ನಿಜಾಮಾಬಾದ್​​ನಲ್ಲಿರುವ ಮನೆಯೊಂದರಿಂದ ನಗದು, ಚಿನ್ನ ಜತೆ ಫ್ರಿಡ್ಜ್​​​ನಲ್ಲಿರಿಸಿದ ಟೊಮೆಟೊ ಕದ್ದ ಕಳ್ಳರು

ದರೋಡೆಕೋರರು ಚಿನ್ನಾಭರಣ, ನಗದು ಜತೆ ಟೊಮೆಟೊ ಕದ್ದುಕೊಂಡು ಹೋಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಪೊಲೀಸರಿಗೆ ದೂರು ನೀಡಿದ ರಫಿ ಚಿನ್ನ, ನಗದು ಜತೆಗೆ ಟೊಮೆಟೊ ಕಳ್ಳತನವಾಗಿದೆ ಎಂದು ನಮೂದಿಸಿರುವುದು ಗಮನಾರ್ಹ.

ನಿಜಾಮಾಬಾದ್​​ನಲ್ಲಿರುವ ಮನೆಯೊಂದರಿಂದ ನಗದು, ಚಿನ್ನ ಜತೆ ಫ್ರಿಡ್ಜ್​​​ನಲ್ಲಿರಿಸಿದ ಟೊಮೆಟೊ ಕದ್ದ ಕಳ್ಳರು
ಟೊಮೆಟೊ
Follow us
|

Updated on:Jul 12, 2023 | 3:02 PM

ದೇಶಾದ್ಯಂತ ಟೊಮೆಟೊಗೆ ಭಾರೀ ಬೇಡಿಕೆ ಇದ್ದು, ಟೊಮೆಟೊ (tomatoes) ಕಳ್ಳತನವಾಗಿರುವ ಬಗ್ಗೆಯೂ ವರದಿಯಾಗುತ್ತಿದೆ. ಇತ್ತೀಚೆಗಷ್ಟೇ ತೆಲಂಗಾಣ (Telangana) ನಿಜಾಮಾಬಾದ್ (Nizamabad) ಜಿಲ್ಲೆಯ ಬೋಧನ್​​​​ನಲ್ಲಿ ಇಂಥದ್ದೇ ವಿಚಿತ್ರ ಘಟನೆ ನಡೆದಿದೆ. ಬೋಧನ್ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರ ರಫಿ ಮನೆಯಲ್ಲಿ ಕಳ್ಳತನ ನಡೆದಿದೆ. ಗೌಡ್ಸ್ ಕಾಲೊನಿಯಲ್ಲಿ ವಾಸವಾಗಿರುವ ರಫಿ ಕುಟುಂಬಸ್ಥರು ಮನೆಗೆ ಬೀಗ ಹಾಕಿ ಸಿದ್ದಿಪೇಟೆಗೆ ತೆರಳಿದ್ದರು. ಈ ವೇಳೆ ಮಧ್ಯರಾತ್ರಿ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ 12 ತೊಲೆ ಬಂಗಾರ ಸೇರಿ 1 ಲಕ್ಷ ರೂ.ನಗದು ಕಳ್ಳತನವಾಗಿದೆ. ಕುಟುಂಬ ಮನೆಗೆ ಹಿಂದಿರುಗಿದಾಗ ಕಳ್ಳತನ ನಡೆದಿರುವುದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಇಷ್ಟೇ ಅಲ್ಲ ಫ್ರಿಡ್ಜ್ ನಲ್ಲಿಟ್ಟಿದ್ದ ಕೆಜಿಗಟ್ಟಲೆ ಟೊಮೆಟೊವನ್ನೂ ಕಳ್ಳರು ತೆಗೆದುಕೊಂಡು ಹೋಗಿದ್ದಾರೆ.

ದರೋಡೆಕೋರರು ಚಿನ್ನಾಭರಣ, ನಗದು ಜತೆ ಟೊಮೆಟೊ ಕದ್ದುಕೊಂಡು ಹೋಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಪೊಲೀಸರಿಗೆ ದೂರು ನೀಡಿದ ರಫಿ ಚಿನ್ನ, ನಗದು ಜತೆಗೆ ಟೊಮೆಟೊ ಕಳ್ಳತನವಾಗಿದೆ ಎಂದು ನಮೂದಿಸಿರುವುದು ಗಮನಾರ್ಹ.

ಇದನ್ನೂ ಓದಿ: Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ

ಟೊಮೆಟೊ ಕೂಡ ನಾಪತ್ತೆಯಾಗಿರುವುದು ತಿಳಿದು ಬೆಚ್ಚಿಬಿದ್ದೆವು. ಅಡುಗೆ ಮಾಡಲು ಫ್ರಿಡ್ಜ್ ತೆರೆದಾಗ ಟೊಮೆಟೊ ಕಾಣೆಯಾಗಿತ್ತು. ಒಂದೆಡೆ ಚಿನ್ನ, ನಗದು ಕಳೆದುಕೊಂಡ ನೋವಿನಲ್ಲಿದ್ದ ನಮಗೆ ಟೊಮೆಟೊ ಕೂಡ ಕಳ್ಳತನವಾಗಿರುವುದು ಅಚ್ಚರಿ ಮೂಡಿಸಿದೆ ಎಂದು ರಫಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Wed, 12 July 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ