AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಈ ವ್ಯಾಪಾರಿಯ ಬಳಿ ಬಾಂಬೆ ಮಿಠಾಯಿ ಖರೀದಿ ಮಾಡೋದಿದ್ರೆ ಹಣ ಬೇಡ, ಬದಲಿಗೆ ಇದೊಂದು ವಸ್ತು ಕೊಡಿ ಸಾಕು !

ಸೋಷಿಯಲ್​ ಮೀಡಿಯಾದಲ್ಲಿ ಇವರ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿದೆ. ತುಂಬ ಜನರು ಅಚ್ಚರಿಯನ್ನೂ ವ್ಯಕ್ತಪಡಿಸಿದ್ದಾರೆ. ಹೀಗೆ ಮಾಡಲು ಕಾರಣವೇನು ಎಂಬುದಿನ್ನೂ ಸ್ಪಷ್ಟವಾಗಿಲ್ಲ, ಆದರೆ ಇದೊಂದು ವಿಭಿನ್ನ ವಿನಿಮಯ ಪದ್ಧತಿ ಎಂಬುದು ನೆಟ್ಟಿಗರ ಅಭಿಪ್ರಾಯ.

Video: ಈ ವ್ಯಾಪಾರಿಯ ಬಳಿ ಬಾಂಬೆ ಮಿಠಾಯಿ ಖರೀದಿ ಮಾಡೋದಿದ್ರೆ ಹಣ ಬೇಡ, ಬದಲಿಗೆ ಇದೊಂದು ವಸ್ತು ಕೊಡಿ ಸಾಕು !
ಕಾಟನ್ ಕ್ಯಾಂಡಿ ಮಾರುತ್ತಿರುವ ವ್ಯಾಪಾರಿ
TV9 Web
| Updated By: Lakshmi Hegde|

Updated on:Mar 19, 2022 | 1:07 PM

Share

ಹಿಂದಿನ ಕಾಲದಲ್ಲಿ ವಸ್ತುಗಳ ವಿನಿಮಯ ಪದ್ಧತಿ ಹೆಚ್ಚಾಗಿ ಇತ್ತು. ಅಂದರೆ ಒಬ್ಬ ವ್ಯಕ್ತಿ ತಾನು ಮಾರಾಟ ಮಾಡುವ ವಸ್ತುವಿಗೆ ಅದರ ಮೌಲ್ಯದಷ್ಟು ಣವನ್ನೇ ಪಡೆಯಬೇಕು ಎಂದೇನೂ ಇರುತ್ತಿರಲಿಲ್ಲ. ಹಣದ ಬದಲಿಗೆ ತನ್ನ ಆಯ್ಕೆಯ ಯಾವುದೇ ವಸ್ತುವನ್ನೂ ಅವನು ಪಡೆಯಬಹುದಿತ್ತು. ಅದೇ ದಾರಿಯನ್ನು ಇಲ್ಲೊಬ್ಬ ಬೀದಿಬದಿ ವ್ಯಾಪಾರಿ ಕಂಡುಕೊಂಡಿದ್ದಾರೆ. ಆದರೆ ಈತನ ವಿನಿಮಯ ಪದ್ಧತಿ ತುಂಬ ವಿಭಿನ್ನವಾಗಿದೆ. ನೀವೆಲ್ಲ ಕಾಟನ್​ ಕ್ಯಾಂಡಿ ಕೇಳಿರಬಹುದು. ಅದೇ ಬಾಂಬೆ ಮಿಠಾಯಿ. ಗುಲಾಬಿ ಬಣ್ಣದ ತಿನಿಸು. ಇದನ್ನು ಸಾಮಾನ್ಯವಾಗಿ ಬೀದಿಬದಿಯಲ್ಲೇ ಮಾರಾಟ ಮಾಡುತ್ತಾರೆ. ಹಾಗೆ ಇಲ್ಲೊಬ್ಬ ವ್ಯಾಪಾರಿ ಇದೇ ಬಾಂಬೆ ಮಿಠಾಯಿಯನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ ವಿಶೇಷವೆಂದರೆ ಅವರು ಹಣ ಪಡೆಯುತ್ತಿಲ್ಲ, ಬದಲಿಗೆ ತಲೆ ಕೂದಲನ್ನು ಪಡೆದುಕೊಳ್ಳುತ್ತಿದ್ದಾರೆ !

ಯೂಟ್ಯೂಬ್​​ನಲ್ಲಿ ಈ ವಿಡಿಯೋ ಸಿಕ್ಕಾಪಟೆ ವೈರಲ್ ಆಗ್ತಿದೆ. ಈ ವ್ಯಾಪಾರಿ ರಸ್ತೆ ಬದಿಯಲ್ಲಿ ಒಂದು ಸಣ್ಣ ಅಂಗಡಿ ಇಟ್ಟುಕೊಂಡಿದ್ದಾರೆ. ಅಲ್ಲಿ ಕಾಟನ್​ ಕ್ಯಾಂಡಿ ತಯಾರಿಸಿ ಕೊಡುತ್ತಾರೆ. ಪುಟ್ಟಪುಟ್ಟ ಮಕ್ಕಳು ಕೈಯಲ್ಲಿ ಸ್ವಲ್ಪ ಕೂದಲು ಹಿಡಿದುಕೊಂಡು ಆ ಅಂಗಡಿಯ ಎದುರು ನಿಂತು, ಬಾಂಬೆ ಮಿಠಾಯಿ ಪಡೆಯಲು ಕಾಯುತ್ತಾರೆ. ಅಂದಹಾಗೇ, ಈ ವ್ಯಾಪಾರಿಯ ಹೆಸರು ಪ್ರತಾಪ್​ ಸಿಂಗ್​. ಅವರು ಇಂತಿಷ್ಟು ಪ್ರಮಾಣದ ಕೂದಲಿಗೆ, ಇಂತಿಷ್ಟು ಕಾಟನ್ ಕ್ಯಾಂಡಿ ಕೊಡುವುದಾಗಿ ಅಳತೆ ನಿಗದಿ ಮಾಡಿದ್ದಾರೆ.

ಸೋಷಿಯಲ್​ ಮೀಡಿಯಾದಲ್ಲಿ ಇವರ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿದೆ. ತುಂಬ ಜನರು ಅಚ್ಚರಿಯನ್ನೂ ವ್ಯಕ್ತಪಡಿಸಿದ್ದಾರೆ. ಹೀಗೆ ಮಾಡಲು ಕಾರಣವೇನು ಎಂಬುದಿನ್ನೂ ಸ್ಪಷ್ಟವಾಗಿಲ್ಲ, ಆದರೆ ಇದೊಂದು ವಿಭಿನ್ನ ವಿನಿಮಯ ಪದ್ಧತಿ ಎಂಬುದು ನೆಟ್ಟಿಗರ ಅಭಿಪ್ರಾಯ. ಬಹುಶಃ ಆ ಕೂದಲನ್ನು ಅವರೆಲ್ಲೋ ಮಾರಾಟ ಮಾಡುತ್ತಾರೆ ಎಂಬ ಬಗ್ಗೆಯೂ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ನಡೆಯುತ್ತಿದೆ. ಸಾಮಾನ್ಯವಾಗಿ ಕೂದಲಿನ ಚೌರಿ, ವಿಗ್​ ತಯಾರಿಕೆ ಮಾಡಲಾಗುತ್ತದೆ. ಹೀಗೆ ತಲೆಕೂದಲನ್ನು ಪಡೆದು ಅದಕ್ಕೆ ಪ್ರತಿಯಾಗಿ ದುಡ್ಡು ಕೊಡುವ ಸಾಕಷ್ಟು ಮಂದಿ ಇದ್ದಾರೆ. ಹಳ್ಳಿಯ ಕಡೆಗಳಲ್ಲೆಲ್ಲ ಮನೆಮನೆಗೆ ಬರುವವರೂ ಇದ್ದಾರೆ. ಕತ್ತರಿಸಿದ ಕೂದಲನ್ನು ಸಂಗ್ರಹಿಸಿಟ್ಟರೆ ಅದನ್ನು ಪಡೆದು, ಬದಲಿಗೆ ಪ್ಲಾಸ್ಟಿಕ್​ ನ ವಸ್ತುಗಳನ್ನೂ ಕೊಡುತ್ತಿದ್ದರು. ಆದರೆ ಈಗೀಗ ಪ್ಲಾಸ್ಟಿಕ್​ ನಿಷೇಧವಾಗಿದ್ದು, ಹಣ ಕೊಡುತ್ತಾರೆ.

ಇದನ್ನೂ ಓದಿ: ಪಂಜಾಬ್​​ ಸಿಎಂ ಭಗವಂತ್​ ಮಾನ್​ ಸಂಪುಟಕ್ಕೆ 10 ಸಚಿವರ ಸೇರ್ಪಡೆ; ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ

Published On - 1:02 pm, Sat, 19 March 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ