AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದು ದೇಶದ ವಿಷಯ, ವಿರೋಧವಲ್ಲ: ಶರದ್ ಪವಾರ್​​ನ್ನು ಭೇಟಿ ಮಾಡಿದ ಅರವಿಂದ ಕೇಜ್ರಿವಾಲ್

ಶರದ್ ಪವಾರ್ ಅವರು ಇಂದು ದೇಶದ ದೊಡ್ಡ ನಾಯಕರಲ್ಲಿ ಒಬ್ಬರು. ಅವರು ನಮ್ಮನ್ನು ಬೆಂಬಲಿಸಬೇಕು ಎಂದು ನಾನು ಅವರನ್ನು ವಿನಂತಿಸುತ್ತೇನೆ, ದಯವಿಟ್ಟು ದೇಶದ ಇತರ ಪಕ್ಷಗಳಿಂದ ಬೆಂಬಲವನ್ನು ಗಳಿಸಲು ನಮಗೆ ಸಹಾಯ ಮಾಡಿ ಎಂದ ಕೇಜ್ರಿವಾಲ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇದು ದೇಶದ ವಿಷಯ, ವಿರೋಧವಲ್ಲ: ಶರದ್ ಪವಾರ್​​ನ್ನು  ಭೇಟಿ ಮಾಡಿದ ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್- ಶರದ್ ಪವಾರ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 25, 2023 | 6:53 PM

Share

ಮುಂಬೈ: ದೆಹಲಿ ಅಧಿಕಾರಿಗಳ ನಿಯಂತ್ರಣ ಕುರಿತ ಕೇಂದ್ರದ ಮಸೂದೆಯನ್ನು ರಾಜ್ಯಸಭೆಯಲ್ಲಿ ಸೋಲಿಸಲು ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಹೊರಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ (Arvind Kejriwal) ತಮಗೆ ನ್ಯಾಷನಲಿಸ್ಟ್ ಕಾಂಗ್ರೆಸ್ ಮುಖ್ಯಸ್ಥ ಶರದ್ ಪವಾರ್ (Sharad Pawar )ಮತ್ತು ಉದ್ಧವ್ ಠಾಕ್ರೆ (Uddhav Thackeray) ಅವರ ಬೆಂಬಲವಿದೆ ಎಂದು ಹೇಳಿದ್ದಾರೆ. ನಿನ್ನೆ ಮುಂಬೈನಲ್ಲಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದ ಕೇಜ್ರಿವಾಲ್, ಬಿಜೆಪಿಯ ಆಟದ ಯೋಜನೆಯು ದೇಶಕ್ಕೆ ಅತ್ಯಂತ ಅಪಾಯಕಾರಿ ಪರಿಸ್ಥಿತಿಯನ್ನು ಸೃಷ್ಟಿಸುತ್ತಿದೆ. ಇದು ವಿರೋಧದ ವಿಚಾರವಲ್ಲ, ದೇಶದ ವಿಚಾರ ಎಂದು ಹೇಳಿದ್ದಾರೆ. ಕೇಜ್ರಿವಾಲ್ ಈಗಾಗಲೇ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ.

ಶರದ್ ಪವಾರ್ ಅವರು ಇಂದು ದೇಶದ ದೊಡ್ಡ ನಾಯಕರಲ್ಲಿ ಒಬ್ಬರು. ಅವರು ನಮ್ಮನ್ನು ಬೆಂಬಲಿಸಬೇಕು ಎಂದು ನಾನು ಅವರನ್ನು ವಿನಂತಿಸುತ್ತೇನೆ, ದಯವಿಟ್ಟು ದೇಶದ ಇತರ ಪಕ್ಷಗಳಿಂದ ಬೆಂಬಲವನ್ನು ಗಳಿಸಲು ನಮಗೆ ಸಹಾಯ ಮಾಡಿ ಎಂದ ಕೇಜ್ರಿವಾಲ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಕೇಜ್ರಿವಾಲ್ ಅವರು ಇತರ ಪಕ್ಷಗಳನ್ನು ಹೆಸರಿಸದಿದ್ದರೂ, ರಾಜ್ಯಸಭೆಯ ಕಾರ್ಯತಂತ್ರದೊಂದಿಗೆ ಕಾಂಗ್ರೆಸ್ ಅನ್ನು ತರಲು ಪವಾರ್ ಅವರ ಸಹಾಯದ ಅಗತ್ಯವಿದೆ ಎಂಬ ಊಹಾಪೋಹವಿದೆ.

ಈ ವಿಷಯದ ಬಗ್ಗೆ ಕಾಂಗ್ರೆಸ್ ಇನ್ನೂ ತನ್ನ ನಿಲುವನ್ನು ಸ್ಪಷ್ಟಪಡಿಸಿಲ್ಲ. ಅಂದ ಹಾಗೆ ತನ್ನ ಪ್ರಾದೇಶಿಕ ನಾಯಕರೊಂದಿಗೆ ಸಮಾಲೋಚಿಸಿದ ನಂತರವೇ ನಿರ್ಧಾರ ಕೈಗೊಳ್ಳುವುದಾಗಿ ಕಾಂಗ್ರೆಸ್ ಹೇಳಿದೆ., ಅವರಲ್ಲಿ ಹಲವರು ಪ್ರಾದೇಶಿಕ ಪಕ್ಷಗಳಿಗೆ ಸಹಾಯ ಮಾಡುವ ಕಲ್ಪನೆಯನ್ನು ವಿರೋಧಿಸುತ್ತಾರೆ. ಕಾಂಗ್ರೆಸ್‌ನ ದೆಹಲಿ ಘಟಕವು ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದೊಂದಿಗೆ ಭಿನ್ನಾಭಿಪ್ರಾಯದಲ್ಲಿದೆ.

ರಾಜ್ಯಸಭಾ ಕದನದಲ್ಲಿ ಎಎಪಿ ಗೆಲ್ಲಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಜತೆಗೆ ತರುವು ಅತ್ಯಗತ್ಯ. ಮೇಲ್ಮನೆಯಲ್ಲಿ ಪಕ್ಷವು 31 ಸಂಸದರನ್ನು ಹೊಂದಿದೆ. ತೃಣಮೂಲ ಕಾಂಗ್ರೆಸ್ 12 ಸಂಸದರನ್ನು ಹೊಂದಿದೆ, ಎನ್‌ಸಿಪಿ ನಾಲ್ವರನ್ನು ಮತ್ತು ಶಿವಸೇನೆ (ಯುಬಿಟಿ) ಮೂರು ಸದಸ್ಯರನ್ನು ಹೊಂದಿದ್ದು ಎಎಪಿ 10 ಸಂಸದರನ್ನು ಹೊಂದಿದೆ.

ಮುಂಗಾರು ಅಧಿವೇಶನದಲ್ಲಿ ಈ ವಿಷಯದ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ನಿರೀಕ್ಷೆಯಿದ್ದು, ಉಭಯ ಸದನಗಳಲ್ಲಿ ಅಂಗೀಕಾರವಾಗುವ ವಿಶ್ವಾಸವನ್ನು ಬಿಜೆಪಿ ಹೊಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:50 pm, Thu, 25 May 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ