AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಪಕ್ಕದ ರಾಜ್ಯ ಸರ್ಕಾರದಿಂದ ಹೊಸ ಆಫರ್

ಜನಸಂಖ್ಯೆಯನ್ನು ಹೆಚ್ಚಿಸಲು ನೆರೆಯ ರಾಜ್ಯವಾದ ಆಂಧ್ರಪ್ರದೇಶ ಸರ್ಕಾರದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೊಸ ಘೋಷಣೆ ಮಾಡಿದ್ದಾರೆ. 3ನೇ ಮಗುವಿಗೆ 30,000 ರೂ. ನಗದು ಪ್ರೋತ್ಸಾಹ ಮತ್ತು ನಾಲ್ಕನೇ ಮಗುವಿಗೆ 40,000 ರೂ. ನಗದು ಪ್ರೋತ್ಸಾಹವನ್ನು ಘೋಷಿಸಿದ್ದಾರೆ. ಆಂಧ್ರಪ್ರದೇಶದಲ್ಲಿ ಕಡಿಮೆಯಾಗುತ್ತಿರುವ ಜನಸಂಖ್ಯೆಯನ್ನು ಪರಿಹರಿಸುವ ಪ್ರಯತ್ನಗಳ ಭಾಗವಾಗಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಇಂದು ಈ ಘೋಷಣೆ ಮಾಡಿದ್ದಾರೆ. ಇದು ಭಾರೀ ಚರ್ಚೆಗೆ ಕಾರಣವಾಗಿದೆ.

3 ಮಕ್ಕಳಾದರೆ 30,000 ರೂ., 4ನೇ ಮಗುವಿಗೆ 40,000 ರೂ! ಪಕ್ಕದ ರಾಜ್ಯ ಸರ್ಕಾರದಿಂದ ಹೊಸ ಆಫರ್
ChildrenImage Credit source: AI
ಸುಷ್ಮಾ ಚಕ್ರೆ
|

Updated on: May 16, 2026 | 7:48 PM

Share

ವಿಜಯವಾಡ, ಮೇ 16: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು (Chandrababu Naidu) ಇಂದು ರಾಜ್ಯದಲ್ಲಿ ಜನಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಕುತೂಹಲಕಾರಿಯಾದ ಯೋಜನೆಯನ್ನು ಘೋಷಿಸಿದ್ದಾರೆ. ನರಸನ್ನಪೇಟೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ರಾಜ್ಯದ ಯಾವುದೇ ಕುಟುಂಬದಲ್ಲಿ ಮೂರನೇ ಮಗುವಿನ ಜನನವಾದರೆ ಆ ಕುಟುಂಬಕ್ಕೆ ಸರ್ಕಾರವು 30,000 ರೂ. ಮತ್ತು ನಾಲ್ಕನೇ ಮಗುವಿಗೆ 40,000 ರೂ. ಪ್ರೋತ್ಸಾಹ ಧನ ನೀಡಲಿದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶದ ಜನಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಮಕ್ಕಳನ್ನು ಹೊರೆಯಾಗಿ ನೋಡುವ ಬದಲು ದೇಶದ ಸಂಪತ್ತಾಗಿ ನೋಡಬೇಕು ಎಂದು ಅವರು ಒತ್ತಿ ಹೇಳಿದರು. ಈ ಘೋಷಣೆ ಜನಸಂಖ್ಯಾ ಬೆಳವಣಿಗೆಯನ್ನು ಉತ್ತೇಜಿಸುವ ರಾಜ್ಯ ಸರ್ಕಾರದ ಯೋಜನೆಯ ಭಾಗವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ದಕ್ಷಿಣ ಭಾರತದಲ್ಲಿ ವೃದ್ಧರ ಸಂಖ್ಯೆ ಹೆಚ್ಚಳ, ಹೆಚ್ಚು ಮಕ್ಕಳನ್ನು ಹೊಂದುವಂತೆ ಯುವಕರಿಗೆ ಚಂದ್ರಬಾಬು ನಾಯ್ಡು ಸಲಹೆ

ಕುಸಿಯುತ್ತಿರುವ ಜನನ ದರಗಳು ಮತ್ತು ವಯಸ್ಸಾದ ಜನಸಂಖ್ಯೆ ಸೇರಿದಂತೆ ಬದಲಾಗುತ್ತಿರುವ ಜನಸಂಖ್ಯಾ ಮಾದರಿಗಳ ಕುರಿತು ಹಲವಾರು ರಾಜ್ಯಗಳಲ್ಲಿ ವ್ಯಾಪಕ ಚರ್ಚೆಗಳ ನಡುವೆ ಸಿಎಂ ಚಂದ್ರಬಾಬು ನಾಯ್ಡು ಅವರ ಈ ಹೇಳಿಕೆಗಳು ಬಂದಿವೆ.

ಜನಸಂಖ್ಯಾ ಬೆಳವಣಿಗೆಯನ್ನು ಉತ್ತೇಜಿಸುವ ಪ್ರಯತ್ನಗಳ ಭಾಗವಾಗಿ, ಮೂರನೇ ಮಗುವಿನ ಜನನದ ಕುಟುಂಬಗಳಿಗೆ 30,000 ರೂ. ಮತ್ತು ನಾಲ್ಕನೇ ಮಗುವಿನ ಜನನಕ್ಕೆ 40,000 ರೂ.ಗಳನ್ನು ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಘೋಷಿಸಿದರು. “ನಾನು ಇದರ ಬಗ್ಗೆ ಹಲವು ಬಾರಿ ಯೋಚಿಸಿದ್ದೇನೆ. ಹಿಂದೆ, ನಾನು ಕುಟುಂಬ ಯೋಜನೆಗಾಗಿ ಕೆಲಸ ಮಾಡಿದ್ದೇನೆ. ಆದರೆ ಇಂದು ಮತ್ತೊಮ್ಮೆ, ಮಕ್ಕಳು ನಮ್ಮ ಸಂಪತ್ತು, ನಾವೆಲ್ಲರೂ ನಮ್ಮ ಮಕ್ಕಳ ಹಿತದೃಷ್ಟಿಯಿಂದ ಕೆಲಸ ಮಾಡುವ ಅವಶ್ಯಕತೆಯಿದೆ. ಅದಕ್ಕಾಗಿಯೇ ನಾನು ಮತ್ತೊಂದು ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಮೂರನೇ ಮಗು ಹುಟ್ಟಿದ ತಕ್ಷಣ 30,000 ರೂ. ನೀಡುತ್ತೇವೆ. ನಾಲ್ಕನೇ ಮಗುವಿಗೆ ನಾವು 40,000 ರೂ. ನೀಡುತ್ತೇವೆ” ಎಂದು ಅವರು ಹೇಳಿದ್ದಾರೆ.

ಆಂಧ್ರಪ್ರದೇಶವು ಸುಮಾರು 5.37 ಕೋಟಿಯಿಂದ 5.40 ಕೋಟಿ ಜನಸಂಖ್ಯೆಯನ್ನು ಹೊಂದಿದೆ. ಇದು ಭಾರತದಲ್ಲಿ ಹತ್ತನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾಗಿದೆ. ಇದು ದೇಶದ ಒಟ್ಟು ಜನಸಂಖ್ಯೆಯ ಸುಮಾರು 3.76 ಪ್ರತಿಶತವನ್ನು ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಭೋಜಶಾಲೆಯಲ್ಲಿ ಹಿಂದೂ ಭಕ್ತರಿಂದ ಭಜನೆ
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಸ್ಲೀಪರ್ ಬಸ್ ಭಸ್ಮವಾದ್ರೂ 36 ಪ್ರಯಾಣಿಕರು ಪಾರಾಗಿದ್ಹೇಗೆ?
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!
ಭೂಪಟದಿಂದಲೇ ಮರೆಯಾಗಬೇಕಾದೀತು: ಪಾಕ್​ಗೆ ಸೇನಾ ಮುಖ್ಯಸ್ಥರ ಖಡಕ್ ಎಚ್ಚರಿಕೆ!