AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜಾಮಾಬಾದ್​​ನಲ್ಲಿರುವ ಮನೆಯೊಂದರಿಂದ ನಗದು, ಚಿನ್ನ ಜತೆ ಫ್ರಿಡ್ಜ್​​​ನಲ್ಲಿರಿಸಿದ ಟೊಮೆಟೊ ಕದ್ದ ಕಳ್ಳರು

ದರೋಡೆಕೋರರು ಚಿನ್ನಾಭರಣ, ನಗದು ಜತೆ ಟೊಮೆಟೊ ಕದ್ದುಕೊಂಡು ಹೋಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಪೊಲೀಸರಿಗೆ ದೂರು ನೀಡಿದ ರಫಿ ಚಿನ್ನ, ನಗದು ಜತೆಗೆ ಟೊಮೆಟೊ ಕಳ್ಳತನವಾಗಿದೆ ಎಂದು ನಮೂದಿಸಿರುವುದು ಗಮನಾರ್ಹ.

ನಿಜಾಮಾಬಾದ್​​ನಲ್ಲಿರುವ ಮನೆಯೊಂದರಿಂದ ನಗದು, ಚಿನ್ನ ಜತೆ ಫ್ರಿಡ್ಜ್​​​ನಲ್ಲಿರಿಸಿದ ಟೊಮೆಟೊ ಕದ್ದ ಕಳ್ಳರು
ಟೊಮೆಟೊ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 12, 2023 | 3:02 PM

Share

ದೇಶಾದ್ಯಂತ ಟೊಮೆಟೊಗೆ ಭಾರೀ ಬೇಡಿಕೆ ಇದ್ದು, ಟೊಮೆಟೊ (tomatoes) ಕಳ್ಳತನವಾಗಿರುವ ಬಗ್ಗೆಯೂ ವರದಿಯಾಗುತ್ತಿದೆ. ಇತ್ತೀಚೆಗಷ್ಟೇ ತೆಲಂಗಾಣ (Telangana) ನಿಜಾಮಾಬಾದ್ (Nizamabad) ಜಿಲ್ಲೆಯ ಬೋಧನ್​​​​ನಲ್ಲಿ ಇಂಥದ್ದೇ ವಿಚಿತ್ರ ಘಟನೆ ನಡೆದಿದೆ. ಬೋಧನ್ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರ ರಫಿ ಮನೆಯಲ್ಲಿ ಕಳ್ಳತನ ನಡೆದಿದೆ. ಗೌಡ್ಸ್ ಕಾಲೊನಿಯಲ್ಲಿ ವಾಸವಾಗಿರುವ ರಫಿ ಕುಟುಂಬಸ್ಥರು ಮನೆಗೆ ಬೀಗ ಹಾಕಿ ಸಿದ್ದಿಪೇಟೆಗೆ ತೆರಳಿದ್ದರು. ಈ ವೇಳೆ ಮಧ್ಯರಾತ್ರಿ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ 12 ತೊಲೆ ಬಂಗಾರ ಸೇರಿ 1 ಲಕ್ಷ ರೂ.ನಗದು ಕಳ್ಳತನವಾಗಿದೆ. ಕುಟುಂಬ ಮನೆಗೆ ಹಿಂದಿರುಗಿದಾಗ ಕಳ್ಳತನ ನಡೆದಿರುವುದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಇಷ್ಟೇ ಅಲ್ಲ ಫ್ರಿಡ್ಜ್ ನಲ್ಲಿಟ್ಟಿದ್ದ ಕೆಜಿಗಟ್ಟಲೆ ಟೊಮೆಟೊವನ್ನೂ ಕಳ್ಳರು ತೆಗೆದುಕೊಂಡು ಹೋಗಿದ್ದಾರೆ.

ದರೋಡೆಕೋರರು ಚಿನ್ನಾಭರಣ, ನಗದು ಜತೆ ಟೊಮೆಟೊ ಕದ್ದುಕೊಂಡು ಹೋಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಪೊಲೀಸರಿಗೆ ದೂರು ನೀಡಿದ ರಫಿ ಚಿನ್ನ, ನಗದು ಜತೆಗೆ ಟೊಮೆಟೊ ಕಳ್ಳತನವಾಗಿದೆ ಎಂದು ನಮೂದಿಸಿರುವುದು ಗಮನಾರ್ಹ.

ಇದನ್ನೂ ಓದಿ: Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ

ಟೊಮೆಟೊ ಕೂಡ ನಾಪತ್ತೆಯಾಗಿರುವುದು ತಿಳಿದು ಬೆಚ್ಚಿಬಿದ್ದೆವು. ಅಡುಗೆ ಮಾಡಲು ಫ್ರಿಡ್ಜ್ ತೆರೆದಾಗ ಟೊಮೆಟೊ ಕಾಣೆಯಾಗಿತ್ತು. ಒಂದೆಡೆ ಚಿನ್ನ, ನಗದು ಕಳೆದುಕೊಂಡ ನೋವಿನಲ್ಲಿದ್ದ ನಮಗೆ ಟೊಮೆಟೊ ಕೂಡ ಕಳ್ಳತನವಾಗಿರುವುದು ಅಚ್ಚರಿ ಮೂಡಿಸಿದೆ ಎಂದು ರಫಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Wed, 12 July 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ