AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಜ್ಯದ ಸರ್ಕಾರಿ ನೌಕರರಿಗೆ ಇನ್ನು ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ

ಇದೀಗ ಛತ್ತೀಸ್​ಗಢ ತನ್ನ ಸರ್ಕಾರದ ಸಿಬ್ಬಂದಿಗೆ ದೊಡ್ಡ ರಿಲೀಫ್ ನೀಡಿದ್ದು, ಛತ್ತೀಸ್‌ಗಢ ಸರ್ಕಾರದ ನೌಕರರಿಗೆ ವಾರದಲ್ಲಿ 5 ದಿನ ಕೆಲಸ ಮಾಡಲು ಅವಕಾಶ ನೀಡಿದೆ. ಅಂಶದಾಯಿ ಪಿಂಚಣಿ ಯೋಜನೆಯ ಭಾಗವಾಗಿ ಪಿಂಚಣಿ ಯೋಜನೆಯ ಮೊತ್ತವನ್ನು ಶೇ.10ರಿಂದ ಶೇ.14ಕ್ಕೆ ಹೆಚ್ಚಿಸಲಾಗುವುದು.

ಈ ರಾಜ್ಯದ ಸರ್ಕಾರಿ ನೌಕರರಿಗೆ ಇನ್ನು ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ
ಸಿಎಂ ಭೂಪೇಶ್ ಬಘೇಲ್
TV9 Web
| Edited By: |

Updated on:Jan 26, 2022 | 1:01 PM

Share

ಬಹುತೇಕ ಐಟಿ ಕಂಪನಿಗಳಲ್ಲಿ, ಕೆಲವು ಖಾಸಗಿ ಕಂಪನಿಗಳಲ್ಲಿ ವಾರಕ್ಕೆ 5 ದಿನ ಮಾತ್ರ ಕೆಲಸವಿರುತ್ತದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ರಜೆಯನ್ನು (Weekend) ಆ ಕಂಪನಿಗಳ ಉದ್ಯೋಗಿಗಳು ಎಂಜಾಯ್ ಮಾಡುತ್ತಾರೆ. ಆದರೆ, ಸರ್ಕಾರಿ ನೌಕರರಿಗೆ ವಾರದಲ್ಲಿ ಭಾನುವಾರ ಮಾತ್ರ ರಜೆ ಇರುತ್ತದೆ. ಇದೀಗ ಛತ್ತೀಸ್​ಗಢ ತನ್ನ ಸರ್ಕಾರದ ಸಿಬ್ಬಂದಿಗೆ ದೊಡ್ಡ ರಿಲೀಫ್ ನೀಡಿದ್ದು, ಛತ್ತೀಸ್‌ಗಢ ಸರ್ಕಾರದ ನೌಕರರಿಗೆ ವಾರದಲ್ಲಿ 5 ದಿನ ಕೆಲಸ ಮಾಡಲು ಅವಕಾಶ ನೀಡಿದೆ. ಅಂಶದಾಯಿ ಪಿಂಚಣಿ ಯೋಜನೆಯ (Pension Scheme) ಭಾಗವಾಗಿ ಪಿಂಚಣಿಗಾಗಿ ಛತ್ತೀಸ್​ಗಢ ರಾಜ್ಯದ ಮೊತ್ತವನ್ನು ಶೇ.10ರಿಂದ ಶೇ.14ಕ್ಕೆ ಹೆಚ್ಚಿಸುವುದಾಗಿ ಛತ್ತೀಸ್​ಗಢ ಸರ್ಕಾರ (Chhattisgarh Government) ಘೋಷಿಸಿದೆ.

ಭಾರತದ 73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಇತರ ಪ್ರಮುಖ ಘೋಷಣೆಗಳನ್ನು ಕೂಡ ಮಾಡಿದ್ದಾರೆ. ವಸತಿ ಪ್ರದೇಶಗಳಲ್ಲಿ ನಡೆಸುವ ವ್ಯಾಪಾರ ಚಟುವಟಿಕೆಗಳನ್ನು ಕ್ರಮಬದ್ಧಗೊಳಿಸಲು ಅಗತ್ಯವಾದ ನಿಬಂಧನೆಗಳನ್ನು ಮಾಡಲಾಗುವುದು. ಎಲ್ಲಾ ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಈ ವರ್ಷ ಕಾನೂನು ತರಲಾಗುವುದು ಎಂದು ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುನ್ಸಿಪಲ್ ಕಾರ್ಪೊರೇಷನ್ ಹೊರಗಿನ ಹೂಡಿಕೆ ಪ್ರದೇಶಗಳಲ್ಲಿ 500 ಚದರ ಮೀಟರ್ ವಿಸ್ತೀರ್ಣದ ಪ್ಲಾಟ್‌ಗಳಿಗೆ ಯಾವುದೇ ಹಸ್ತಕ್ಷೇಪವಿಲ್ಲದೆ ಕಟ್ಟಡದ ಅನುಮತಿಯನ್ನು ನೀಡಲಾಗುತ್ತದೆ. ನಗರ ಪ್ರದೇಶಗಳಂತೆ ಗ್ರಾಮೀಣ ಪ್ರದೇಶಗಳಲ್ಲಿ ಛತ್ತೀಸ್​ಗಢ ಸರ್ಕಾರವು ಗುತ್ತಿಗೆ ಪಡೆದ ಭೂಮಿಯನ್ನು ಫ್ರೀಹೋಲ್ಡ್ ಎಂದು ಕರೆಯಲಾಗುತ್ತದೆ. ಕಲಿಕಾ ಪರವಾನಗಿ ಮಾಡುವ ಪ್ರಕ್ರಿಯೆಯನ್ನು ಸರಳಗೊಳಿಸುವುದು ಮತ್ತು ಯುವಕರ ಉದ್ಯೋಗಕ್ಕಾಗಿ ಹೆಚ್ಚಿನ ಸಂಖ್ಯೆಯ ಸಾರಿಗೆ ಸೌಲಭ್ಯ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.

ಸರ್ಕಾರಿ ನೌಕರರ ಹಿತದೃಷ್ಟಿಯಿಂದ ‘ಕಾಂಟ್ರಿಬ್ಯೂಟರಿ ಪಿಂಚಣಿ ಯೋಜನೆ’ಯ ಅಂತರ-ಕೈಗಾರಿಕಾ ನೀತಿಯನ್ನು ತಿದ್ದುಪಡಿ ಮಾಡುವ ಮೂಲಕ ಒಬಿಸಿಗಳಲ್ಲಿ ಉದ್ಯಮಶೀಲತೆ ಅಭಿವೃದ್ಧಿಗೆ ಶೇ.10ರಷ್ಟು ಪ್ಲಾಟ್‌ಗಳನ್ನು ಕಾಯ್ದಿರಿಸಲಾಗುತ್ತದೆ. 2022-23ರ ಖಾರಿಫ್‌ನಲ್ಲಿ ದ್ವಿದಳ ಧಾನ್ಯಗಳ ಖರೀದಿಯನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಮಾಡಲಾಗುತ್ತದೆ.

ಇದನ್ನೂ ಓದಿ: Video: ಛತ್ತೀಸ್​ಗಢ್​​ನ ಹಳ್ಳಿಯೊಂದರಲ್ಲಿ ವಿವಾದಿತ ಪ್ರತಿಜ್ಞಾ ವಿಧಿ ಸ್ವೀಕಾರ; ಕಾರ್ಯಕ್ರಮ ಆಯೋಜಕರನ್ನು ಹುಡುಕುತ್ತಿರುವ ಪೊಲೀಸರು !

ಕೊವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಈ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಂಬಳವೇ ಸಿಗಲ್ಲ!

Published On - 12:56 pm, Wed, 26 January 22

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ