AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ನಾಯಕತ್ವವಲ್ಲ, ನೌಟಂಕಿ’: ಇಟಲಿ ಪ್ರಧಾನಿಗೆ ಮೋದಿ ಗಿಫ್ಟ್​​ ಬಗ್ಗೆ ರಾಹುಲ್​​ ಗಾಂಧಿ ಟೀಕೆ

ಇಟಲಿ ಪ್ರಧಾನಿ ಮೆಲೋನಿಗೆ ಪ್ರಧಾನಿ ಮೋದಿ ಚಾಕೊಲೇಟ್ ನೀಡಿದ ವಿಚಾರವನ್ನು ಟೀಕಿಸಿದ ರಾಹುಲ್ ಗಾಂಧಿ, ದೇಶ ಆರ್ಥಿಕ ಸಂಕಷ್ಟದಲ್ಲಿದ್ದಾಗ ಪ್ರಧಾನಿ ವಿದೇಶದಲ್ಲಿ ರೀಲ್ಸ್ ಮಾಡುತ್ತಾ ಸಿಹಿ ಹಂಚುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮತ್ತೊಂದೆಡೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದ ಬಹುಜನ ಸ್ವಾಭಿಮಾನ ಸಭೆಯಲ್ಲಿ ಮಾತನಾಡಿದ ರಾಹುಲ್​​, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ, ಅಮಿತ್ ಶಾ, ಬಿಜೆಪಿ, ಆರ್‌ಎಸ್‌ಎಸ್‌ ದೇಶದ್ರೋಹಿಗಳಾಗಿದ್ದು, ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿರೋದಾಗಿ ದೂರಿದ್ದಾರೆ.

'ಇದು ನಾಯಕತ್ವವಲ್ಲ, ನೌಟಂಕಿ': ಇಟಲಿ ಪ್ರಧಾನಿಗೆ ಮೋದಿ ಗಿಫ್ಟ್​​ ಬಗ್ಗೆ ರಾಹುಲ್​​ ಗಾಂಧಿ ಟೀಕೆ
ಪ್ರಧಾನಿ ಮೋದಿ ವಿರುದ್ಧ ರಾಹುಲ್​​ ವಾಗ್ದಾಳಿ
ಪ್ರಸನ್ನ ಹೆಗಡೆ
|

Updated on: May 20, 2026 | 3:53 PM

Share

ನವದೆಹಲಿ/ ರಾಯ್‌ಬರೇಲಿ, ಮೇ 20: ಬಿಜೆಪಿ, ಆರೆಸ್ಸೆಸ್​​, ನರೇಂದ್ರ ಮೋದಿ (Narendra Modi), ಅಮಿತ್​​ ಶಾರಿಂದ ಹಿಡಿದು ಅದಾನಿ ವಿರುದ್ಧವೂ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್​​ ಗಾಂಧಿ (Rahul Gandhi) ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೋಮ್ ಪ್ರವಾಸದಲ್ಲಿರುವ ಮೋದಿ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ (Giorgia Meloni) ಅವರಿಗೆ ಉಡುಗೊರೆಯಾಗಿ ಮೆಲೋಡಿ ಚಾಕೊಲೇಟ್ ನೀಡಿದ ವಿಚಾರದ ಬಗ್ಗೆಯೂ ಟೀಕಿಸಿದ ಅವರು ಇದು ನಾಯಕತ್ವವಲ್ಲ, ನೌಟಂಕಿ ಎಂದು ತಿವಿದಿದ್ದಾರೆ.

ಎಕ್ಸ್​​ ಪೋಸ್ಟ್​​ ಮಾಡಿ ರಾಹುಲ್​​ ಕಿಡಿ

ಈ ಕುರಿತು ಎಕ್ಸ್ ಪೋಸ್ಟ್ ಮಾಡಿರುವ ರಾಹುಲ್ ಗಾಂಧಿ, ದೇಶದಲ್ಲಿ ರೈತರು, ಯುವಕರು, ಮಹಿಳೆಯರು, ಕಾರ್ಮಿಕರು ಹಾಗೂ ಸಣ್ಣ ವ್ಯಾಪಾರಿಗಳು ಸಂಕಷ್ಟದಲ್ಲಿರುವಾಗ ಪ್ರಧಾನಿ ಮೋದಿ ನಗುತ್ತಾ ರೀಲ್ಸ್ ಮಾಡುತ್ತಿದ್ದಾರೆ. ದೇಶದ ಮೇಲೆ ಆರ್ಥಿಕ ಸಂಕಷ್ಟದ ಮಬ್ಬು ಕವಿದಿದೆ. ಆದರೆ ನಮ್ಮ ಪ್ರಧಾನಿ ಇಟಲಿಯಲ್ಲಿ ಸಿಹಿತಿಂಡಿ ಹಂಚುತ್ತಿದ್ದಾರೆ. ಪ್ರಧಾನಿ ನಗುತ್ತಾ ರೀಲ್ಸ್ ಮಾಡುತ್ತಿದ್ದರೆ, ಬಿಜೆಪಿ ನಾಯಕರು ಚಪ್ಪಾಳೆ ತಟ್ಟುತ್ತಿದ್ದಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ, RSS ವಿರುದ್ಧ ವಾಗ್ದಾಳಿ

ಮತ್ತೊಂದೆಡೆ ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದ ಬಹುಜನ ಸ್ವಾಭಿಮಾನ ಸಭೆಯಲ್ಲಿ ಮಾತನಾಡಿದ ರಾಹುಲ್​​, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಭೆಯಲ್ಲಿ ಜನರು ಚಪ್ಪಾಳೆ ತಟ್ಟುತ್ತಿದ್ದುದನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ, ನೀವು ಎಲ್ಲರೂ ಚಪ್ಪಾಳೆ ತಟ್ಟುತ್ತೀರಿ. ಆದರೆ ಆರ್‌ಎಸ್‌ಎಸ್ ಸದಸ್ಯರು ನಿಮ್ಮ ಕಣ್ಣೆದುರೇ ಸಂವಿಧಾನವನ್ನು ಹರಿದು ಎಸೆದಾಗ ಮೌನವಾಗಿರುತ್ತೀರಿ. ಈ ಸಂವಿಧಾನದಲ್ಲಿ ನಿಮ್ಮ ಧ್ವನಿ ಮತ್ತು ನಿಮ್ಮ ರಕ್ತವಿದೆ. ಅದನ್ನು ಉಳಿಸುವುದು ನಿಮ್ಮ ಜವಾಬ್ದಾರಿ ಎಂದಿದ್ದಾರೆ.

ಇದನ್ನೂ ಓದಿ: ಇಟಲಿ ಪ್ರಧಾನಿ ಮೆಲೋನಿ ಭೇಟಿಯಾಗಿ ಫೋಟೊಗಳನ್ನು ಹಂಚಿಕೊಂಡ ಪ್ರಧಾನಿ ಮೋದಿ

ಮೋದಿ ವಿದೇಶ ಪ್ರವಾಸ ಟೀಕಿಸಿದ ರಾಹುಲ್​​

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ವಿದೇಶ ಪ್ರವಾಸ ಕುರಿತ ಹೇಳಿಕೆಗಳನ್ನೂ ಟೀಕಿಸಿದ ಅವರು, ಪ್ರಧಾನಿ ಜನರಿಗೆ ವಿದೇಶ ಪ್ರವಾಸ ಮಾಡಬೇಡಿ ಎಂದು ಹೇಳುತ್ತಾರೆ. ಚಿನ್ನ ಖರೀದಿಸಬೇಡಿ ಎನ್ನುತ್ತಾರೆ. ಎಲೆಕ್ಟ್ರಿಕ್ ವಾಹನ ಖರೀದಿಸಿ ಎನ್ನುತ್ತಾರೆ. ಆದರೆ ತಾವೇ ಸಾವಿರಾರು ಕೋಟಿ ರೂ. ಮೌಲ್ಯದ ವಿಮಾನಗಳಲ್ಲಿ ವಿದೇಶ ಪ್ರವಾಸ ಮಾಡುತ್ತಾರೆ. ದೇಶದ ಮೇಲೆ ಆರ್ಥಿಕ ಚಂಡಮಾರುತ ಸಮೀಪಿಸುತ್ತಿದೆ. ಕೆಲವೇ ತಿಂಗಳಲ್ಲಿ ದರ ಏರಿಕೆ, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಬೆಲೆಗಳು ಎಲ್ಲಿ ಹೋಗುತ್ತವೆ ಎಂಬುದನ್ನು ನೀವು ನೋಡುತ್ತೀರಿ. ಮುಂದೆ ರೈತರಿಗೆ ರಸಗೊಬ್ಬರವೂ ಸಿಗದ ಪರಿಸ್ಥಿತಿ ಬರಬಹುದು ಎಂದು ರಾಹುಲ್ ಗಾಂಧಿ ಇದೇ ವೇಳೆ ಎಚ್ಚರಿಸಿದ್ದಾರೆ.

‘ಸಂವಿಧಾನದ ಮೇಲೆ ದಾಳಿ’

ಪ್ರಧಾನಿ ಮೋದಿ, ಅಮಿತ್ ಶಾ, ಬಿಜೆಪಿ, ಆರ್‌ಎಸ್‌ಎಸ್‌ ದೇಶದ್ರೋಹಿಗಳಾಗಿದ್ದು, ರಾಷ್ಟ್ರದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ-ಆರ್‌ಎಸ್‌ಎಸ್ ಸಂವಿಧಾನದ ಮೇಲೆ ದಾಳಿ ಮಾಡಿದೆ. ಪಂಚ ರಾಜ್ಯಗಳ ಚುನಾವಣೆ ಮೊದಲು ಇಂಧನ ಕೊರತೆ ಇಲ್ಲ ಅಂದಿದ್ರಿ. ಪೆಟ್ರೋಲ್‌, ಡೀಸೆಲ್ ದರ ಹೆಚ್ಚಳವಾಗಲ್ಲ ಅಂತಾ ಹೇಳಿದ್ರಿ. ಆದರೆ ಈಗ ದೇಶದಲ್ಲಿ ಪೆಟ್ರೋಲ್‌, ಡೀಸೆಲ್ ದರ ಹೆಚ್ಚಳವಾಗುತ್ತಿದೆ. ಅಂಬಾನಿ ರಷ್ಯಾದಿಂದ ಪೆಟ್ರೋಲ್ ಖರೀದಿಸಿ ಹೊರಗೆ ಮಾರಾಟ ಮಾಡ್ತಾರೆ. ಆ ಹಣದಿಂದ ಪ್ರಧಾನಿ ನರೇಂದ್ರ ಮೋದಿಗೆ ಹಣಕಾಸು ಒದಗಿಸುತ್ತಾರೆ. ಮೋದಿ ಭಾರತದ ಆರ್ಥಿಕ ವ್ಯವಸ್ಥೆಯನ್ನ ಅಂಬಾನಿ, ಅದಾನಿ, ಅಮೆರಿಕಕ್ಕೆ ಹಸ್ತಾಂತರಿಸಿದ್ದು, ಅವರ ಸರ್ಕಾರ ನಿಮ್ಮನ್ನು ಉಳಿಸಲು ಸಾಧ್ಯವಿಲ್ಲ. ಅವರು ಅಳುತ್ತಾರೆ, ಅದು ನನ್ನ ತಪ್ಪಲ್ಲ ಅಂತಾರೆ. ಆದರೆ ಪ್ರಧಾನಿ ಮೋದಿ, ಅಮಿತ್ ಶಾ, ಆರ್‌ಎಸ್‌ಎಸ್‌ನವರದ್ದೇ ತಪ್ಪು ಎಂದು ರಾಹುಲ್​​ ಹೇಳಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Hegde
Prasanna Hegde

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಅಂಬಾನಿ ಫ್ಯಾಮಿಲಿ ಭೇಟಿ!
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಅಂಬಾನಿ ಫ್ಯಾಮಿಲಿ ಭೇಟಿ!