AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 3ನೇ ಅಲೆ ತಡೆ ಅಸಾಧ್ಯ, ಕೊರೊನಾವೈರಸ್ ಸೋಂಕು ಅಧಿಕ: ಕೇಂದ್ರ ಸರ್ಕಾರ

Coroanavirus Third Wave: ಕೊವಿಡ್ ಮೂರನೇ ಅಲೆಯಲ್ಲಿ ಕೊರೊನಾ ವೈರಸ್ ಪ್ರಸರಣವೂ ಅಧಿಕವಾಗಿರುತ್ತದೆ.ಆದರೆ ಯಾವ ಸಮಯದಲ್ಲಿ ಈ ಅಲೆ ಕಾಣಿಸುತ್ತದೆ ಎಂದು ಹೇಳಲಾಗುವುದಿಲ್ಲ. ಕೊವಿಡ್ ಲಸಿಕೆಗಳು ಈಗ ಇರುವ ಕೊರೊನಾವೈರಸ್ ಪ್ರಬೇಧ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿದೆ .

ಕೊವಿಡ್ 3ನೇ ಅಲೆ ತಡೆ ಅಸಾಧ್ಯ, ಕೊರೊನಾವೈರಸ್ ಸೋಂಕು ಅಧಿಕ: ಕೇಂದ್ರ ಸರ್ಕಾರ
ನೀತಿ ಆಯೋಗದ ಸುದ್ದಿಗೋಷ್ಠಿ
ರಶ್ಮಿ ಕಲ್ಲಕಟ್ಟ
|

Updated on:May 05, 2021 | 7:32 PM

Share

ದೆಹಲಿ: ಕೊವಿಡ್-19 ಮೂರನೇ ಅಲೆ ತಡೆಯಲು ಸಾಧ್ಯವಿಲ್ಲ. ಆ ಹಂತದಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಿಸುವ ವೇಗವೂ ಹೆಚ್ಚು. ಆದರೆ ಯಾವ ಸಮಯದಲ್ಲಿ ಈ ಅಲೆ ಕಾಣಿಸುತ್ತದೆ ಎಂದು ಹೇಳಲಾಗುವುದಿಲ್ಲ. ಕೊವಿಡ್ ಲಸಿಕೆಗಳು ಈಗ ಇರುವ ಕೊರೊನಾವೈರಸ್ ಪ್ರಭೇದಗಳ ವಿರುದ್ಧ ಹೋರಾಡುವ ಸಾಮರ್ಥ್ಯ ಹೊಂದಿವೆ. ಹೊಸ ಪ್ರಭೇದವು ಭಾರತ ಸೇರಿದಂತೆ ಜಗತ್ತಿನಾದ್ಯಂತ ಕಾಣಿಸಿಕೊಳ್ಳಲಿದೆ. ಆದರೆ ಪ್ರಸರಣ ಅಧಿಕವಾಗಿರುತ್ತದೆ. ಮುಂಬರುವ ದಿನಗಳಲ್ಲಿ ರೋಗನಿರೋಧಕ ತಪ್ಪಿಸುವ ರೂಪಾಂತರಿಗಳು ಮತ್ತು ರೋಗದ ತೀವ್ರತೆಯನ್ನು ಕಡಿಮೆ ಅಥವಾ ಹೆಚ್ಚಿಸಬಹುದು ಎಂದು ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ.ವಿಜಯ್ ರಾಘವನ್ ಹೇಳಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನೀತಿ ಆಯೋಗದ ಸದಸ್ಯ ಡಾ.ವಿ.ಕೆ. ಪೌಲ್, ಪ್ರಕರಣಗಳು ಹೆಚ್ಚಾಗದಂತೆ ತಡೆಯಲು ಲಾಕ್​ಡೌನ್ ಮಾತ್ರ ಪರಿಹಾರವೇ ಎಂದು ಕೇಳಿದಾಗ, ಅಗತ್ಯವಿದ್ದರೆ ಆ ಆಯ್ಕೆಗಳನ್ನು ಚರ್ಚಿಸಲಾಗುತ್ತದೆ. ಪ್ರಸರಣ ಸರಪಳಿಯನ್ನು ನಿಗ್ರಹಿಸಲು ನಿರ್ಬಂಧಗಳನ್ನು ವಿಧಿಸಲು ರಾಜ್ಯಗಳಿಗೆ ಈಗಾಗಲೇ ಮಾರ್ಗಸೂಚಿ ಇದೆ ಎಂದಿದ್ದಾರೆ.  ಅದೇ  ವೇಳೆ ಕೊವಿಡ್ ಪ್ರಾಣಿಗಳ ಮೂಲಕ ಹರಡುತ್ತಿಲ್ಲ, ಇದು ಮನುಷ್ಯನಿಂದ ಮನುಷ್ಯನಿಗೆ ಹರಡುತ್ತದೆ ಎಂದು ಪೌಲ್ ಹೇಳಿದ್ದಾರೆ.

ಹೊಸ ರೂಪಾಂತರಿ  ವೈರಸ್  ಎದುರಿಸಲು ಕೊವಿಡ್  ಲಸಿಕೆಗಳ ನಿಯಮಿತ ಮೇಲ್ವಿಚಾರಣೆ ಅಗತ್ಯವಾಗಿದೆ ಎಂದಿದ್ದಾರೆ ವಿಜಯ್  ರಾಘವನ್.

ಏತನ್ಮಧ್ಯೆ, ಕೊರೊನಾವೈರಸ್ ಪ್ರಕರಣಗಳಲ್ಲಿ ಪ್ರತಿ ದಿನ  ಶೇಕಡಾ 2.4 ರಷ್ಟು ಏರಿಕೆ ಕಂಡುಬಂದಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

“12 ರಾಜ್ಯಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿವೆ, ಏಳು ರಾಜ್ಯಗಳಲ್ಲಿ 50,000 ರಿಂದ ಒಂದು ಲಕ್ಷ ಸಕ್ರಿಯ ಪ್ರಕರಣಗಳಿವೆ ಮತ್ತು 17 ರಾಜ್ಯಗಳಲ್ಲಿ 50,000 ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿವೆ. ಮಹಾರಾಷ್ಟ್ರ, ಕೇರಳ, ಕರ್ನಾಟಕ, ಉತ್ತರ ಪ್ರದೇಶ ಮತ್ತು ಆಂಧ್ರ ಪ್ರದೇಶದಲ್ಲಿ 1.5 ಲಕ್ಷ ಹೆಚ್ಚು ಸಕ್ರಿಯ ಪ್ರಕರಣಗಳಿವೆ.

24 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ  ಶೇಕಡಾ 15 ಕ್ಕಿಂತ ಹೆಚ್ಚು ಕೊವಿಡ್ ಪಾಸಿಟಿವ್  ಪ್ರಕರಣ ವರದಿ ಆಗಿದ್ದು , 10 ರಾಜ್ಯಗಳು ಶೇಕಡಾ 25 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರವನ್ನು  ಹೊಂದಿವೆ. ಮಹಾರಾಷ್ಟ್ರವು ಶೇಕಡಾ 24 ರಷ್ಟು ಪಾಸಿಟಿವಿಟಿ ದರವನ್ನು ಹೊಂದಿದೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ  ಲವ್  ಅಗರ್‌ವಾಲ್ ಹೇಳಿದ್ದಾರೆ.

ಇದನ್ನೂ ಓದಿ:  ಕೊರೊನಾ 3ನೇ ಅಲೆ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್ ಅನಿವಾರ್ಯ, ಈ ಅಂಶಗಳತ್ತ ಗಮನಹರಿಸದಿದ್ದರೆ ಅಪಾಯ: ಏಮ್ಸ್ ನಿರ್ದೇಶಕ ಸೂಚನೆ

(Third wave of Covid infections is inevitable warns Centre Principal Scientific Advisor K VijayRaghavan)

Published On - 7:23 pm, Wed, 5 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ