AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರಾಜ್ಯದ ಸರ್ಕಾರಿ ನೌಕರರಿಗೆ ಇನ್ನು ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ

ಇದೀಗ ಛತ್ತೀಸ್​ಗಢ ತನ್ನ ಸರ್ಕಾರದ ಸಿಬ್ಬಂದಿಗೆ ದೊಡ್ಡ ರಿಲೀಫ್ ನೀಡಿದ್ದು, ಛತ್ತೀಸ್‌ಗಢ ಸರ್ಕಾರದ ನೌಕರರಿಗೆ ವಾರದಲ್ಲಿ 5 ದಿನ ಕೆಲಸ ಮಾಡಲು ಅವಕಾಶ ನೀಡಿದೆ. ಅಂಶದಾಯಿ ಪಿಂಚಣಿ ಯೋಜನೆಯ ಭಾಗವಾಗಿ ಪಿಂಚಣಿ ಯೋಜನೆಯ ಮೊತ್ತವನ್ನು ಶೇ.10ರಿಂದ ಶೇ.14ಕ್ಕೆ ಹೆಚ್ಚಿಸಲಾಗುವುದು.

ಈ ರಾಜ್ಯದ ಸರ್ಕಾರಿ ನೌಕರರಿಗೆ ಇನ್ನು ವಾರದಲ್ಲಿ ಕೇವಲ 5 ದಿನ ಮಾತ್ರ ಕೆಲಸ
ಸಿಎಂ ಭೂಪೇಶ್ ಬಘೇಲ್
TV9 Web
| Edited By: |

Updated on:Jan 26, 2022 | 1:01 PM

Share

ಬಹುತೇಕ ಐಟಿ ಕಂಪನಿಗಳಲ್ಲಿ, ಕೆಲವು ಖಾಸಗಿ ಕಂಪನಿಗಳಲ್ಲಿ ವಾರಕ್ಕೆ 5 ದಿನ ಮಾತ್ರ ಕೆಲಸವಿರುತ್ತದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ರಜೆಯನ್ನು (Weekend) ಆ ಕಂಪನಿಗಳ ಉದ್ಯೋಗಿಗಳು ಎಂಜಾಯ್ ಮಾಡುತ್ತಾರೆ. ಆದರೆ, ಸರ್ಕಾರಿ ನೌಕರರಿಗೆ ವಾರದಲ್ಲಿ ಭಾನುವಾರ ಮಾತ್ರ ರಜೆ ಇರುತ್ತದೆ. ಇದೀಗ ಛತ್ತೀಸ್​ಗಢ ತನ್ನ ಸರ್ಕಾರದ ಸಿಬ್ಬಂದಿಗೆ ದೊಡ್ಡ ರಿಲೀಫ್ ನೀಡಿದ್ದು, ಛತ್ತೀಸ್‌ಗಢ ಸರ್ಕಾರದ ನೌಕರರಿಗೆ ವಾರದಲ್ಲಿ 5 ದಿನ ಕೆಲಸ ಮಾಡಲು ಅವಕಾಶ ನೀಡಿದೆ. ಅಂಶದಾಯಿ ಪಿಂಚಣಿ ಯೋಜನೆಯ (Pension Scheme) ಭಾಗವಾಗಿ ಪಿಂಚಣಿಗಾಗಿ ಛತ್ತೀಸ್​ಗಢ ರಾಜ್ಯದ ಮೊತ್ತವನ್ನು ಶೇ.10ರಿಂದ ಶೇ.14ಕ್ಕೆ ಹೆಚ್ಚಿಸುವುದಾಗಿ ಛತ್ತೀಸ್​ಗಢ ಸರ್ಕಾರ (Chhattisgarh Government) ಘೋಷಿಸಿದೆ.

ಭಾರತದ 73ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಇತರ ಪ್ರಮುಖ ಘೋಷಣೆಗಳನ್ನು ಕೂಡ ಮಾಡಿದ್ದಾರೆ. ವಸತಿ ಪ್ರದೇಶಗಳಲ್ಲಿ ನಡೆಸುವ ವ್ಯಾಪಾರ ಚಟುವಟಿಕೆಗಳನ್ನು ಕ್ರಮಬದ್ಧಗೊಳಿಸಲು ಅಗತ್ಯವಾದ ನಿಬಂಧನೆಗಳನ್ನು ಮಾಡಲಾಗುವುದು. ಎಲ್ಲಾ ಅಕ್ರಮ ಕಟ್ಟಡಗಳ ಸಕ್ರಮಕ್ಕೆ ಈ ವರ್ಷ ಕಾನೂನು ತರಲಾಗುವುದು ಎಂದು ಸಿಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುನ್ಸಿಪಲ್ ಕಾರ್ಪೊರೇಷನ್ ಹೊರಗಿನ ಹೂಡಿಕೆ ಪ್ರದೇಶಗಳಲ್ಲಿ 500 ಚದರ ಮೀಟರ್ ವಿಸ್ತೀರ್ಣದ ಪ್ಲಾಟ್‌ಗಳಿಗೆ ಯಾವುದೇ ಹಸ್ತಕ್ಷೇಪವಿಲ್ಲದೆ ಕಟ್ಟಡದ ಅನುಮತಿಯನ್ನು ನೀಡಲಾಗುತ್ತದೆ. ನಗರ ಪ್ರದೇಶಗಳಂತೆ ಗ್ರಾಮೀಣ ಪ್ರದೇಶಗಳಲ್ಲಿ ಛತ್ತೀಸ್​ಗಢ ಸರ್ಕಾರವು ಗುತ್ತಿಗೆ ಪಡೆದ ಭೂಮಿಯನ್ನು ಫ್ರೀಹೋಲ್ಡ್ ಎಂದು ಕರೆಯಲಾಗುತ್ತದೆ. ಕಲಿಕಾ ಪರವಾನಗಿ ಮಾಡುವ ಪ್ರಕ್ರಿಯೆಯನ್ನು ಸರಳಗೊಳಿಸುವುದು ಮತ್ತು ಯುವಕರ ಉದ್ಯೋಗಕ್ಕಾಗಿ ಹೆಚ್ಚಿನ ಸಂಖ್ಯೆಯ ಸಾರಿಗೆ ಸೌಲಭ್ಯ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು.

ಸರ್ಕಾರಿ ನೌಕರರ ಹಿತದೃಷ್ಟಿಯಿಂದ ‘ಕಾಂಟ್ರಿಬ್ಯೂಟರಿ ಪಿಂಚಣಿ ಯೋಜನೆ’ಯ ಅಂತರ-ಕೈಗಾರಿಕಾ ನೀತಿಯನ್ನು ತಿದ್ದುಪಡಿ ಮಾಡುವ ಮೂಲಕ ಒಬಿಸಿಗಳಲ್ಲಿ ಉದ್ಯಮಶೀಲತೆ ಅಭಿವೃದ್ಧಿಗೆ ಶೇ.10ರಷ್ಟು ಪ್ಲಾಟ್‌ಗಳನ್ನು ಕಾಯ್ದಿರಿಸಲಾಗುತ್ತದೆ. 2022-23ರ ಖಾರಿಫ್‌ನಲ್ಲಿ ದ್ವಿದಳ ಧಾನ್ಯಗಳ ಖರೀದಿಯನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಮಾಡಲಾಗುತ್ತದೆ.

ಇದನ್ನೂ ಓದಿ: Video: ಛತ್ತೀಸ್​ಗಢ್​​ನ ಹಳ್ಳಿಯೊಂದರಲ್ಲಿ ವಿವಾದಿತ ಪ್ರತಿಜ್ಞಾ ವಿಧಿ ಸ್ವೀಕಾರ; ಕಾರ್ಯಕ್ರಮ ಆಯೋಜಕರನ್ನು ಹುಡುಕುತ್ತಿರುವ ಪೊಲೀಸರು !

ಕೊವಿಡ್ ಲಸಿಕೆ ಹಾಕಿಸಿಕೊಳ್ಳದಿದ್ದರೆ ಈ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಸಂಬಳವೇ ಸಿಗಲ್ಲ!

Published On - 12:56 pm, Wed, 26 January 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?