Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀತಗಾಳಿಗೆ ಥಂಡಾ ಹೊಡೆದ ರಾಷ್ಟ್ರ ರಾಜಧಾನಿ, ಚಳಿ ಜೊತೆ ಮಳೆಯ ಆತಂಕ!

ದೆಹಲಿ: ಶೀತಗಾಳಿ ಎಲ್ಲೆಲ್ಲೂ ಬೀಸುತ್ತಿದೆ. ಚಳಿಯ ಅಬ್ಬರಕ್ಕೆ ದಕ್ಷಿಣ ಭಾರತ ಮಾತ್ರವಲ್ಲ, ಉತ್ತರ ಭಾರತವು ನಲುಗಿಹೋಗಿದೆ. ಬೆಳ್ಳಂಬೆಳಗ್ಗೆ ಮನೆ ಹೊರಗೆ ಕಾಲಿಡೋದು ಬಿಡಿ, ಹಾಸಿಗೆಯಿಂದ ಎದ್ದೇಳೋದಕ್ಕೂ ಜನರು ಯೋಚನೆ ಮಾಡುವಷ್ಟು ಪರಿಸ್ಥಿತಿ ಬಿಗಡಾಯಿಸಿದೆ. ಹಾಗಾದ್ರೆ, ಅಲ್ಲಿನ ಪರಿಸ್ಥಿತಿ ಹೇಗಿದೆ, ಜನಜೀವನ ಹೇಗಿದೆ ಅನ್ನೋದನ್ನ ನೋಡೋಣ ಬನ್ನಿ. ಮಂಜು ಮುಸುಕಿದ ವಾತಾವರಣ. ಮೇಲೆ ಏಳೋಕೂ ಯೋಚನೆ ಮಾಡುವಷ್ಟು ಬಿಗಡಾಯಿಸಿರುವ ಪರಿಸ್ಥಿತಿ. ಅಂದಹಾಗೆ ಇದು ಅಂಟಾರ್ಟಿಕದ್ದೋ, ಹಿಮಾಲಯದ್ದೋ ಪರಿಸ್ಥಿತಿ ಅಲ್ಲ. ಉತ್ತರದಲ್ಲಿ ಬೀಸುತ್ತಿರುವ ಶೀತಗಾಳಿಯ ಪರಿಣಾಮ ಇದು. ರಾಷ್ಟ್ರ ರಾಜಧಾನಿಯ […]

ಶೀತಗಾಳಿಗೆ ಥಂಡಾ ಹೊಡೆದ ರಾಷ್ಟ್ರ ರಾಜಧಾನಿ, ಚಳಿ ಜೊತೆ ಮಳೆಯ ಆತಂಕ!
Follow us
ಸಾಧು ಶ್ರೀನಾಥ್​
|

Updated on:Dec 28, 2019 | 12:12 PM

ದೆಹಲಿ: ಶೀತಗಾಳಿ ಎಲ್ಲೆಲ್ಲೂ ಬೀಸುತ್ತಿದೆ. ಚಳಿಯ ಅಬ್ಬರಕ್ಕೆ ದಕ್ಷಿಣ ಭಾರತ ಮಾತ್ರವಲ್ಲ, ಉತ್ತರ ಭಾರತವು ನಲುಗಿಹೋಗಿದೆ. ಬೆಳ್ಳಂಬೆಳಗ್ಗೆ ಮನೆ ಹೊರಗೆ ಕಾಲಿಡೋದು ಬಿಡಿ, ಹಾಸಿಗೆಯಿಂದ ಎದ್ದೇಳೋದಕ್ಕೂ ಜನರು ಯೋಚನೆ ಮಾಡುವಷ್ಟು ಪರಿಸ್ಥಿತಿ ಬಿಗಡಾಯಿಸಿದೆ. ಹಾಗಾದ್ರೆ, ಅಲ್ಲಿನ ಪರಿಸ್ಥಿತಿ ಹೇಗಿದೆ, ಜನಜೀವನ ಹೇಗಿದೆ ಅನ್ನೋದನ್ನ ನೋಡೋಣ ಬನ್ನಿ.

ಮಂಜು ಮುಸುಕಿದ ವಾತಾವರಣ. ಮೇಲೆ ಏಳೋಕೂ ಯೋಚನೆ ಮಾಡುವಷ್ಟು ಬಿಗಡಾಯಿಸಿರುವ ಪರಿಸ್ಥಿತಿ. ಅಂದಹಾಗೆ ಇದು ಅಂಟಾರ್ಟಿಕದ್ದೋ, ಹಿಮಾಲಯದ್ದೋ ಪರಿಸ್ಥಿತಿ ಅಲ್ಲ. ಉತ್ತರದಲ್ಲಿ ಬೀಸುತ್ತಿರುವ ಶೀತಗಾಳಿಯ ಪರಿಣಾಮ ಇದು.

ರಾಷ್ಟ್ರ ರಾಜಧಾನಿಯ ತಾಪಮಾನ 2.4 ಡಿಗ್ರಿ..! ರಾಷ್ಟ್ರ ರಾಜಧಾನಿ ತೀವ್ರ ಚಳಿಗೆ ತತ್ತರಿಸಿದೆ. ಶೀತಗಾಳಿ ಪರಿಣಾಮ ಜನ ಮನೆಯಿಂದ ಹೊರ ಬರೋದಕ್ಕೂ ಚಿಂತೆ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಇಷ್ಟುದಿನ ಮಾಲಿನ್ಯದಿಂದ ತತ್ತರಿಸಿದ್ದ ದೆಹಲಿಯಲ್ಲಿ ಚಳಿ ಆರ್ಭಟ ಬಲು ಜೋರಾಗಿದೆ. ದೆಹಲಿಯಲ್ಲಿ ಇಂದು ಕನಿಷ್ಠ ತಾಪಮಾನ 2.4 ಡಿಗ್ರಿಗೆ ತಲುಪುವ ಮುಖೇನ, ರಾಷ್ಟ್ರ ರಾಜಧಾನಿಯ ನಿವಾಸಿಗಳು ಗಡಗಡ ನಡುಗುವಂತಾಗಿತ್ತು.

ಚಳಿ ಜೊತೆ ಶುರುವಾಯ್ತು ಭಾರಿ ಮಳೆ ಆತಂಕ..! ಇದೀಗ ಶೀತಗಾಳಿ ಜೊತೆಯಲ್ಲೇ, ದೆಹಲಿಯಲ್ಲಿ ಭಾರಿ ಮಳೆಯ ಆತಂಕ ಶುರುವಾಗಿದೆ. ಅಂದಹಾಗೆ ಪಶ್ಚಿಮ ಹಿಮಾಲಯದಿಂದ ಮಳೆ ಮಾರುತ ಬೀಸಲಿದ್ದು, ಡಿಸೆಂಬರ್ 31ರಿಂದ ಜನವರಿ 1ರ ನಡುವೆ ದೆಹಲಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಂಭವವಿದೆ ಅಂತಾ ಹವಾಮಾನ ಇಲಾಖೆ ಎಚ್ಚರಿಸಿದೆ. ಹೀಗಾಗಿ, ಎಚ್ಚರಿಕೆಯಿಂದ ಇರುವಂತೆ ಜನರಿಗೆ ಮುನ್ಸೂಚನೆಯನ್ನೂ ನೀಡಲಾಗಿದೆ.

ಒಟ್ನಲ್ಲಿ ತೀವ್ರವಾದ ವಾಯುಮಾಲಿನ್ಯ ಹಾಗೂ ಕೆಲ ತಿಂಗಳ ಹಿಂದೆ ಸುರಿದ ಭಾರಿ ಮಳೆಯಿಂದಾಗಿ ತತ್ತರಿಸಿದ್ದ ದೆಹಲಿ ನಿವಾಸಿಗಳಿಗೆ ಹೊಸ ತಲೆನೋವು ಶುರುವಾಗಿದೆ. ಎದೆ ನಡುಗಿಸುವ ಶೀತಗಾಳಿಯಿಂದ ಜನರು ಬೆಚ್ಚಿಬಿದ್ದಿದ್ದು, ಮುಂದಿನ ಪರಿಸ್ಥಿತಿಗೆ ಹೇಗೆ ಅನ್ನೋ ಚಿಂತೆ ಶುರುವಾಗಿದೆ. ಇದಕ್ಕೆಲ್ಲಾ ಆ ಪ್ರಕೃತಿ ಮಾತೆಯೇ ಉತ್ತರ ನೀಡಬೇಕಿದೆ.

Published On - 7:43 am, Sat, 28 December 19

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ