Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧೀಜಿಯ ಹಂತಕನನ್ನು ಆರಾಧಿಸುವವರು ಕಾಂಗ್ರೆಸ್​​ನ್ನು ವಿಸರ್ಜಿಸಬೇಕೆಂದು ಹೇಳುತ್ತಿದ್ದಾರೆ; ಮೋದಿ ಭಾಷಣ ವಿರುದ್ಧ ಖರ್ಗೆ ವಾಗ್ದಾಳಿ

ಪ್ರಧಾನಿ ಭಾಷಣಕ್ಕೆ ಪ್ರತಿಕ್ರಿಯಿಸಿದ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ನಿರ್ಣಯಕ್ಕೆ ಉತ್ತರಿಸುವ ಬದಲು ಮೋದಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ.

ಗಾಂಧೀಜಿಯ ಹಂತಕನನ್ನು ಆರಾಧಿಸುವವರು ಕಾಂಗ್ರೆಸ್​​ನ್ನು ವಿಸರ್ಜಿಸಬೇಕೆಂದು ಹೇಳುತ್ತಿದ್ದಾರೆ; ಮೋದಿ ಭಾಷಣ ವಿರುದ್ಧ ಖರ್ಗೆ ವಾಗ್ದಾಳಿ
ಮಲ್ಲಿಕಾರ್ಜುನ ಖರ್ಗೆ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Feb 08, 2022 | 7:38 PM

ದೆಹಲಿ: ರಾಷ್ಟ್ರಪತಿ ಭಾಷಣಕ್ಕೆ ವಂದನಾರ್ಪಣೆ ಚರ್ಚೆಗೆ ಉತ್ತರಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕಾಂಗ್ರೆಸ್ ವಿರುದ್ಧ ಸಂಪೂರ್ಣ ವಾಗ್ದಾಳಿ ನಡೆಸಿದ್ದಾರೆ. ಕೊವಿಡ್ -19 ನಿಂದಾಗಿ 2020 ರ ಮಾರ್ಚ್‌ನಲ್ಲಿ ಘೋಷಿಸಲಾದ ಹಠಾತ್ ರಾಷ್ಟ್ರವ್ಯಾಪಿ ಲಾಕ್‌ಡೌನ್‌ನಿಂದಾಗಿ (Lockdown) ಮುಂಬೈನಲ್ಲಿ ಸಿಕ್ಕಿಬಿದ್ದವರಿಗೆ ಉಚಿತ ರೈಲು ಟಿಕೆಟ್‌ಗಳನ್ನು ಹಸ್ತಾಂತರಿಸಿದ್ದಕ್ಕಾಗಿ ಕಾಂಗ್ರೆಸ್ ಪಕ್ಷವನ್ನು ಟೀಕಿಸಿದರು. ವಲಸಿಗರು ತಮ್ಮ ಮನೆಗಳನ್ನು ತಲುಪಲು ಸಹಾಯ ಮಾಡುವ ಕ್ರಮವು ಉತ್ತರ ಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಲ್ಲಿ ಕೊವಿಡ್ -19 ಹರಡಲು ಸಹಾಯ ಮಾಡಿದೆ ಎಂದು ಪ್ರಧಾನಿ ಹೇಳಿದ್ದಾರೆ. ಪ್ರಧಾನಿ ಭಾಷಣಕ್ಕೆ ಪ್ರತಿಕ್ರಿಯಿಸಿದ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಭಾಷಣಕ್ಕೆ ಧನ್ಯವಾದ ಸಲ್ಲಿಸುವ ನಿರ್ಣಯಕ್ಕೆ ಉತ್ತರಿಸುವ ಬದಲು ಮೋದಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಸಂಸದರು ಹೊರನಡೆದರು ಎಂದಿದ್ದಾರೆ. ಮೋದಿ ಕೇವಲ ಕಾಂಗ್ರೆಸ್ ಅನ್ನು ಗುರಿಯಾಗಿಸಿದ್ದಾರೆ, ಸದನದಲ್ಲಿ ಎಲ್ಲಾ ಪಕ್ಷಗಳ ಸದಸ್ಯರಿದ್ದಾರೆ. ಅವರು ಎಲ್ಲಾ ಯೋಜನೆಗಳ ಬಗ್ಗೆ ಮಾತನಾಡುತ್ತಾರೆ. ಅದರ ಬಗ್ಗೆ ಮಾತನಾಡುವ ಬದಲು ಮೋದಿ ಕಾಂಗ್ರೆಸ್ ಬಗ್ಗೆ ಟೀಕೆಗಳನ್ನು ಮಾಡಿದರು.  ಅವರು ಗಾಂಧೀಜಿಯನ್ನು ನೆನಪಿಸಿಕೊಂಡರು, ಗಾಂಧೀಜಿಯವರ ಹಂತಕನನ್ನು ಆರಾಧಿಸುವವರು ಕಾಂಗ್ರೆಸ್ ಅನ್ನು ವಿಸರ್ಜಿಸಬೇಕೆಂದು ನಮಗೆ ಹೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಇತರರನ್ನು ನಿಂದಿಸುವ ಮೂಲಕ ಪ್ರಧಾನಿ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವುದು ಸರಿಯಲ್ಲ ಎಂದು ಖರ್ಗೆ ಹೇಳಿದ್ದಾರೆ. “ಜನರು ತೊಂದರೆಯಲ್ಲಿದ್ದರು. ಅವರಿಗೆ ವಸತಿ, ಆಹಾರ, ನೀರು ಅಥವಾ ಬಟ್ಟೆ ಇರಲಿಲ್ಲ. ಅವರು ಎಲ್ಲಿಗೆ ಹೋಗುತ್ತಿದ್ದರು? ಅವರಿಗೆ ಸಹಾಯ ಮಾಡಿದ್ದು ತಪ್ಪೇ? ಒಬ್ಬ ಪ್ರಧಾನಿಯಾಗಿ ಇತರರನ್ನು ನಿಂದಿಸುವ ಮೂಲಕ ನಿಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವುದು ಸರಿಯಲ್ಲ,” ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸರ್ಕಾರವು ನಿಖರವಾದ ಕೊವಿಡ್-19 ಸಾವಿನ ಅಂಕಿಅಂಶಗಳನ್ನು ಹೊಂದಿಲ್ಲ ಎಂದು ಆರೋಪಿಸಿದ ಖರ್ಗೆ “ಪ್ರಧಾನಿ ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ಭಾಷಣ ಮಾಡುತ್ತಿದ್ದಾರೆ. ಅವರು ಮಾನವೀಯತೆಯ ಸಲುವಾಗಿ ಇದೆಲ್ಲವನ್ನೂ ಮೀರಬೇಕು ಎಂದು ಖರ್ಗೆ ಹೇಳಿದ್ದಾರೆ.

ಮಂಗಳವಾರ ಸದನದಲ್ಲಿ ಮಾತನಾಡಿದ ನರೇಂದ್ರ ಮೋದಿ ಬ್ರಿಟಿಷರ ಒಡೆದು ಆಳುವ  ನೀತಿಯನ್ನು ಅನುಸರಿಸುವ ಮೂಲಕ ಕಾಂಗ್ರೆಸ್ ಪಕ್ಷವು ಭಾರತದಲ್ಲಿ ಪ್ರತ್ಯೇಕತಾವಾದವನ್ನು ಬಲಪಡಿಸುತ್ತಿದೆ, ಅದು “ಟುಕ್ಡೇ ಟುಕ್ಡೇ ಗ್ಯಾಂಗ್‌ನ ನಾಯಕ” ಆಗುತ್ತಿದೆ ಎಂದು ಆರೋಪಿಸಿದ್ದರು. ಈಗ ‘ರಾಷ್ಟ್ರ’ವನ್ನು ಆಕ್ಷೇಪಿಸುತ್ತಿದ್ದಾರೆ. ‘ರಾಷ್ಟ್ರ’ದ ಕಲ್ಪನೆಯು ಅಸಾಂವಿಧಾನಿಕವಾಗಿದ್ದರೆ, ನಿಮ್ಮ ಪಕ್ಷವನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಎಂದು ಏಕೆ ಕರೆಯುತ್ತಾರೆ” ಎಂದು ಪ್ರಧಾನಿ ಮೋದಿ ಹೇಳಿದರು.

ಕಾಂಗ್ರೆಸ್ ಇಲ್ಲದಿದ್ದರೆ ರಾಜ್ಯಸಭೆಯು ರಾಜ್ಯಗಳ ಮಂಡಳಿಯಾಗಿ ಉಳಿಯುತ್ತಿತ್ತು

ಕಾಂಗ್ರೆಸ್ ಇಲ್ಲದಿದ್ದರೆ, ರಾಜ್ಯಸಭೆಯು 1919 ರ ಭಾರತ ಸರ್ಕಾರದ ಕಾಯಿದೆಯಡಿಯಲ್ಲಿ ರಾಜ್ಯಗಳ ಮಂಡಳಿಯಾಗಿ ಉಳಿಯುತ್ತಿತ್ತು, ಅಲ್ಲಿ ಸಾಮಾನ್ಯ ನಾಗರಿಕರ ಬದಲಿಗೆ, ರಾಜಕುಮಾರರು ಮತ್ತು ಆಡಳಿತಗಾರರು ಕುಳಿತು ರಾಣಿ ಎಲಿಜಬೆತ್ II ರನ್ನು ಹಾಡಿ ಹೊಗಳುತ್ತಿದ್ದರು ಎಂದು ಪಿ ಚಿದಂಬರಂ ಹೇಳಿದ್ದಾರೆ. ಅದೇ ವೇೆಳೆಕೊವಿಡ್ ಸಾಂಕ್ರಾಮಿಕ ಸಮಯದಲ್ಲಿ ಗಂಗಾದಲ್ಲಿ ಪತ್ತೆಯಾದ ಮೃತದೇಹಗಳ ಬಗ್ಗೆ, ಆಮ್ಲಜನಕದ ಕೊರತೆಯ ಮಾಹಿತಿ ಇಲ್ಲ ಎಂದು ಹೇಳಿದ ಸರ್ಕಾರವನ್ನು ಟೀಕಿಸಿದ್ದು ಇದು ಎನ್​​ಡಿಎಅಲ್ಲ ದತ್ತಾಂಶ ಲಭ್ಯವಿಲ್ಲದ ಸರ್ಕಾರ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿPM Modi in Parliament: ಕಾಂಗ್ರೆಸ್ ಇಲ್ಲದಿದ್ದರೆ ತುರ್ತು ಪರಿಸ್ಥಿತಿ, ಸಿಖ್ ದಂಗೆಗಳು ಸಂಭವಿಸುತ್ತಿರಲಿಲ್ಲ; ಸಂಸತ್​ನಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

Published On - 6:50 pm, Tue, 8 February 22

ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
ಬಾಹ್ಯಾಕಾಶದಿಂದ ಭೂಮಿಗೆ ಮರಳಿದ ಬಳಿಕ ಕ್ಯಾಪ್ಸುಲ್​ನಿಂದ ಹೊರ ಬಂದ ಸುನಿತಾ
‘ನನ್ನ ಕೊಲೆಗೆ ಡಿಕೆಶಿ ಸಹೋದರರು​ ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
‘ನನ್ನ ಕೊಲೆಗೆ ಡಿಕೆಶಿ ಸಹೋದರರು​ ಸೇರಿ 4 ಜನರಿಂದ ಸ್ಕೆಚ್’: ಮುನಿರತ್ನ ಆರೋಪ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
Daily Devotional: ಪೂಜೆ ಸಮಯದಲ್ಲಿ ಅಗರಬತ್ತಿ ಬಳಕೆಯ ಮಹತ್ವ ತಿಳಿಯಿರಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
ಸುನಿತಾ ವಿಲಿಯಮ್ಸ್, ವಿಲ್ಮೋರ್ ಲ್ಯಾಂಡಿಂಗ್: ಅದ್ಭುತ ವಿಡಿಯೋ ಇಲ್ಲಿದೆ ನೋಡಿ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
Daily Horoscope: ಮಿಥುನ ರಾಶಿಯವರಿಗೆ ಆರು ಗ್ರಹಗಳ ಶುಭಫಲವಿದೆ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ