AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ: ಸಿಸಿಟಿವಿಗೆ ಬಣ್ಣ ಬಳಿದು, ಗ್ಯಾಸ್​ ಕಟರ್​ ಬಳಸಿ ಎಟಿಎಂನಲ್ಲಿ ಹಣ ದೋಚಿ ಕಳ್ಳರು ಪರಾರಿ

ಗ್ಯಾಸ್​ ಕಟ್ಟರ್​ನಿಂದ ಎಟಿಎಂ ಕಿಯೋಸ್ಕ್​ ಕತ್ತರಿಸಿ, ಸಿಸಿಟಿವಿಗೆ ಬಣ್ಣ ಬಳಿದು, 5 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದೆಹಲಿಯ ಮೋತಿ ನಗರದಲ್ಲಿ ನಡೆದಿದೆ. ಸುದರ್ಶನ್ ಪಾರ್ಕ್‌ನಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಟಿಎಂ ಕಟ್ ಮಾಡಿ ನಗದು ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ದೆಹಲಿ: ಸಿಸಿಟಿವಿಗೆ ಬಣ್ಣ ಬಳಿದು, ಗ್ಯಾಸ್​ ಕಟರ್​ ಬಳಸಿ ಎಟಿಎಂನಲ್ಲಿ ಹಣ ದೋಚಿ ಕಳ್ಳರು ಪರಾರಿ
Image Credit source: The Hans India
ನಯನಾ ರಾಜೀವ್
|

Updated on: Nov 12, 2023 | 9:26 AM

Share

ಗ್ಯಾಸ್​ ಕಟ್ಟರ್​ನಿಂದ ಎಟಿಎಂ ಕಿಯೋಸ್ಕ್​ ಕತ್ತರಿಸಿ, ಸಿಸಿಟಿವಿಗೆ ಬಣ್ಣ ಬಳಿದು, 5 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದೆಹಲಿಯ ಮೋತಿ ನಗರದಲ್ಲಿ ನಡೆದಿದೆ. ಸುದರ್ಶನ್ ಪಾರ್ಕ್‌ನಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಟಿಎಂ ಕಟ್ ಮಾಡಿ ನಗದು ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಸ್ಥಳ ಪರಿಶೀಲನೆ ನಡೆಸಿದಾಗ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಎಟಿಎಂ ತೆರೆದಿರುವುದು ಕಂಡುಬಂದಿದೆ. ಸಿಸಿಟಿವಿಗೆ ಕಪ್ಪು ಬಣ್ಣ ಎರಚಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಗ್ಯಾಸ್ ಕಟ್ಟರ್ ಬಳಸಿ ಎಟಿಎಂ ತೆರೆದು ಹಣ ದೋಚಿದ್ದಾರೆ, ಮೋತಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ 457/380 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಸರಣಿ ಎಟಿಎಂ ದರೋಡೆಗೆ ಕಾರಣವೆಂದು ಹೇಳಲಾದ ಗ್ಯಾಂಗ್‌ನ ಐವರು ಸದಸ್ಯರನ್ನು ದೆಹಲಿ ಪೊಲೀಸರು ಬಂಧಿಸಿದ ವಾರಗಳ ನಂತರ ಈ ಘಟನೆ ನಡೆದಿದೆ. ಈ ವರ್ಷದ ಆರಂಭದಲ್ಲಿ ಜೂನ್‌ನಲ್ಲಿ, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಎಟಿಎಂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಮೂವರು ಬಾಂಗ್ಲಾದೇಶಿ ವ್ಯಕ್ತಿಗಳನ್ನು ಬಂಧಿಸಲಾಯಿತು.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಟೊಮೆಟೊ ತುಂಬಿದ್ದ ವಾಹನ ಕಳ್ಳತನ ಪ್ರಕರಣ; ತಮಿಳುನಾಡು ಮೂಲದ ಇಬ್ಬರು ಆರೋಪಿಗಳ ಬಂಧನ

ಕಳ್ಳತನವಾದ ಎಟಿಎಂ ತೋಟದಲ್ಲಿ ಹೂತಿರುವುದು ಪತ್ತೆಯಾಗಿದೆ. ಏಪ್ರಿಲ್ 8 ರಂದು ಪುಲ್ವಾಮಾದ ಸರ್ಕಾರಿ ಪದವಿ ಕಾಲೇಜಿನ ಬಳಿ ಅಪರಿಚಿತ ದುಷ್ಕರ್ಮಿಗಳು ಎಟಿಎಂ ಅನ್ನು ಕದ್ದ ಘಟನೆ ನಡೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು (ಎಫ್‌ಐಆರ್ ನಂ. 78/2023) ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಡಿಜಿಟಲ್ ಮತ್ತು ಸಾಂದರ್ಭಿಕ ಪುರಾವೆಗಳನ್ನು ವಿಶ್ಲೇಷಿಸಿದ ನಂತರ ಮತ್ತು ಶಂಕಿತರ ಕೇಂದ್ರೀಕೃತ ಪರೀಕ್ಷೆಗಳನ್ನು ನಡೆಸಿದ ನಂತರ, ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಕಳ್ಳರ ಗುಂಪನ್ನು ಗುರುತಿಸಲಾಯಿತು, ನಂತರ ಬಂಧಿಸಲಾಯಿತುಎಂದು ಪೊಲೀಸರು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ