AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಶನ್ ಅನಿಕಾ: 20 ದಿನಗಳಿಂದ NCB ಅಧಿಕಾರಿಗಳ ಗೌಪ್ಯ ಕಾರ್ಯಾಚರಣೆ ಹೀಗೆ ನಡೆದಿತ್ತು..

ಬೆಂಗಳೂರು:ಇಡೀ ಸ್ಯಾಂಡಲ್​ವುಡ್​ಅನ್ನೇ ತಲ್ಲಣಗೊಳಿಸಿರುವ ಡ್ರಗ್ಸ್ ಪ್ರಕರಣ, ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಡ್ರಗ್ ಡೀಲರ್​ ಅನಿಕಾಳನ್ನು ಖೆಡ್ಡಾಕ್ಕೆ ಕೆಡವಲು NCB ಯಿಂದ 20 ದಿನಗಳ ‘ಆಪರೇಷನ್ ಅನಿಕಾ’ ಕಾರ್ಯಾಚರಣೆ ನಡೆದಿತ್ತು ಎನ್ನಲಾಗಿದೆ. ಮುಂಬೈ NCB ವಲಯಾಧಿಕಾರಿ ಉಗಮ್ ಧನ್ ಚರಣ್ ಹಾಗೂ ಬೆಂಗಳೂರು NCB ವಲಯಾಧಿಕಾರಿ ಅಮಿತ್ ಗವಾಟೆ ನೇತೃತ್ವದಲ್ಲಿ ಈ ಕಾರ್ಯಾಚರಣೆ ನೆಡೆದಿದೆ. ಬೆಂಗಳೂರಿನ ಅಧಿಕಾರಿಗಳು ಜುಲೈ 31 ರಂದು ಮಾಡಿದ್ದ ಕಾರ್ಯಾಚರಣೆಯಲ್ಲಿ, ಬೆಂಗಳೂರಿನ ಫಾರಿನ್ ಪೋಸ್ಟ್ ಅಫೀಸ್​ನಲ್ಲಿ 159 ಗ್ರಾಂ MDMA ಮಾತ್ರೆಗಳನ್ನ ಸೀಜ್ […]

ಆಪರೇಶನ್ ಅನಿಕಾ: 20 ದಿನಗಳಿಂದ NCB ಅಧಿಕಾರಿಗಳ ಗೌಪ್ಯ ಕಾರ್ಯಾಚರಣೆ ಹೀಗೆ ನಡೆದಿತ್ತು..
ಸಾಧು ಶ್ರೀನಾಥ್​
|

Updated on: Aug 28, 2020 | 3:23 PM

Share

ಬೆಂಗಳೂರು:ಇಡೀ ಸ್ಯಾಂಡಲ್​ವುಡ್​ಅನ್ನೇ ತಲ್ಲಣಗೊಳಿಸಿರುವ ಡ್ರಗ್ಸ್ ಪ್ರಕರಣ, ದಿನಕ್ಕೊಂದು ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಡ್ರಗ್ ಡೀಲರ್​ ಅನಿಕಾಳನ್ನು ಖೆಡ್ಡಾಕ್ಕೆ ಕೆಡವಲು NCB ಯಿಂದ 20 ದಿನಗಳ ‘ಆಪರೇಷನ್ ಅನಿಕಾ’ ಕಾರ್ಯಾಚರಣೆ ನಡೆದಿತ್ತು ಎನ್ನಲಾಗಿದೆ.

ಮುಂಬೈ NCB ವಲಯಾಧಿಕಾರಿ ಉಗಮ್ ಧನ್ ಚರಣ್ ಹಾಗೂ ಬೆಂಗಳೂರು NCB ವಲಯಾಧಿಕಾರಿ ಅಮಿತ್ ಗವಾಟೆ ನೇತೃತ್ವದಲ್ಲಿ ಈ ಕಾರ್ಯಾಚರಣೆ ನೆಡೆದಿದೆ. ಬೆಂಗಳೂರಿನ ಅಧಿಕಾರಿಗಳು ಜುಲೈ 31 ರಂದು ಮಾಡಿದ್ದ ಕಾರ್ಯಾಚರಣೆಯಲ್ಲಿ, ಬೆಂಗಳೂರಿನ ಫಾರಿನ್ ಪೋಸ್ಟ್ ಅಫೀಸ್​ನಲ್ಲಿ 159 ಗ್ರಾಂ MDMA ಮಾತ್ರೆಗಳನ್ನ ಸೀಜ್ ಮಾಡಿದ್ದರು.

ಇದೇ ಮಾಹಿತಿ ಆಧಾರದ ಮೇಲೆ ಆಗಸ್ಟ್ 10 ರಂದು ಮುಂಬೈನ ಎರಡು ಕಡೆ NCB ದಾಳಿ ಮಾಡಿತ್ತು. ಈ ದಾಳಿಯಲ್ಲಿ ಎಚ್.ಎ. ಚೌಧರಿ ಹಾಗೂ ಆರ್ ಭಾತ್ರಿ ಎಂಬ ದಂಪತಿಯನ್ನು ಅಧಿಕಾರಿಗಳು ಬಂಧಿಸಿದರು. ಇದೇ ದಂಪತಿ ಭಾರತದ ಬಹುತೇಕ ನಗರಗಳ ಪ್ರತಿಷ್ಠಿತರ ಪಾರ್ಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು ಎಂಬುದು ತನಿಖೆಯಿಂದ ಬಯಲಾಗಿತ್ತು.

ಇವರ ಮಾಹಿತಿ ಅಧಾರದ ಮೇಲೆ ರೆಹಮಾನ್ ಎಂಬಾತನನ್ನ ಮುಂಬೈನಲ್ಲಿ NCB ತಂಡ ಬಂಧಿಸಿತ್ತು. ನಂತರ ಆಗಸ್ಟ್ 21 ರಂದು ಬೆಂಗಳೂರಿನ ಕಲ್ಯಾಣ ನಗರದ ರಾಯಲ್ ಸ್ಯೂಟ್ಸ್ ಅಪರಾರ್ಟ್ ಮೆಂಟ್ ನಲ್ಲಿ ಕಾರ್ಯಾಚರಣೆ ನೆಡೆಸಿದ NCB ತಂಡ ಅನೂಪ್​ನನ್ನು ಬಂಧಿಸುವುದರ ಜೊತೆಗೆ ಸಾಕಷ್ಟು ಡ್ರಗ್ಸ್ ವಶಕ್ಕೆ ಪಡೆದಿತ್ತು.

ಬಂಧಿತ ಅನೂಪ್ ಮಾಹಿತಿ ಮೇರೆಗೆ ಇಬ್ಬರು ಮಹಿಳಾ ಅಧಿಕಾರಿಗಳೊಂದಿಗೆ ತೆರಳಿದ್ದ NCB ಅಧಿಕಾರಿಗಳು, ದೊಡ್ಡ ಗುಬ್ಬಿಯಲ್ಲಿ ಡ್ರಗ್ಸ್ ಸೇವನೆ ಮಾಡಿದ್ದ ಅನಿಕಾ‌ಳನ್ನು ಬಂಧಿಸಿದರು.ಜೊತೆಗೆ ಮನೆಯಲ್ಲಿದ್ದ ಸಾಕಷ್ಟು ಡ್ರಗ್ಸ್​ನ್ನು ವಶಕ್ಕೆ ಪಡೆದಿದ್ದರು.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ