಮ ಮನೆ ಬಾಗಿಲಿನ ಮುಂದೆ “ಈ ಮನೆಯನ್ನು ಈಗಾಗಲೇ ಕಳ್ಳರು ಗುರಿಯಾಗಿಸಿಕೊಂಡಿದ್ದಾರೆ, ದಯವಿಟ್ಟು ನಿಮ್ಮ ಪ್ರಯತ್ನಗಳನ್ನು ವ್ಯರ್ಥ ಮಾಡಬೇಡಿ” ಎಂದು ಬರೆಯುವ ಮೂಲಕ ಕಳ್ಳರು ಈ ಪ್ರದೇಶದಲ್ಲಿ ಈಗಾಗಲೇ ಕಳ್ಳತನವಾಗಿರುವ ಮನೆಯಿಂದ ದೂರವಿರಿ ಎಂದು ಸಂದೇಶ ಬರೆದಿಟ್ಟಿದ್ದಾರೆ.

ಜಾರ್ಖಂಡ್ ರಾಜಧಾನಿಯ ಪುಂಡಾಗ್ ಪ್ರದೇಶದ ಸ್ಥಳೀಯರು ಹೇಳುವ ಪ್ರಕಾರ ಕಳೆದ ತಿಂಗಳು 10 ದಿನಗಳಲ್ಲಿ ಒಂದು ಡಜನ್ ಮನೆಗಳಲ್ಲಿ ಕಳ್ಳತನ ನಡೆಸಿದ ನಂತರ ಕಳ್ಳರು ಈ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಘಟನೆ ನಡೆದ ಅದೇ ರಾತ್ರಿ, ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಜಿತೇಂದ್ರ ಸಿಂಗ್ ಅವರ ಮನೆಗೆ ಕಳ್ಳರು ನುಗ್ಗಿ ಆಭರಣ, ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿದ್ದಾರೆ, ಹಾಗೂ ಕಳ್ಳರು ಕಳ್ಳತನ ಪ್ರಕರಣವನ್ನು ದಾರಿ ತಪ್ಪಿಸಲು ಬಾಡಿಗೆ ಮನೆಯಲ್ಲಿ ವಾಸಿಸುವ ಮನೋಜ್ ಅಗರ್ವಾಲ್ ಅವರ ಮನೆಯತ್ತ ಗಮನ ಹರಿಸುವಂತೆ ಮಾಡಿದ್ದಾರಂತೆ!

ಇದನ್ನೂ ಓದಿ: ದಾಬಸ್‌ಪೇಟೆಯ 3 ಅಂಗಡಿಗಳಲ್ಲಿ ಸರಣಿ ಕಳ್ಳತನ; ಅಂಗಡಿಗಳ ಶೆಟರ್ ಮುರಿದು ನಗದು ದೋಚಿರುವ ಕಳ್ಳರು

Published On - 11:47 am, Wed, 7 July 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ