AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಂದಮ್ಮನ ಪ್ರಾಣ ತೆಗೆದ ಸ್ಮಾರ್ಟ್‌ಫೋನ್, ವಿಡಿಯೋ ಗೇಮ್ ಆಡುತ್ತಿದ್ದ ವೇಳೆ ಸ್ಫೋಟ

ಫೋನ್ ಚಾರ್ಜ್ ಮಾಡುವಾಗ ಗೇಮ್ ಆಡುವುದು, ಫೋನ್ ನಲ್ಲಿ ಮಾತನಾಡುವುದು, ಬಿಸಿಯಾಗಿರುವಾಗ ಫೋನ್ ಬಳಸುವುದು ಅಪಾಯಕರ ಎಂದು ತಜ್ಞರು ಎಚ್ಚರಿಸಿದ್ದಾರೆ.

ಕಂದಮ್ಮನ ಪ್ರಾಣ ತೆಗೆದ ಸ್ಮಾರ್ಟ್‌ಫೋನ್, ವಿಡಿಯೋ ಗೇಮ್ ಆಡುತ್ತಿದ್ದ ವೇಳೆ ಸ್ಫೋಟ
ಕಂದಮ್ಮನ ಪ್ರಾಣ ತೆಗೆದ ಸ್ಮಾರ್ಟ್‌ಫೋನ್
Follow us
ಸಾಧು ಶ್ರೀನಾಥ್​
|

Updated on:Apr 25, 2023 | 11:14 AM

ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಭೀಕರ ಅನಾಹುತ ನಡೆದಿದೆ. ಮೊಬೈಲ್​​ ಫೋನ್ (mobile) ಸ್ಫೋಟಗೊಂಡು ಮಗು (girl) ಸಾವನ್ನಪ್ಪಿದೆ. ಸೋಮವಾರ ರಾತ್ರಿ ತ್ರಿಶೂರಿನ (Kerala) ತಿರುವಿಲ್ವಾಮಲದಲ್ಲಿ ಈ ಘಟನೆ ನಡೆದಿದೆ. ಚಾರ್ಜ್ ಮಾಡಿ ಗೇಮ್ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಸ್ಮಾರ್ಟ್ ಫೋನ್ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ಪಟ್ಟಿಪರಂಬುವಿನ ಆದಿತ್ಯಶ್ರೀ ಎಂಬ 8 ವರ್ಷದ ಬಾಲಕಿ ಪ್ರಾಣ ಕಳೆದುಕೊಂಡಿದ್ದಾಳೆ (death) ಎಂದು ಸ್ಥಳೀಯರು ತಿಳಿಸಿದ್ದಾರೆ.

ಗ್ಯಾಪ್ ಇಲ್ಲದೇ ಸುದೀರ್ಘ ಕಾಲ ಆಟ ಆಡುವಾಗ ಫೋನ್ ಬಿಸಿಯಾಗುತ್ತದೆ ಎನ್ನಲಾಗಿದೆ. ಬೇಸಿಗೆಯಾಗಿದ್ದರಿಂದ ಬಿಸಿಲಿನ ತಾಪ ಹೆಚ್ಚಿ ಫೋನ್ ಸ್ಫೋಟಗೊಂಡಿದೆ. ಆದಿತ್ಯಶ್ರೀ ಸಾವಿನಿಂದ ಆಕೆಯ ಕುಟುಂಬ ದುಃಖದ ಮಡುವಿನಲ್ಲಿದೆ.

Also read:  ಬಾಲ್ಯ ಸ್ನೇಹಿತರು 15 ವರ್ಷದಿಂದ ಪ್ರೀತಿಸ್ತಿದ್ದರು, ಮದುವೆಯಾದ ಮೇಲೆ ಹುಡುಗಿ ಆತ್ಮಹತ್ಯೆ ಮಾಡಿಕೊಂಡಳು, ಹುಟ್ಟು ಶ್ರೀಮಂತ

ಸೋಮವಾರ ರಾತ್ರಿ 10.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆದಿತ್ಯಶ್ರೀ ತಿರುವಿಲ್ವಾಮಲದ ಕ್ರೈಸ್ಟ್ ನ್ಯೂ ಲೈಫ್ ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದಾಳೆ. ಘಟನೆ ಸಂಬಂಧ ಪಜ್ಜನ್ನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಂಗಳವಾರ ವಿಧಿವಿಜ್ಞಾನ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆಯೂ ಹಲವು ಪ್ರದೇಶಗಳಲ್ಲಿ ಮೊಬೈಲ್ ಸ್ಫೋಟಗೊಂಡ ಘಟನೆಗಳು ಬೆಳಕಿಗೆ ಬಂದಿರುವುದು ಗೊತ್ತಾಗಿದೆ. ಫೋನ್ ಚಾರ್ಜ್ ಮಾಡುವಾಗ ಗೇಮ್ ಆಡುವುದು, ಫೋನ್ ನಲ್ಲಿ ಮಾತನಾಡುವುದು, ಬಿಸಿಯಾಗಿರುವಾಗ ಫೋನ್ ಬಳಸುವುದು ಅಪಾಯಕರ ಎಂದು ತಜ್ಞರು ಎಚ್ಚರಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:33 am, Tue, 25 April 23

ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ಮಂಗಳಮುಖಿಯರ ಅಶ್ಲೀಲ ಡ್ಯಾನ್ಸ್, ಕೆಂಪೇಗೌಡರ ಜಯಂತಿಯಲ್ಲಿ ಇದೆಂಥಾ ನೃತ್ಯ...?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?
ನಂದಿನಿ ಸ್ಕೂಟರ್​ಗೆ ಗುದ್ದಿದ ಕಾರು ಓಡಿಸುತ್ತಿದ್ದ ಮಹಿಳೆ ಕುಡಿದಿದ್ದಳೇ?