AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಜಾಮಾಬಾದ್​​ನಲ್ಲಿರುವ ಮನೆಯೊಂದರಿಂದ ನಗದು, ಚಿನ್ನ ಜತೆ ಫ್ರಿಡ್ಜ್​​​ನಲ್ಲಿರಿಸಿದ ಟೊಮೆಟೊ ಕದ್ದ ಕಳ್ಳರು

ದರೋಡೆಕೋರರು ಚಿನ್ನಾಭರಣ, ನಗದು ಜತೆ ಟೊಮೆಟೊ ಕದ್ದುಕೊಂಡು ಹೋಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಪೊಲೀಸರಿಗೆ ದೂರು ನೀಡಿದ ರಫಿ ಚಿನ್ನ, ನಗದು ಜತೆಗೆ ಟೊಮೆಟೊ ಕಳ್ಳತನವಾಗಿದೆ ಎಂದು ನಮೂದಿಸಿರುವುದು ಗಮನಾರ್ಹ.

ನಿಜಾಮಾಬಾದ್​​ನಲ್ಲಿರುವ ಮನೆಯೊಂದರಿಂದ ನಗದು, ಚಿನ್ನ ಜತೆ ಫ್ರಿಡ್ಜ್​​​ನಲ್ಲಿರಿಸಿದ ಟೊಮೆಟೊ ಕದ್ದ ಕಳ್ಳರು
ಟೊಮೆಟೊ
ರಶ್ಮಿ ಕಲ್ಲಕಟ್ಟ
|

Updated on:Jul 12, 2023 | 3:02 PM

Share

ದೇಶಾದ್ಯಂತ ಟೊಮೆಟೊಗೆ ಭಾರೀ ಬೇಡಿಕೆ ಇದ್ದು, ಟೊಮೆಟೊ (tomatoes) ಕಳ್ಳತನವಾಗಿರುವ ಬಗ್ಗೆಯೂ ವರದಿಯಾಗುತ್ತಿದೆ. ಇತ್ತೀಚೆಗಷ್ಟೇ ತೆಲಂಗಾಣ (Telangana) ನಿಜಾಮಾಬಾದ್ (Nizamabad) ಜಿಲ್ಲೆಯ ಬೋಧನ್​​​​ನಲ್ಲಿ ಇಂಥದ್ದೇ ವಿಚಿತ್ರ ಘಟನೆ ನಡೆದಿದೆ. ಬೋಧನ್ ಪುರಸಭೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರ ರಫಿ ಮನೆಯಲ್ಲಿ ಕಳ್ಳತನ ನಡೆದಿದೆ. ಗೌಡ್ಸ್ ಕಾಲೊನಿಯಲ್ಲಿ ವಾಸವಾಗಿರುವ ರಫಿ ಕುಟುಂಬಸ್ಥರು ಮನೆಗೆ ಬೀಗ ಹಾಕಿ ಸಿದ್ದಿಪೇಟೆಗೆ ತೆರಳಿದ್ದರು. ಈ ವೇಳೆ ಮಧ್ಯರಾತ್ರಿ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯಲ್ಲಿದ್ದ 12 ತೊಲೆ ಬಂಗಾರ ಸೇರಿ 1 ಲಕ್ಷ ರೂ.ನಗದು ಕಳ್ಳತನವಾಗಿದೆ. ಕುಟುಂಬ ಮನೆಗೆ ಹಿಂದಿರುಗಿದಾಗ ಕಳ್ಳತನ ನಡೆದಿರುವುದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ. ಇಷ್ಟೇ ಅಲ್ಲ ಫ್ರಿಡ್ಜ್ ನಲ್ಲಿಟ್ಟಿದ್ದ ಕೆಜಿಗಟ್ಟಲೆ ಟೊಮೆಟೊವನ್ನೂ ಕಳ್ಳರು ತೆಗೆದುಕೊಂಡು ಹೋಗಿದ್ದಾರೆ.

ದರೋಡೆಕೋರರು ಚಿನ್ನಾಭರಣ, ನಗದು ಜತೆ ಟೊಮೆಟೊ ಕದ್ದುಕೊಂಡು ಹೋಗಿರುವುದು ಸ್ಥಳೀಯರಲ್ಲಿ ಅಚ್ಚರಿ ಮೂಡಿಸಿದೆ. ಪೊಲೀಸರಿಗೆ ದೂರು ನೀಡಿದ ರಫಿ ಚಿನ್ನ, ನಗದು ಜತೆಗೆ ಟೊಮೆಟೊ ಕಳ್ಳತನವಾಗಿದೆ ಎಂದು ನಮೂದಿಸಿರುವುದು ಗಮನಾರ್ಹ.

ಇದನ್ನೂ ಓದಿ: Tomato: ಬೆಲೆ ಏರಿಕೆಯಾದಾಗಿಂದ ಟೊಮೆಟೊವನ್ನು ಕಾಪಾಡಿಕೊಳ್ಳಲು ರೈತರ ಸಾಹಸ: ರಾಜಸ್ಥಾನದಲ್ಲಿ ಒಂದೂವರೆ ಕ್ವಿಂಟಾಲ್ ಕಳ್ಳತನ

ಟೊಮೆಟೊ ಕೂಡ ನಾಪತ್ತೆಯಾಗಿರುವುದು ತಿಳಿದು ಬೆಚ್ಚಿಬಿದ್ದೆವು. ಅಡುಗೆ ಮಾಡಲು ಫ್ರಿಡ್ಜ್ ತೆರೆದಾಗ ಟೊಮೆಟೊ ಕಾಣೆಯಾಗಿತ್ತು. ಒಂದೆಡೆ ಚಿನ್ನ, ನಗದು ಕಳೆದುಕೊಂಡ ನೋವಿನಲ್ಲಿದ್ದ ನಮಗೆ ಟೊಮೆಟೊ ಕೂಡ ಕಳ್ಳತನವಾಗಿರುವುದು ಅಚ್ಚರಿ ಮೂಡಿಸಿದೆ ಎಂದು ರಫಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:38 pm, Wed, 12 July 23

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ