AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

9/11ರ ಮಾದರಿಯಲ್ಲೇ ದಾಳಿ ಬೆದರಿಕೆ; ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ

ಲಂಡನ್​​ಗೆ ಹೋಗುವ ಏರ್​ ಇಂಡಿಯಾ ವಿಮಾನದ ಮೇಲೆ, 9 /11ರ ಯುಎಸ್​ ದಾಳಿಯ ಮಾದರಿಯಲ್ಲೇ ದಾಳಿ ನಡೆಸುತ್ತೇವೆ, ಅದನ್ನು ಸ್ಫೋಟಿಸುತ್ತೇವೆ ಎಂದು ಬೆದರಿಕೆ ಕರೆ ಬಂದಿದೆ.

9/11ರ ಮಾದರಿಯಲ್ಲೇ ದಾಳಿ ಬೆದರಿಕೆ; ದೆಹಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ
ದೆಹಲಿ ವಿಮಾಣ ನಿಲ್ದಾಣ
TV9 Web
| Edited By: |

Updated on:Sep 11, 2021 | 10:01 AM

Share

ಜಗತ್ತಿನ ಇತಿಹಾಸದಲ್ಲಿ ಅತ್ಯಂತ ಕ್ರೂರವಾದ ಉಗ್ರದಾಳಿ ಎಂದೇ ಪರಿಗಣಿಸಲ್ಪಟ್ಟ ದಿನವೆಂದರೆ 9/11/2001. ಅಂದು ಅಮೆರಿಕದ ಮೇಲೆ ನಡೆದ ದಾಳಿಗೆ ಇಂದು ಸರಿಯಾಗಿ 20 ವರ್ಷ. ಆದರೆ ಆತಂಕದ ವಿಚಾರವೆಂದರೆ ಅದೇ ಮಾದರಿಯಲ್ಲಿ ಏರ್​ ಇಂಡಿಯಾ ವಿಮಾನವೊಂದನ್ನು ಸ್ಫೋಟಿಸುತ್ತೇವೆ ಎಂದು ದೆಹಲಿ ಪೊಲೀಸರಿಗೆ ಬೆದರಿಕೆ ಕರೆ ಬಂದಿದೆ. ಈ ನಿಟ್ಟಿನಲ್ಲಿ ದೆಹಲಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. 

ಲಂಡನ್​​ಗೆ ಹೋಗುವ ಏರ್​ ಇಂಡಿಯಾ ವಿಮಾನದ ಮೇಲೆ, 9 /11ರ ಯುಎಸ್​ ದಾಳಿಯ ಮಾದರಿಯಲ್ಲೇ ದಾಳಿ ನಡೆಸುತ್ತೇವೆ, ಅದನ್ನು ಸ್ಫೋಟಿಸುತ್ತೇವೆ ಎಂದು ರಹೋಲಾ ಪೊಲೀಸ್​ ಠಾಣೆಗೆ ಗುರುವಾರ ರಾತ್ರಿ 10.30ರ ಹೊತ್ತಿಗೆ ಬೆದರಿಕೆ ಕರೆ ಬಂದಿದೆ. ಅಷ್ಟೇ ಅಲ್ಲ, ಶುಕ್ರವಾರ ಬೆಳಗ್ಗೆ ಕೂಡ, ದೆಹಲಿ ವಿಮಾನ ನಿಲ್ದಾಣವನ್ನು ನಾವು ವಶಪಡಿಸಿಕೊಳ್ಳುವ ಸಂಬಂಧ ಬೆದರಿಕೆ ಕರೆ ಬಂದಿದೆ. ಹೀಗಾಗಿ ಭದ್ರತಾ ಪಡೆಗಳಿಗೆ ಅಲರ್ಟ್​ ನೀಡಲಾಗಿದ್ದು, ವಿಮಾನ ನಿಲ್ದಾಣದ ಭದ್ರತೆ ಹೆಚ್ಚಿದೆ.  ಈ ಬಗ್ಗೆ ಪೊಲೀಸ್​ ಅಧಿಕಾರಿಯೊಬ್ಬರು ಎಎನ್​ಐ ಸುದ್ದಿ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.   ಸದ್ಯ ವಿಮಾನ ನಿಲ್ದಾಣದಲ್ಲಿ ಪ್ರತಿಯೊಬ್ಬರನ್ನೂ ಹೆಚ್ಚೆಚ್ಚು ಗಮನವಿರಿಸಿ ಪರಿಶೀಲನೆ ನಡೆಸಲಾಗುತ್ತಿದ್ದು, ಬೆದರಿಕೆ ಕರೆ ಕುರಿತು ತನಿಖೆಯೂ ನಡೆಯುತ್ತಿದೆ.

ಇದನ್ನೂ ಓದಿ: ದೇಶದಲ್ಲಿ 3ನೇ ಸ್ಥಾನ ಹೊಂದಿರುವ ಹಾಸನ ಹಾಲು ಒಕ್ಕೂಟದಿಂದ ಇನ್ಮುಂದೆ ಅತ್ಯಾಧುನಿಕ ಸುವಾಸಿತ ಹಾಲು ಉತ್ಪಾದನೆ!

Published On - 9:59 am, Sat, 11 September 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ