AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IT Raid: ನಾವು ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ : CPR

ನಾವು ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ ಇದೆ ಎಂದು ಸೆಂಟರ್ ಫಾರ್ ಪಾಲಿಸಿ ರಿಸರ್ಚ್​ ತಿಳಿಸಿದೆ. ಕೆಲವು ಮಾನದಂಡಗಳಿವೆ ಅವುಗಳನ್ನು ಪಾಲಿಸುತ್ತಿದ್ದೇವೆ ಅಷ್ಟೇ, ನಾವು ಯಾವುದೇ ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ

IT Raid: ನಾವು ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ, ಅಧಿಕಾರಿಗಳ ಪ್ರಶ್ನೆಗಳಿಗೆ ಉತ್ತರಿಸುತ್ತೇವೆ : CPR
CPR
TV9 Web
| Edited By: |

Updated on: Sep 09, 2022 | 6:04 PM

Share

ನಾವು ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ ಇದೆ ಎಂದು ಸೆಂಟರ್ ಫಾರ್ ಪಾಲಿಸಿ ರಿಸರ್ಚ್​ ತಿಳಿಸಿದೆ. ಕೆಲವು ಮಾನದಂಡಗಳಿವೆ ಅವುಗಳನ್ನು ಪಾಲಿಸುತ್ತಿದ್ದೇವೆ ಅಷ್ಟೇ, ನಾವು ಯಾವುದೇ ತಪ್ಪು ಮಾಡಿಲ್ಲ ಎನ್ನುವ ವಿಶ್ವಾಸವಿದೆ. ಅವರು ಕೇಳುವ ಯಾವುದೇ ಪ್ರಶ್ನೆಗಳಿಗೆ ನಾವು ಉತ್ತರ ನೀಡಲು ಸಿದ್ಧರಿದ್ದೇವೆ, ಎಂದು ಸಿಪಿಆರ್ ಅಧ್ಯಕ್ಷೆ ಯಾಮಿನಿ ಅಯ್ಯರ್ ಟ್ವೀಟ್ ಮಾಡಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಆದಾಯ ತೆರಿಗೆ ಇಲಾಖೆಯು ದಾಳಿ ನಡೆಸಿತ್ತು, ಈ ಕುರಿತು ಇದೀಗ ಕಚೇರಿ ಹೇಳಿಕೆ ಬಿಡುಗಡೆ ಮಾಡಿದೆ. ಆದಾಯ ತೆರಿಗೆ ಇಲಾಖೆ ಬುಧವಾರ ದೇಶಾದ್ಯಂತ ಎರಡು ಡಜನ್‌ಗೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ.

ಆದಾಯ ತೆರಿಗೆ ಇಲಾಖೆ ತಂಡವು ನೀತಿ ಸಂಶೋಧನಾ ಕೇಂದ್ರದ ಚಿಂತಕರ ಚಾಣಕ್ಯಪುರಿ ಕಚೇರಿಗೂ ತಲುಪಿದೆ. ತಂಡ ಇಲ್ಲಿ ಹುಡುಕಾಟ ನಡೆಸಿದೆ. ಮೂಲಗಳನ್ನು ನಂಬುವುದಾದರೆ, ಈ ದಾಳಿಯು ರಾಜಕೀಯ ಪಕ್ಷಗಳಿಗೆ ದೇಣಿಗೆ ಸಂಗ್ರಹಿಸಿದವರಿಗೆ ಸಂಬಂಧಿಸಿದೆ. ತೆರಿಗೆ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಆದಾಗ್ಯೂ, ದಾಳಿಗಳ ಬಗ್ಗೆ ನೀತಿ ಸಂಶೋಧನಾ ಕೇಂದ್ರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜಕೀಯ ಪಕ್ಷಗಳಿಗೆ ದೇಣಿಗೆಯ ನೆಪದಲ್ಲಿ ಕೋಟ್ಯಂತರ ರೂಪಾಯಿ ತೆರಿಗೆ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ ಎನ್ನುತ್ತವೆ ಮೂಲಗಳು.

ಇದು ಮೂಲತಃ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುವ ಹೆಸರಿನಲ್ಲಿ ಮಾಡಿರುವ ವಂಚನೆ ಮತ್ತು ತೆರಿಗೆ ವಂಚನೆ ಎಂದು ಮೂಲಗಳು ತಿಳಿಸಿವೆ. ದೆಹಲಿ, ಹರಿಯಾಣ, ಮಹಾರಾಷ್ಟ್ರ, ಗುಜರಾತ್, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಸೇರಿದಂತೆ ಇತರ ರಾಜ್ಯಗಳಲ್ಲಿ ಈ ದಾಳಿಗಳನ್ನು ನಡೆಸಲಾಯಿತು.

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ