AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜಾಮಾಬಾದ್​​ನಲ್ಲಿರುವ ಮನೆಯೊಂದರಿಂದ ನಗದು, ಚಿನ್ನ ಜತೆ ಫ್ರಿಡ್ಜ್​​​ನಲ್ಲಿರಿಸಿದ ಟೊಮೆಟೊ ಕದ್ದ ಕಳ್ಳರು

ದರೋಡೆಕೋರರು ಚಿನ್ನಾಭರಣ, ನಗದು ಜತೆ ಟೊಮೆಟೊ ಕದ್ದುಕೊಂಡು ಹೋಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಪೊಲೀಸರಿಗೆ ದೂರು ನೀಡಿದ ರಫಿ ಚಿನ್ನ, ನಗದು ಜತೆಗೆ ಟೊಮೆಟೊ ಕಳ್ಳತನವಾಗಿದೆ ಎಂದು ನಮೂದಿಸಿರುವುದು ಗಮನಾರ್ಹ.

ನಿಜಾಮಾಬಾದ್​​ನಲ್ಲಿರುವ ಮನೆಯೊಂದರಿಂದ ನಗದು, ಚಿನ್ನ ಜತೆ ಫ್ರಿಡ್ಜ್​​​ನಲ್ಲಿರಿಸಿದ ಟೊಮೆಟೊ ಕದ್ದ ಕಳ್ಳರು
ಟೊಮೆಟೊ
ರಶ್ಮಿ ಕಲ್ಲಕಟ್ಟ
|

Updated on:Jul 12, 2023 | 3:02 PM

Share

ದೇಶಾದ್ಯಂತ ಟೊಮೆಟೊಗೆ ಭಾರೀ ಬೇಡಿಕೆ ಇದ್ದು, ಟೊಮೆಟೊ (tomatoes) ಕಳ್ಳತನವಾಗಿರುವ ಬಗ್ಗೆಯೂ ವರದಿಯಾಗುತ್ತಿದೆ. ಇತ್ತೀಚೆಗಷ್ಟೇ ತೆಲಂಗಾಣ (Telangana) ನಿಜಾಮಾಬಾದ್ (Nizamabad) ಜಿಲ್ಲೆಯ ಬೋಧನ್​​​​ನಲ್ಲಿ ಇಂಥದ್ದೇ ವಿಚಿತ್ರ ಘಟನೆ ನಡೆದಿದೆ. ಬೋಧನ್ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರ ರಫಿ ಮನೆಯಲ್ಲಿ ಕಳ್ಳತನ ನಡೆದಿದೆ. ಗೌಡ್ಸ್ ಕಾಲೊನಿಯಲ್ಲಿ ವಾಸವಾಗಿರುವ ರಫಿ ಕುಟುಂಬಸ್ಥರು ಮನೆಗೆ ಬೀಗ ಹಾಕಿ ಸಿದ್ದಿಪೇಟೆಗೆ ತೆರಳಿದ್ದರು. ಈ ವೇಳೆ ಮಧ್ಯರಾತ್ರಿ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ 12 ತೊಲೆ ಬಂಗಾರ ಸೇರಿ 1 ಲಕ್ಷ ರೂ.ನಗದು ಕಳ್ಳತನವಾಗಿದೆ. ಕುಟುಂಬ ಮನೆಗೆ ಹಿಂದಿರುಗಿದಾಗ ಕಳ್ಳತನ ನಡೆದಿರುವುದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಇಷ್ಟೇ ಅಲ್ಲ ಫ್ರಿಡ್ಜ್ ನಲ್ಲಿಟ್ಟಿದ್ದ ಕೆಜಿಗಟ್ಟಲೆ ಟೊಮೆಟೊವನ್ನೂ ಕಳ್ಳರು ತೆಗೆದುಕೊಂಡು ಹೋಗಿದ್ದಾರೆ.

ದರೋಡೆಕೋರರು ಚಿನ್ನಾಭರಣ, ನಗದು ಜತೆ ಟೊಮೆಟೊ ಕದ್ದುಕೊಂಡು ಹೋಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಪೊಲೀಸರಿಗೆ ದೂರು ನೀಡಿದ ರಫಿ ಚಿನ್ನ, ನಗದು ಜತೆಗೆ ಟೊಮೆಟೊ ಕಳ್ಳತನವಾಗಿದೆ ಎಂದು ನಮೂದಿಸಿರುವುದು ಗಮನಾರ್ಹ.

ಇದನ್ನೂ ಓದಿ: Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ

ಟೊಮೆಟೊ ಕೂಡ ನಾಪತ್ತೆಯಾಗಿರುವುದು ತಿಳಿದು ಬೆಚ್ಚಿಬಿದ್ದೆವು. ಅಡುಗೆ ಮಾಡಲು ಫ್ರಿಡ್ಜ್ ತೆರೆದಾಗ ಟೊಮೆಟೊ ಕಾಣೆಯಾಗಿತ್ತು. ಒಂದೆಡೆ ಚಿನ್ನ, ನಗದು ಕಳೆದುಕೊಂಡ ನೋವಿನಲ್ಲಿದ್ದ ನಮಗೆ ಟೊಮೆಟೊ ಕೂಡ ಕಳ್ಳತನವಾಗಿರುವುದು ಅಚ್ಚರಿ ಮೂಡಿಸಿದೆ ಎಂದು ರಫಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Wed, 12 July 23

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ