AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳು ಹುಟ್ಟಿದ ನೆನಪಿಗೆ ಶ್ರೀಗಂಧದ ಗಿಡ ನೆಡ್ತಾರೆ, ಆ ಮರವನ್ನೇ ಮಾರಾಟ ಮಾಡಿ ಆಕೆಯ ಮದುವೆ ಮಾಡ್ತಾರೆ, ಹೀಗೊಂದು ವಿಭಿನ್ನ ಪರಂಪರೆ

ಅಯ್ಯೋ ಹೆಣ್ಣುಮಗು ಹುಟ್ಟಿದೆ ಖರ್ಚು ಹೆಚ್ಚು, ಇನ್ನೆಷ್ಟು ವರದಕ್ಷಿಣೆ ಕೊಡಬೇಕಾಗುತ್ತೋ ಎಂದು ಮಗು ಹುಟ್ಟಿದಾಗಿನಿಂದ ಮದುವೆಯಾಗುವವರೆಗೂ ಜರಿಯುತ್ತಲೇ ಇರುತ್ತಾರೆ. ಆದರೆ ಬಿಹಾರದ ಈ ಹಳ್ಳಿಯಲ್ಲಿದೆ ವಿಭಿನ್ನ ಸಂಪ್ರದಾಯ. ಹೆಣ್ಣು ಮಗು ಹುಟ್ಟಿದೆ ಎಂದು ಯಾರೂ ಬೇಸರ ಮಾಡಿಕೊಳ್ಳುವುದಿಲ್ಲ, ಹೆಣ್ಣು ಮಗು ಹುಟ್ಟಿದ ಮನೆಯ ಹೊರಗೆ ಒಂದು ಶ್ರೀಗಂಧದ ಗಿಡವನ್ನು ನೆಡುತ್ತಾರೆ, ಅದು ಬೃಹತ್ ಮರವಾಗಿ ಬೆಳೆಯುವಷ್ಟರಲ್ಲಿ ಇತ್ತ ಮಗಳು ಕೂಡ ಮದುವೆಯ ವಯಸ್ಸಿನವಳಾಗಿರುತ್ತಾಳೆ. ಆಗ ಮರವನ್ನು ಕಡಿದು ಮಾರಾಟ ಮಾಡಿ ಅದೇ ದುಡ್ಡಿನಲ್ಲಿ ಖುಷಿಯಿಂದ ಮಗಳ ಮದುವೆ ಮಾಡಿಕೊಡುತ್ತಾರೆ.

ಮಗಳು ಹುಟ್ಟಿದ ನೆನಪಿಗೆ ಶ್ರೀಗಂಧದ ಗಿಡ ನೆಡ್ತಾರೆ, ಆ ಮರವನ್ನೇ ಮಾರಾಟ ಮಾಡಿ ಆಕೆಯ ಮದುವೆ ಮಾಡ್ತಾರೆ, ಹೀಗೊಂದು ವಿಭಿನ್ನ ಪರಂಪರೆ
ಮೀರಾ ದೇವಿ
ನಯನಾ ರಾಜೀವ್
|

Updated on: Aug 31, 2023 | 1:59 PM

Share

ಅಯ್ಯೋ ಹೆಣ್ಣುಮಗು ಹುಟ್ಟಿದೆ ಖರ್ಚು ಹೆಚ್ಚು, ಇನ್ನೆಷ್ಟು ವರದಕ್ಷಿಣೆ ಕೊಡಬೇಕಾಗುತ್ತೋ ಎಂದು ಮಗು ಹುಟ್ಟಿದಾಗಿನಿಂದ ಮದುವೆಯಾಗುವವರೆಗೂ ಜರಿಯುತ್ತಲೇ ಇರುತ್ತಾರೆ. ಆದರೆ ಬಿಹಾರದ ಈ ಹಳ್ಳಿಯಲ್ಲಿದೆ ವಿಭಿನ್ನ ಸಂಪ್ರದಾಯ. ಹೆಣ್ಣು ಮಗು ಹುಟ್ಟಿದೆ ಎಂದು ಯಾರೂ ಬೇಸರ ಮಾಡಿಕೊಳ್ಳುವುದಿಲ್ಲ, ಹೆಣ್ಣು ಮಗು ಹುಟ್ಟಿದ ಮನೆಯ ಹೊರಗೆ ಒಂದು ಶ್ರೀಗಂಧದ ಗಿಡವನ್ನು ನೆಡುತ್ತಾರೆ, ಅದು ಬೃಹತ್ ಮರವಾಗಿ ಬೆಳೆಯುವಷ್ಟರಲ್ಲಿ ಇತ್ತ ಮಗಳು ಕೂಡ ಮದುವೆಯ ವಯಸ್ಸಿನವಳಾಗಿರುತ್ತಾಳೆ. ಆಗ ಮರವನ್ನು ಕಡಿದು ಮಾರಾಟ ಮಾಡಿ ಅದೇ ದುಡ್ಡಿನಲ್ಲಿ ಖುಷಿಯಿಂದ ಮಗಳ ಮದುವೆ ಮಾಡಿಕೊಡುತ್ತಾರೆ.

ಗ್ರಾಮದ ಜನರು ಈ ಸಂಪ್ರದಾಯವನ್ನು ಅನುಸರಿಸುತ್ತಾರೆ ಮತ್ತು ನೆಟ್ಟ ಶ್ರೀಗಂಧದ ಮರವನ್ನು ರಕ್ಷಿಸುತ್ತಾರೆ. ಮಾಹಿತಿಯ ಪ್ರಕಾರ, ಈ ಸಂಪ್ರದಾಯವು ಬಿಹಾರದ ವೈಶಾಲಿ ಜಿಲ್ಲೆಯ ಬಿದೂರ್‌ಪುರದಿಂದ ಬಂದಿದೆ. ಪಕೋಲಿ ಎಂಬ ಹೆಸರಿನ ಗ್ರಾಮವಿದೆ, ಈ ಗ್ರಾಮದಲ್ಲಿ ನೀವು ಅನೇಕ ಜನರ ಮನೆಗಳ ಹೊರಗೆ ಶ್ರೀಗಂಧದ ಗಿಡಗಳನ್ನು ನೆಡುವುದನ್ನು ಕಾಣಬಹುದು.

ಈ ಕುರಿತು ಗ್ರಾಮದ ಮಹಿಳೆ ಮೀರಾದೇವಿ ಅವರೊಂದಿಗೆ ಚರ್ಚಿಸಿದಾಗ, ಈ ಗ್ರಾಮದಲ್ಲಿ ಸುಮಾರು 700 ಮನೆಗಳಿವೆ. ಪ್ರತಿ ಬಾಗಿಲಲ್ಲೂ ಒಂದರಿಂದ ನಾಲ್ಕು ಶ್ರೀಗಂಧದ ಮರಗಳನ್ನು ನೆಡಲಾಗಿದೆ. ಮಗಳ ಮದುವೆಗೆ ಹಣವಿಲ್ಲದಿದ್ದರೆ, ಹುಟ್ಟಿದ ಸಮಯದಲ್ಲಿ ನೆಟ್ಟ ಮರವನ್ನು ಮಾರಾಟ ಮಾಡುವ ಮೂಲಕ ಅವಳ ಮದುವೆಗೆ ಖರ್ಚು ಮಾಡಲಾಗುವುದು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಒಂದೇ ರಾತ್ರಿಯಲ್ಲಿ ಬೆಂಗಳೂರಿನ ಸಿಎಂಟಿಐ ಕ್ಯಾಂಪಸ್‌ನಿಂದ 23 ಶ್ರೀಗಂಧದ ಮರಗಳ ಕಳ್ಳತನ

ಮನೆಯಲ್ಲಿ ಹೆಣ್ಣು ಮಗು ಜನಿಸಿದರೆ ಅತ್ಯಂತ ಶ್ರೇಯಸ್ಸು ಭಾವಿಸುವ ಮೀರಾದೇವಿ, ಶ್ರೀಗಂಧದ ಗಿಡವನ್ನು ನೆಟ್ಟರೆ ಅದಕ್ಕೂ ಪುಣ್ಯ ಬರುತ್ತದೆ ಎಂದು ನಮ್ಮ ಪೂರ್ವಜರು ಹೇಳುತ್ತಾರೆ. ಹೆಣ್ಣು ಮಗುವಿನ ಜನನದೊಂದಿಗೆ ಶ್ರೀಗಂಧದ ಗಿಡವನ್ನು ನೆಡಲು ಇದು ಕಾರಣವಾಗಿದೆ. ಯಾರದೋ ಮನೆಯಲ್ಲಿ ಹೆಣ್ಣು ಮಗು ಹುಟ್ಟಿದರೆ ಶ್ರೀಗಂಧದ ಗಿಡವನ್ನು 5-6 ತಿಂಗಳ ನಂತರ ನೆಟ್ಟು ಅದನ್ನು ಯಾರೂ ಕದಿಯದಂತೆ, ಹಾನಿ ಮಾಡದಂತೆ ಸಂರಕ್ಷಿಸುತ್ತಾರೆ.

ಮೀರಾದೇವಿಯವರ ಮನೆಯ ಹೊರಗೆ ನಾಲ್ಕು ಶ್ರೀಗಂಧದ ಗಿಡಗಳನ್ನು ನೆಡಲಾಗಿದೆ. ಮೀರಾದೇವಿ ಅವರ ಮೊಮ್ಮಗಳು ಹುಟ್ಟಿದಾಗ ಈ ಗಿಡಗಳನ್ನು ನೆಡಲಾಗಿದೆ. ತಮ್ಮ ಗ್ರಾಮದಲ್ಲಿ ಹಲವು ತಲೆಮಾರುಗಳಿಂದ ಈ ಸಂಪ್ರದಾಯ ನಡೆದುಕೊಂಡು ಬಂದಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?