ದೆಹಲಿ: ಸಿಸಿಟಿವಿಗೆ ಬಣ್ಣ ಬಳಿದು, ಗ್ಯಾಸ್​ ಕಟರ್​ ಬಳಸಿ ಎಟಿಎಂನಲ್ಲಿ ಹಣ ದೋಚಿ ಕಳ್ಳರು ಪರಾರಿ

ಗ್ಯಾಸ್​ ಕಟ್ಟರ್​ನಿಂದ ಎಟಿಎಂ ಕಿಯೋಸ್ಕ್​ ಕತ್ತರಿಸಿ, ಸಿಸಿಟಿವಿಗೆ ಬಣ್ಣ ಬಳಿದು, 5 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದೆಹಲಿಯ ಮೋತಿ ನಗರದಲ್ಲಿ ನಡೆದಿದೆ. ಸುದರ್ಶನ್ ಪಾರ್ಕ್‌ನಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಟಿಎಂ ಕಟ್ ಮಾಡಿ ನಗದು ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ದೆಹಲಿ: ಸಿಸಿಟಿವಿಗೆ ಬಣ್ಣ ಬಳಿದು, ಗ್ಯಾಸ್​ ಕಟರ್​ ಬಳಸಿ ಎಟಿಎಂನಲ್ಲಿ ಹಣ ದೋಚಿ ಕಳ್ಳರು ಪರಾರಿ
Image Credit source: The Hans India

Updated on: Nov 12, 2023 | 9:26 AM

ಗ್ಯಾಸ್​ ಕಟ್ಟರ್​ನಿಂದ ಎಟಿಎಂ ಕಿಯೋಸ್ಕ್​ ಕತ್ತರಿಸಿ, ಸಿಸಿಟಿವಿಗೆ ಬಣ್ಣ ಬಳಿದು, 5 ಲಕ್ಷ ರೂ. ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ದೆಹಲಿಯ ಮೋತಿ ನಗರದಲ್ಲಿ ನಡೆದಿದೆ. ಸುದರ್ಶನ್ ಪಾರ್ಕ್‌ನಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ನಲ್ಲಿ ಎಟಿಎಂ ಕಟ್ ಮಾಡಿ ನಗದು ಕಳ್ಳತನ ಮಾಡಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಸ್ಥಳ ಪರಿಶೀಲನೆ ನಡೆಸಿದಾಗ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಎಟಿಎಂ ತೆರೆದಿರುವುದು ಕಂಡುಬಂದಿದೆ. ಸಿಸಿಟಿವಿಗೆ ಕಪ್ಪು ಬಣ್ಣ ಎರಚಿ ಕಳ್ಳರು ಕೈಚಳಕ ತೋರಿಸಿದ್ದಾರೆ. ಗ್ಯಾಸ್ ಕಟ್ಟರ್ ಬಳಸಿ ಎಟಿಎಂ ತೆರೆದು ಹಣ ದೋಚಿದ್ದಾರೆ, ಮೋತಿ ನಗರ ಪೊಲೀಸ್ ಠಾಣೆಯಲ್ಲಿ ಐಪಿಸಿ 457/380 ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನಗರದಲ್ಲಿ ಸರಣಿ ಎಟಿಎಂ ದರೋಡೆಗೆ ಕಾರಣವೆಂದು ಹೇಳಲಾದ ಗ್ಯಾಂಗ್‌ನ ಐವರು ಸದಸ್ಯರನ್ನು ದೆಹಲಿ ಪೊಲೀಸರು ಬಂಧಿಸಿದ ವಾರಗಳ ನಂತರ ಈ ಘಟನೆ ನಡೆದಿದೆ. ಈ ವರ್ಷದ ಆರಂಭದಲ್ಲಿ ಜೂನ್‌ನಲ್ಲಿ, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಎಟಿಎಂ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಮೂವರು ಬಾಂಗ್ಲಾದೇಶಿ ವ್ಯಕ್ತಿಗಳನ್ನು ಬಂಧಿಸಲಾಯಿತು.

ಮತ್ತಷ್ಟು ಓದಿ: ಬೆಂಗಳೂರಿನಲ್ಲಿ ಟೊಮೆಟೊ ತುಂಬಿದ್ದ ವಾಹನ ಕಳ್ಳತನ ಪ್ರಕರಣ; ತಮಿಳುನಾಡು ಮೂಲದ ಇಬ್ಬರು ಆರೋಪಿಗಳ ಬಂಧನ

ಕಳ್ಳತನವಾದ ಎಟಿಎಂ ತೋಟದಲ್ಲಿ ಹೂತಿರುವುದು ಪತ್ತೆಯಾಗಿದೆ. ಏಪ್ರಿಲ್ 8 ರಂದು ಪುಲ್ವಾಮಾದ ಸರ್ಕಾರಿ ಪದವಿ ಕಾಲೇಜಿನ ಬಳಿ ಅಪರಿಚಿತ ದುಷ್ಕರ್ಮಿಗಳು ಎಟಿಎಂ ಅನ್ನು ಕದ್ದ ಘಟನೆ ನಡೆದಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಪೊಲೀಸರು ಕಾನೂನಿನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು (ಎಫ್‌ಐಆರ್ ನಂ. 78/2023) ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಡಿಜಿಟಲ್ ಮತ್ತು ಸಾಂದರ್ಭಿಕ ಪುರಾವೆಗಳನ್ನು ವಿಶ್ಲೇಷಿಸಿದ ನಂತರ ಮತ್ತು ಶಂಕಿತರ ಕೇಂದ್ರೀಕೃತ ಪರೀಕ್ಷೆಗಳನ್ನು ನಡೆಸಿದ ನಂತರ, ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಕಳ್ಳರ ಗುಂಪನ್ನು ಗುರುತಿಸಲಾಯಿತು, ನಂತರ ಬಂಧಿಸಲಾಯಿತುಎಂದು ಪೊಲೀಸರು ಹೇಳಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us