AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಮಹಿಳೆಯರ ಬೆಂಬಲ; ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯ

International Women's Day: ಮಹಿಳಾ ದಿನಾಚರಣೆ ಪ್ರಯುಕ್ತ ರೈ ತರ ಪ್ರತಿಭಟನೆಯ ವೇದಿಕೆಯನ್ನು ಮಹಿಳೆಯರೇ ನಿರ್ವಹಿಸುತ್ತಾರೆ. ಇಲ್ಲಿ ಮಾತನಾಡುವವರೂ ಮಹಿಳೆಯರೇ ಆಗಿರುತ್ತಾರೆ. ಸಿಂಘು ಗಡಿಯಲ್ಲಿ ಸಣ್ಣದೊಂದು ಮೆರವಣಿಗೆ ನಡೆಯಲಿದೆ.

ದೆಹಲಿ ಗಡಿಭಾಗದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಮಹಿಳೆಯರ ಬೆಂಬಲ; ಕೃಷಿ ಕಾಯ್ದೆ ಹಿಂಪಡೆಯಲು ಒತ್ತಾಯ
ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತ ಮಹಿಳೆಯರು
ರಶ್ಮಿ ಕಲ್ಲಕಟ್ಟ
|

Updated on: Mar 08, 2021 | 11:42 AM

Share

ದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರುದ್ಧ ದೆಹಲಿ ಬಳಿಯ ಟಿಕ್ರಿ ಗಡಿಭಾಗದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ಸಾವಿರಾರು ರೈತ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಆಗಮಿಸಿದ್ದಾರೆ. ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಹೊತ್ತಲ್ಲಿ ಸಾವಿರಾರು ಮಹಿಳೆಯರು ರೈತ ಪ್ರತಿಭಟನೆಗೆ ಬಲ ತುಂಬಿದ್ದು, ಕೃಷಿ ಕಾಯ್ದೆ ಹಿಂಪಡೆಯುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಮೂರು ‘ಕಪ್ಪು ಕಾನೂನು’ಗಳನ್ನು ಹಿಂಪಡೆಯಬೇಕು ಎಂದು ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಟಿಕ್ರಿ ಗಡಿಭಾಗದಲ್ಲಿ ಪ್ರತಿಭಟನೆನಿರತ ರೈತ ಮಹಿಳೆಯೊಬ್ಬರು ಹೇಳಿದ್ದಾರೆ. ಗಾಜೀಪುರ್ ಮತ್ತು ಸಿಂಘು ಗಡಿಯಲ್ಲಿಯೂ ರೈತ ಮಹಿಳೆಯರು ಪ್ರತಿಭಟನೆ ನಿರತರಾಗಿದ್ದಾರೆ.

ಸಾಮಾಜಿಕ,ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ವಲಯದಲ್ಲಿ ಮಹಿಳೆಯರ ಸಾಧನೆಯನ್ನು ಕೊಂಡಾಡುವ ಸಲುವಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ.

ಮಹಿಳಾ ದಿನಾಚರಣೆ ಪ್ರಯುಕ್ತ ಈ ವೇದಿಕೆಯನ್ನು ಮಹಿಳೆಯರೇ ನಿರ್ವಹಿಸುತ್ತಾರೆ. ಇಲ್ಲಿ ಮಾತನಾಡುವವರೂ ಮಹಿಳೆಯರೇ ಆಗಿರುತ್ತಾರೆ. ಸಿಂಘು ಗಡಿಯಲ್ಲಿ ಸಣ್ಣದೊಂದು ಮೆರವಣಿಗೆ ನಡೆಯಲಿದೆ. ವಿವಿಧ ಪ್ರತಿಭಟನಾ ಸ್ಥಳಗಳಲ್ಲಿ ಹೆಚ್ಚಿನ ಮಹಿಳೆಯರು ಭಾಗವಹಿಸುವ ನಿರೀಕ್ಷೆ ಇದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ (SKM) ಸದಸ್ಯೆ, ರೈತ ನಾಯಕಿ ಕವಿತಾ ಕುರುಗ್ರಾಂಥಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಸೋಮವಾರ ಟಿಕ್ರಿ ಗಡಿಯಲ್ಲಿ 15,000 ಮತ್ತು ಸಿಂಘು ಗಡಿಯಲ್ಲಿ 4,000ಮಹಿಳಾ ಪ್ರತಿಭಟನೆಕಾರರು ಬಂದು ಸೇರುವ ನಿರೀಕ್ಷೆ ಇದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹೇಳಿದೆ. ಕೇಂದ್ರ ಸರ್ಕಾರದ ಕೃಷಿ ಕಾನೂನು ಹಿಂಪಡೆಯಬೇಕು ಎಂದು ಒತ್ತಾಯಿಸಿ ಸಾವಿರಾರು ರೈತರು ಕಳೆದ ವರ್ಷ ಸೆಪ್ಟೆಂಬರ್ ತಿಂಗಳಿನಿಂದ ಪ್ರತಿಭಟನೆ ನಿರತರಾಗಿದ್ದಾರೆ. ನವೆಂಬರ್ 26ರಂದು ಆರಂಭವಾದ ರೈತರ ಹೋರಾಟ 100 ದಿನಗಳನ್ನು ಪೂರೈಸಿದ್ದು, ಕೇಂದ್ರ ಸರ್ಕಾರ ಕೃಷಿ ಕಾಯ್ದೆ ಹಿಂಪಡೆಯುವ ತನಕ ಹೋರಾಟ ಮುಂದುವರಿಸುತ್ತೇವೆ ಎಂದು ರೈತ ಮುಖಂಡರು ಹೇಳಿದ್ದಾರೆ.

18 ತಿಂಗಳುಗಳ ಕಾಲ ಈ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದ್ದು, ರೈತರ ಜತೆ ಇಲ್ಲಿಯವರೆಗೆ 11 ಸುತ್ತು ಮಾತುಕತೆ ನಡೆಸಿದೆ. ಆದಾಗ್ಯೂ, ಕಾಯ್ದೆ ಹಿಂಪಡೆಯದೆ ಪ್ರತಿಭಟನೆ ನಿಲ್ಲಿಸುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ.

ಮಹಿಳೆಯರು ಪುರುಷರಿಗಿಂತ ಕಡಿಮೆ ಅಲ್ಲ – ಟಿಕಾಯತ್ ಟ್ವೀಟ್  

ಮಹಿಳೆಯರು ಪುರುಷರಿಗಿಂತ ಕಡಿಮೆ ಇಲ್ಲ. ಅವರು  ಜೀವನದ ಕಠಿಣ ಕಾರ್ಯಗಳನ್ನು ಮಾಡಲು ಅರ್ಹತೆಯುಳ್ಳವರು.  ಇವತ್ತು ಅಂತರರಾಷ್ಟ್ರೀಯ ಮಹಿಳಾ ದಿನ. ರೈತರ ಪ್ರತಿಭಟನೆಯಲ್ಲಿ  ಭಾಗಿಯಾಗಲು ಮುಂದೆ ಬಂದ ಎಲ್ಲ ಮಹಿಳೆಯರಿಗೂ ಸಲಾಂ ಎಂದು  ರೈತ ಮುಖಂಡ  ರಾಕೇಶ್ ಟಿಕಾಯತ್ ಟ್ವೀಟ್ ಮಾಡಿದ್ದಾರೆ.

ರೈತ ಪ್ರತಿಭಟನೆಗೆ ಬಲ ತುಂಬಲು ಟಿಕಾಯತ್ ಸೂತ್ರ ರೈತರ ಹೋರಾಟಕ್ಕೆ ಪುಷ್ಠಿ ನೀಡಿಲು ಮತ್ತು ಹೋರಾಟವನ್ನು ಮುಂದುವರಿಸುವುದಕ್ಕಾಗಿ ಟಿಕಾಯತ್ ಹೊಸ ಸೂತ್ರವನ್ನು ಮುಂದಿಟ್ಟಿದ್ದಾರೆ. ಈ ಸೂತ್ರದ ಪ್ರಕಾರ ಪ್ರತಿ ಗ್ರಾಮದಿಂದ 15 ಮಂದಿ 10 ದಿನಗಳ ಕಾಲ ಪ್ರತಿಭಟನೆಯಲ್ಲಿ ಭಾಗವಹಿಸಬೇಕು. ಇದಾದನಂತರ ಮತ್ತೆ 15 ಮಂದಿ ಹತ್ತು ದಿನಗಳ ಕಾಲ ಪ್ರತಿಭಟನೆಯಲ್ಲಿರಬೇಕು. ಹೀಗೆ ಮೊದಲು ಪ್ರತಿಭಟನೆಯಲ್ಲಿ ಭಾಗವಹಿಸಿದವರು ತಮ್ಮ ಕೃಷಿ ಕೆಲಸಗಳಿಗಾಗಿ ಊರಿಗೆ ಮರಳಬಹುದು.

 ಇದನ್ನೂ ಓದಿ: ಕೃಷಿ ಕಾಯ್ದೆ ವಿರುದ್ಧ ರೈತರ ಹೋರಾಟಕ್ಕೆ ಟಿಕಾಯತ್ ಸೂತ್ರ; 1 ಗ್ರಾಮ, 1 ಟ್ರ್ಯಾಕ್ಟರ್, 10 ದಿನಗಳ ಕಾಲ 15 ಮಂದಿ ಪ್ರತಿಭಟನೆಯಲ್ಲಿ ಭಾಗಿ

Follow Us
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಅಂಜನಾದ್ರಿ ಆಂಜನೇಯನಿಗೆ ಸಮರ್ಪಿಸಿದ್ದ ಬಂಗಾರ ವಿವಾದಕ್ಕೆ ತೆರೆ
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಹಿಜಾಬ್​​ಗೆ ಅವಕಾಶ ಬೆನ್ನಲ್ಲೇ ಕೇಸರಿ ಶಾಲು ಬಗ್ಗೆ ಸಚಿವರು ಹೇಳಿದ್ದೇನು?
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಕೊಳಚೆ ಪ್ರವಾಹ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಮಗಳೊಟ್ಟಿಗೆ ಖುಷಿಯಿಂದ ಡ್ಯಾನ್ಸ್ ಮಾಡಿದ್ದರು ದಿಲೀಪ್ ರಾಜ್: ವಿಡಿಯೋ
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
ಹಿಜಾಬ್​​ಗೆ ಅನುಮತಿ ನೀಡಿರುವ ಬಗ್ಗೆ ಶಿಕ್ಷಣ ಸಚಿವ ಹೇಳಿದ್ದಿಷ್ಟು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
‘ಧುರಂಧರ್’ ನಿರ್ದೇಶಕ ಆದಿತ್ಯ ಧರ್​​ಗೆ ಸಚಿವ ಸಂತೋಷ್ ಲಾಡ್ ಸವಾಲು
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
10 ವರ್ಷದ ಬಳಿಕ ಚೀನಾಗೆ ತೆರಳಿದ ಟ್ರಂಪ್​ಗೆ ಅದ್ದೂರಿ ಸ್ವಾಗತ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ