AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahul Gandhi: ಇದು ದೇಶಕ್ಕಾಗಿ ಹೋರಾಟ, ಯಾವುದೇ ಬೆಲೆ ತೆರಲು ಸಿದ್ಧ: ರಾಹುಲ್ ಗಾಂಧಿ

ದೇಶಕ್ಕಾಗಿ ಹೋರಾಟ, ಯಾವುದೇ ಬೆಲೆ ತೆರಲು ಸಿದ್ಧ ಎಂದು ಅನರ್ಹತೆ ಕುರಿತು ರಾಹುಲ್ ಗಾಂಧಿ ಮೊದಲ ಹೇಳಿಕೆಯನ್ನು ನೀಡಿದ್ದಾರೆ.

Rahul Gandhi: ಇದು ದೇಶಕ್ಕಾಗಿ ಹೋರಾಟ, ಯಾವುದೇ ಬೆಲೆ ತೆರಲು ಸಿದ್ಧ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
ಅಕ್ಷಯ್​ ಪಲ್ಲಮಜಲು​​
|

Updated on:Mar 24, 2023 | 6:30 PM

Share

ದೆಹಲಿ: ದೇಶಕ್ಕಾಗಿ ಹೋರಾಟ, ಯಾವುದೇ ಬೆಲೆ ತೆರಲು ಸಿದ್ಧ ಎಂದು ಅನರ್ಹತೆ ಕುರಿತು ರಾಹುಲ್ ಗಾಂಧಿ(Rahul Gandhi) ಮೊದಲ ಹೇಳಿಕೆಯನ್ನು ನೀಡಿದ್ದಾರೆ. ದೇಶದ ಧ್ವನಿಗಾಗಿ ಹೋರಾಟ, ಯಾವುದೇ ಬೆಲೆ ತೆರಲು ಸಿದ್ಧ ಎಂದು ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹಗೊಂಡಿರುವ ಕುರಿತು ಟ್ವೀಟ್ ಮಾಡಿದ್ದಾರೆ.ಸಂಸತ್ ಸದಸ್ಯತ್ವದಿಂದ ಅನರ್ಹಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಯಾವುದೇ ವೆಚ್ಚವನ್ನು ಭರಿಸಲು ಸಿದ್ಧ ಎಂದು ಹೇಳಿದ್ದಾರೆ. ನಾನು ಭಾರತದ ಧ್ವನಿಗಾಗಿ ಹೋರಾಡುತ್ತಿದ್ದೇನೆ. ನಾನು ಯಾವುದೇ ಬೆಲೆ ತೆರಲು ಸಿದ್ಧ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಲೋಕಸಭೆ ಕಾರ್ಯದರ್ಶಿ ಕೇರಳದ ವಯನಾಡ್‌ನಲ್ಲಿರುವ ಅವರ ಕ್ಷೇತ್ರವನ್ನು ಖಾಲಿ ಎಂದು ಘೋಷಿಸಿತು. ಚುನಾವಣಾ ಆಯೋಗವು ಈ ಕ್ಷೇತ್ರಕ್ಕೆ ಮತ್ತೆ ಚುನಾವಣೆಯನ್ನು ಘೋಷಿಸಬಹುದು. ದೆಹಲಿಯಲ್ಲಿರುವ ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಲು ರಾಹುಲ್ ಗಾಂಧಿಗೆ ಒಂದು ತಿಂಗಳ ಕಾಲಾವಕಾಶವಿದೆ.

ಈ ಕ್ರಮದ ಹಿಂದೆ ಪಿತೂರಿ ಇದೆ ಎಂದು ಕಾಂಗ್ರೆಸ್ ಆರೋಪಿಸಿದೆ, ರಾಹುಲ್ ಗಾಂಧಿ ಅವರು ಸರ್ಕಾರಕ್ಕೆ ಕಠಿಣ ಪ್ರಶ್ನೆಗಳನ್ನು ಹಾಕುತ್ತಿರುವುದರಿಂದ ಅವರನ್ನು ಮೌನಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿ ಈ ಕ್ರಮವನ್ನು ಕಾನೂನುಬದ್ಧವಾಗಿದೆ ಎಂದು ಹೇಳಿದೆ ಮತ್ತು ಇದು ಈ ತೀರ್ಪು ಸ್ವತಂತ್ರ ನ್ಯಾಯಾಲಯ ಅಧಿಕಾರವಾಗಿದೆ. ಇದರಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಹೇಳಿದೆ. ಕೋಲಾರದಲ್ಲಿ ಅವರು ಮಾಡಿದ ಭಾಷಣ ಇಡೀ ಶಱಹಿಂದುಳಿದ ವರ್ಗಗಳ (ಒಬಿಸಿ) ಸಮುದಾಯವನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಹೇಳಿದೆ.

Published On - 5:52 pm, Fri, 24 March 23