Sign In

By signing in or creating an account, you agree with Associated Broadcasting Company's Terms & Conditions and Privacy Policy.

10, 12 ನೇ ತರಗತಿಯ ಆಫ್‌ಲೈನ್ ಪರೀಕ್ಷೆ ರದ್ದುಗೊಳಿಸಲು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ನೇತೃತ್ವದ ಪೀಠವು 10 ಮತ್ತು 12 ನೇ ತರಗತಿಯ ಆಫ್‌ಲೈನ್ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿತು.

10, 12 ನೇ ತರಗತಿಯ ಆಫ್‌ಲೈನ್ ಪರೀಕ್ಷೆ ರದ್ದುಗೊಳಿಸಲು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Feb 23, 2022 | 3:47 PM

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE), ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) ಅವಧಿ 2 ಮತ್ತು ಇತರ ಬೋರ್ಡ್ ಪರೀಕ್ಷೆಗಳನ್ನು ಆಫ್‌ಲೈನ್ ಮೋಡ್‌ನಲ್ಲಿ ನಡೆಸುವುದನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಇಂದು (ಬುಧವಾರ ಫೆಬ್ರವರಿ 23ರಂದು ) ಸುಪ್ರೀಂಕೋರ್ಟ್ ಈ ಅರ್ಜಿ ವಿಚಾರಣೆ ನಡೆಸಿದೆ. ನ್ಯಾಯಮೂರ್ತಿ ಎಎಂ ಖಾನ್ವಿಲ್ಕರ್ ನೇತೃತ್ವದ ಪೀಠವು 10 ಮತ್ತು 12 ನೇ ತರಗತಿಯ ಆಫ್‌ಲೈನ್ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಸಲ್ಲಿಸಿದ ಮನವಿಯನ್ನು ವಜಾಗೊಳಿಸಿತು. “ಇದು ರೂಢಿಯಾಗಲು ಸಾಧ್ಯವಿಲ್ಲ. ಅಂತಹ ಅರ್ಜಿಗಳನ್ನು ಪರಿಗಣಿಸುವುದರಿಂದ ವ್ಯವಸ್ಥೆಯಲ್ಲಿ ಹೆಚ್ಚಿನ ಗೊಂದಲ ಉಂಟಾಗುತ್ತದೆ” ಎಂದು ನ್ಯಾಯಮೂರ್ತಿ ಹೇಳಿದರು. “ಅಧಿಕಾರಿಗಳು ಈಗಾಗಲೇ ದಿನಾಂಕಗಳು ಮತ್ತು ಇತರ ವ್ಯವಸ್ಥೆಗಳನ್ನು ಅಂತಿಮಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಅವುಗಳನ್ನು ಅಂತಿಮಗೊಳಿಸಿದ ನಂತರ ಯಾವುದೇ ಸಮಸ್ಯೆಯಿದ್ದರೆ, ನೊಂದವರು ಅಧಿಕಾರಿಗಳನ್ನು ಸಂಪರ್ಕಿಸಬಹುದು” ಎಂದು ಪೀಠ ಹೇಳಿದೆ. ಸುಪ್ರೀಂಕೋರ್ಟ್ ಪೀಠವು ಈ ರೀತಿಯ ಅರ್ಜಿಗಳು ತಪ್ಪುದಾರಿಗೆಳೆಯುವ ಮತ್ತು ವಿದ್ಯಾರ್ಥಿಗಳಿಗೆ ಸುಳ್ಳು ಭರವಸೆಯನ್ನು ನೀಡುತ್ತಿವೆ ಎಂದು ಅಭಿಪ್ರಾಯಪಟ್ಟಿದೆ. ಇದು ಕೇವಲ ಸುಳ್ಳು ಭರವಸೆಗಳನ್ನು ಸೃಷ್ಟಿಸುತ್ತದೆ, ಇದು ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಗೊಂದಲವನ್ನು ಉಂಟುಮಾಡುತ್ತದೆ ಎಂದು ನ್ಯಾಯಮೂರ್ತಿಗಳಾದ ದಿನೇಶ್ ಮಹೇಶ್ವರಿ ಮತ್ತು ಸಿ ಟಿ ರವಿಕುಮಾರ್ ಅವರನ್ನು ಒಳಗೊಂಡ ಪೀಠ ಹೇಳಿದೆ.

“ವಿದ್ಯಾರ್ಥಿಗಳು ತಮ್ಮ ಕೆಲಸವನ್ನು ಮಾಡಲಿ ಮತ್ತು ಅಧಿಕಾರಿಗಳು ಅವರವರ ಕೆಲಸವನ್ನು ಮಾಡಲಿ” ಎಂದು ಪೀಠ ಹೇಳಿದೆ. ಕಾರ್ಯಕರ್ತೆ ಅನುಭಾ ಶ್ರೀವಾಸ್ತವ ಸಹಾಯ್ ಮತ್ತು ಇತರರು ಸಲ್ಲಿಸಿದ ಮನವಿಯನ್ನು ತುರ್ತು ವಿಚಾರಣೆಗಾಗಿ ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿತ್ತು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, 2020 ಮತ್ತು 2021ರಲ್ಲಿ 10 ಮತ್ತು 12ನೇ ತರಗತಿಗಳ ಬೋರ್ಡ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಿದ್ದು, ಈ ವರ್ಷವೂ ಅದೇ ಸಮಸ್ಯೆ ಎದುರಾಗಿದೆ ಎಂದು ಸುಪ್ರೀಂಕೋರ್ಟ್ ಪೀಠಕ್ಕೆ ತಿಳಿಸಿದರು.

10 ಮತ್ತು 12 ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಆಫ್‌ಲೈನ್ ಮೋಡ್‌ನಲ್ಲಿ ನಡೆಸಲು ಪ್ರಸ್ತಾಪಿಸಿರುವ ಸಿಬಿಎಸ್ಇ ಮತ್ತು ಇತರ ಶಿಕ್ಷಣ ಮಂಡಳಿಗಳಿಗೆ ಇತರ ಮೌಲ್ಯಮಾಪನ ವಿಧಾನಗಳನ್ನು ರೂಪಿಸಲು ನಿರ್ದೇಶನಗಳನ್ನು ಮನವಿ ಕೇಳಿದೆ. 15 ಕ್ಕೂ ಹೆಚ್ಚು ರಾಜ್ಯಗಳ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳು ಸಲ್ಲಿಸಿದ ಮನವಿಯು ಮುಂಬರುವ ಬೋರ್ಡ್ ಪರೀಕ್ಷೆಗಳಿಗೆ ಪರ್ಯಾಯ ಮೌಲ್ಯಮಾಪನ ವಿಧಾನವನ್ನು ಕೋರಿದೆ.

ಕಳೆದ ವರ್ಷ ಸಿಬಿಎಸ್ಇ ಮತ್ತು ಸಿಐಎಸ್​​ಸಿಇ ಸೇರಿದಂತೆ ಬಹುತೇಕ ಎಲ್ಲಾ ರಾಜ್ಯ ಮತ್ತು ಕೇಂದ್ರ ಶಿಕ್ಷಣ ಮಂಡಳಿಗಳು ಕೊವಿಡ್-19 ಎರಡನೇ ತರಂಗದಿಂದಾಗಿ 10 ಮತ್ತು 12 ನೇ ತರಗತಿಯ ಅಂತಿಮ ಪರೀಕ್ಷೆಗಳನ್ನು ರದ್ದುಗೊಳಿಸಬೇಕಾಗಿತ್ತು. ಅದೇ ವೇಳೆ ಮೌಲ್ಯಮಾಪನದ ಪರ್ಯಾಯ ವಿಧಾನಗಳನ್ನು ಅನುಸರಿಸಬೇಕಾಗಿತ್ತು. ಆದಾಗ್ಯೂ, ಸಿಬಿಎಸ್ಇ ಮತ್ತು ಸಿಐಎಸ್​​ಸಿಇ ಮತ್ತು ಇತರ ಕೆಲವು ರಾಜ್ಯ ಮಂಡಳಿಗಳು 2021-22 ಕ್ಕೆ ಎರಡು ಅವಧಿಯ ಬೋರ್ಡ್ ಪರೀಕ್ಷಾ ವ್ಯವಸ್ಥೆಯೊಂದಿಗೆ ಹೋಗಲು ನಿರ್ಧರಿಸಿವೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್10 ಮತ್ತು 12 ನೇ ತರಗತಿಯ 2 ನೇ ಅವಧಿಯ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ. ಅವಧಿ 2 ಪರೀಕ್ಷೆಗಳು ಏಪ್ರಿಲ್ 26 ರಿಂದ ನಡೆಯಲಿದೆ. ಏತನ್ಮಧ್ಯೆ, ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ ಐಸಿಎಸ್ಇ 10 ನೇ ತರಗತಿ ಮತ್ತು ಐಎಸ್ಸಿ12 ನೇ ತರಗತಿ ಪರೀಕ್ಷೆಯನ್ನು ಏಪ್ರಿಲ್ ಕೊನೆಯ ವಾರದಲ್ಲಿ ನಡೆಸುವ ಸಾಧ್ಯತೆಯಿದೆ. ವಿವರವಾದ ವೇಳಾಪಟ್ಟಿ, ಸಿಐಎಸ್‌ಸಿಇ ಹೇಳಿಕೆಯಲ್ಲಿ ತಿಳಿಸಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು.

ಇದನ್ನೂ ಓದಿ: Karnataka Hijab Hearing Live: ಹಿಜಾಬ್ ವಿವಾದ; ಕೋರ್ಟ್ ವಿಚಾರಣೆ ಆರಂಭ

Published On - 3:19 pm, Wed, 23 February 22

ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ