AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯ ಮಂಚದ ಕೆಳಗೆ ಹರಿದಾಡುತ್ತಿದ್ವು 16ಕ್ಕೂ ಹೆಚ್ಚು ನಾಗರ ಹಾವುಗಳು, 32 ಮೊಟ್ಟೆಗಳು ಪತ್ತೆ

ಮುಜಾಫರ್​ಪುರ ಜಿಲ್ಲೆಯ ಸರೈಯಾ ಬ್ಲಾಕ್​ನ ಖೈರಾ ಗ್ರಾಮದಲ್ಲಿ ಮನೆಯ ಮಂಚದ ಕೆಳಗೆ ಹರಿದಾಡುತ್ತಿದ್ದವು 16ಕ್ಕೂ ಹೆಚ್ಚು ನಾಗರ ಹಾವುಗಳು, 32 ಮೊಟ್ಟೆಗಳು ಪತ್ತೆಯಾಗಿದೆ. ಅವರ ಮನೆಯಲ್ಲಿ ಹಾವುಗಳು ಮನೆ ಮಾಡಿದ್ದು ಗೊತ್ತೇ ಇರಲಿಲ್ಲ. ಹತ್ತಾರು ಹಾವುಗಳು ಜೀವಂತವಾಗಿ ಪತ್ತೆಯಾಗಿದ್ದು, ಬಳಿಕ ಸ್ಥಳೀಯರಿಗೆ ಮಾಹಿತಿ ನೀಡಲಾಗಿತ್ತು.

ಮನೆಯ ಮಂಚದ ಕೆಳಗೆ ಹರಿದಾಡುತ್ತಿದ್ವು 16ಕ್ಕೂ ಹೆಚ್ಚು ನಾಗರ ಹಾವುಗಳು, 32 ಮೊಟ್ಟೆಗಳು ಪತ್ತೆ
ನಾಗರಹಾವುಗಳು-ಸಾಂದರ್ಭಿಕ ಚಿತ್ರImage Credit source: Youtube
ನಯನಾ ರಾಜೀವ್
|

Updated on: Jul 19, 2024 | 12:38 PM

Share

ಒಂದೇ ಒಂದು ಹಾವು ಮನೆಯ ಒಳಗೆ ಅಥವಾ ಹೊರಗೆ ಕಾಣಿಸಿಕೊಂಡರೆ ಹಣೆಯಲ್ಲಿ ಬೆವರಿಳಿಯುತ್ತದೆ, ಒಂದೊಮ್ಮೆ ಮನೆ ತುಂಬಾ ಹಾವೇ ತುಂಬಿಕೊಂಡರೆ ಪರಿಸ್ಥಿತಿ ಏನಾಗಬಹುದು ಒಮ್ಮೆ ಯೋಚಿಸಿ. ಮುಜಾಫರ್​ಪುರ ಜಿಲ್ಲೆಯ ಸರೈಯಾ ಬ್ಲಾಕ್​ನ ಖೈರಾ ಗ್ರಾಮದಲ್ಲಿ ಇಂಥದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಮನೆಯೊಂದರಲ್ಲಿ 16 ನಾಗರ ಹಾವುಗಳು ಪತ್ತೆಯಾಗಿವೆ ಅಷ್ಟೇ ಅಲ್ಲದೆ 32 ಮೊಟ್ಟೆಗಳು ಕೂಡ ಇದ್ದವು. ಇದನ್ನು ನೋಡಿ ಅರಣ್ಯ ಇಲಾಖೆ ಸಿಬ್ಬಂದಿ ಕೂಡ ಬೆಚ್ಚಿಬಿದ್ದಿದ್ದಾರೆ.

ಸರಯ್ಯ ಬ್ಲಾಕ್‌ನ ಖೈರಾ ಗ್ರಾಮದ ನಿವಾಸಿ ಸಂಜೀತ್ ಮಹತೋ ಎಂಬುವವರ ಮನೆಯಲ್ಲಿ ಕಳೆದ ಎರಡು ದಿನಗಳಿಂದ ಹಾವುಗಳು ಕಾಣಿಸಿಕೊಳ್ಳುತ್ತಿದ್ದವು. ಮಳೆ ನೀರು ನುಗ್ಗಿದ್ದರಿಂದ ಹಾವುಗಳು ಬಂದಿವೆ ಎಂದು ಅವರು ಭಾವಿಸಿದ್ದರು. ಈ ವೇಳೆ ಹನ್ನೆರಡು ಹಾವಿನ ಮರಿಗಳನ್ನು ಹಿಡಿದು ಹೊಲಕ್ಕೆ ಬಿಡಲಾಯಿತು.

ಆದರೂ ಅವರ ಮನೆಯಲ್ಲಿ ಮತ್ತಷ್ಟು ಹಾವುಗಳು ಕಾಣಿಸಿಕೊಂಡಿವೆ. ತಕ್ಷಣ ಗ್ರಾಮದವರಿಗೆ ಮಾಹಿತಿ ನೀಡಿದ್ದಾರೆ. ಆಗ ಅವರು ಮನೆಗೆ ಬಂದು ನೋಡಿದಾಗ ಹತ್ತಾರು ಹಾವುಗಳು ಪತ್ತೆಯಾಗಿವೆ. 6 ಹಾವುಗಳನ್ನು ರಕ್ಷಿಸಲಾಗಿವೆ, ಈ ವೇಳೆ ಮನೆಯಲ್ಲಿ 32 ಹಾವಿನ ಮೊಟ್ಟೆಗಳು ಪತ್ತೆಯಾಗಿದ್ದು, ಇವುಗಳಿಂದ ಮರಿಗಳೂ ಶೀಘ್ರದಲ್ಲೇ ಹೊರಬರಲಿವೆ.

ಮತ್ತಷ್ಟು ಓದಿ: Video Viral: ಶೂ ಒಳಗೆ ಕಾಲು ಹಾಕಲು ಮುಂದಾಗುತ್ತಿದ್ದಂತೆ ಹೆಡೆ ಎತ್ತಿ ನಿಂತ ನಾಗರ ಹಾವು; ವಿಡಿಯೋ ವೈರಲ್​​

ರಕ್ಷಣೆ ಬಳಿಕ ಕುಟುಂಬಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದು, ಅರಣ್ಯ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಅರಣ್ಯ ಇಲಾಖೆಯ ಡಾ.ರಾಜೀವ್ ರಂಜನ್ ಮಾತನಾಡಿ, ಖೈರಾ ಗ್ರಾಮದ ಗ್ರಾಮಸ್ಥರೊಬ್ಬರ ಮನೆಯನ್ನು ಹಾವುಗಳು ಅಡಗುದಾಣ ಮಾಡಿಕೊಂಡಿರುವ ಮಾಹಿತಿ ಲಭಿಸಿದೆ.

ಬಳಿಕ ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದಾಗ ಸಾಕಷ್ಟು ಇಲಿ ರಂಧ್ರಗಳಿರುವುದು ಪತ್ತೆಯಾಗಿದೆ. ಅದರಲ್ಲಿ ಹಾವುಗಳಿದ್ದವು. ವಾಸ್ತವವಾಗಿ, ನಾಗರಹಾವು ಎಂದಿಗೂ ರಂಧ್ರವನ್ನು ಮಾಡುವುದಿಲ್ಲ, ಅದು ಇಲಿಯ ರಂಧ್ರದಲ್ಲಿ ಮಾತ್ರ ಮೊಟ್ಟೆಗಳನ್ನು ಇಡುತ್ತದೆ.

ಈ ಗುಂಡಿಗಳನ್ನು ಅಗೆದಾಗ 16 ಹಾವುಗಳು ಪತ್ತೆಯಾಗಿದ್ದು, 32 ಮೊಟ್ಟೆಗಳೂ ಪತ್ತೆಯಾಗಿವೆ. ಎಲ್ಲಾ ಹಾವುಗಳು ನಾಗರ ಹಾವುಗಳಾಗಿದ್ದು, ಅವು ಮನೆಯಲ್ಲಿ ಆಶ್ರಯ ಪಡೆದಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ