AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜಾಮಾಬಾದ್​​ನಲ್ಲಿರುವ ಮನೆಯೊಂದರಿಂದ ನಗದು, ಚಿನ್ನ ಜತೆ ಫ್ರಿಡ್ಜ್​​​ನಲ್ಲಿರಿಸಿದ ಟೊಮೆಟೊ ಕದ್ದ ಕಳ್ಳರು

ದರೋಡೆಕೋರರು ಚಿನ್ನಾಭರಣ, ನಗದು ಜತೆ ಟೊಮೆಟೊ ಕದ್ದುಕೊಂಡು ಹೋಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಪೊಲೀಸರಿಗೆ ದೂರು ನೀಡಿದ ರಫಿ ಚಿನ್ನ, ನಗದು ಜತೆಗೆ ಟೊಮೆಟೊ ಕಳ್ಳತನವಾಗಿದೆ ಎಂದು ನಮೂದಿಸಿರುವುದು ಗಮನಾರ್ಹ.

ನಿಜಾಮಾಬಾದ್​​ನಲ್ಲಿರುವ ಮನೆಯೊಂದರಿಂದ ನಗದು, ಚಿನ್ನ ಜತೆ ಫ್ರಿಡ್ಜ್​​​ನಲ್ಲಿರಿಸಿದ ಟೊಮೆಟೊ ಕದ್ದ ಕಳ್ಳರು
ಟೊಮೆಟೊ
ರಶ್ಮಿ ಕಲ್ಲಕಟ್ಟ
|

Updated on:Jul 12, 2023 | 3:02 PM

Share

ದೇಶಾದ್ಯಂತ ಟೊಮೆಟೊಗೆ ಭಾರೀ ಬೇಡಿಕೆ ಇದ್ದು, ಟೊಮೆಟೊ (tomatoes) ಕಳ್ಳತನವಾಗಿರುವ ಬಗ್ಗೆಯೂ ವರದಿಯಾಗುತ್ತಿದೆ. ಇತ್ತೀಚೆಗಷ್ಟೇ ತೆಲಂಗಾಣ (Telangana) ನಿಜಾಮಾಬಾದ್ (Nizamabad) ಜಿಲ್ಲೆಯ ಬೋಧನ್​​​​ನಲ್ಲಿ ಇಂಥದ್ದೇ ವಿಚಿತ್ರ ಘಟನೆ ನಡೆದಿದೆ. ಬೋಧನ್ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರ ರಫಿ ಮನೆಯಲ್ಲಿ ಕಳ್ಳತನ ನಡೆದಿದೆ. ಗೌಡ್ಸ್ ಕಾಲೊನಿಯಲ್ಲಿ ವಾಸವಾಗಿರುವ ರಫಿ ಕುಟುಂಬಸ್ಥರು ಮನೆಗೆ ಬೀಗ ಹಾಕಿ ಸಿದ್ದಿಪೇಟೆಗೆ ತೆರಳಿದ್ದರು. ಈ ವೇಳೆ ಮಧ್ಯರಾತ್ರಿ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ 12 ತೊಲೆ ಬಂಗಾರ ಸೇರಿ 1 ಲಕ್ಷ ರೂ.ನಗದು ಕಳ್ಳತನವಾಗಿದೆ. ಕುಟುಂಬ ಮನೆಗೆ ಹಿಂದಿರುಗಿದಾಗ ಕಳ್ಳತನ ನಡೆದಿರುವುದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಇಷ್ಟೇ ಅಲ್ಲ ಫ್ರಿಡ್ಜ್ ನಲ್ಲಿಟ್ಟಿದ್ದ ಕೆಜಿಗಟ್ಟಲೆ ಟೊಮೆಟೊವನ್ನೂ ಕಳ್ಳರು ತೆಗೆದುಕೊಂಡು ಹೋಗಿದ್ದಾರೆ.

ದರೋಡೆಕೋರರು ಚಿನ್ನಾಭರಣ, ನಗದು ಜತೆ ಟೊಮೆಟೊ ಕದ್ದುಕೊಂಡು ಹೋಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಪೊಲೀಸರಿಗೆ ದೂರು ನೀಡಿದ ರಫಿ ಚಿನ್ನ, ನಗದು ಜತೆಗೆ ಟೊಮೆಟೊ ಕಳ್ಳತನವಾಗಿದೆ ಎಂದು ನಮೂದಿಸಿರುವುದು ಗಮನಾರ್ಹ.

ಇದನ್ನೂ ಓದಿ: Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ

ಟೊಮೆಟೊ ಕೂಡ ನಾಪತ್ತೆಯಾಗಿರುವುದು ತಿಳಿದು ಬೆಚ್ಚಿಬಿದ್ದೆವು. ಅಡುಗೆ ಮಾಡಲು ಫ್ರಿಡ್ಜ್ ತೆರೆದಾಗ ಟೊಮೆಟೊ ಕಾಣೆಯಾಗಿತ್ತು. ಒಂದೆಡೆ ಚಿನ್ನ, ನಗದು ಕಳೆದುಕೊಂಡ ನೋವಿನಲ್ಲಿದ್ದ ನಮಗೆ ಟೊಮೆಟೊ ಕೂಡ ಕಳ್ಳತನವಾಗಿರುವುದು ಅಚ್ಚರಿ ಮೂಡಿಸಿದೆ ಎಂದು ರಫಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Wed, 12 July 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ