AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಮುಂಬೈ ಜುಹು ಬಳಿ ಸಮುದ್ರದಲ್ಲಿ ಮುಳುಗಿದ 4 ಬಾಲಕರು; ಮುಂದುವರಿದ ಹುಡುಕಾಟ

ಮುಂಬೈಯ ಜುಹುವಿನ ಸಮುದ್ರದಲ್ಲಿ ನಾಲ್ವರು ಬಾಲಕರು ಮುಳುಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದು ಇವರಿಗಾಗಿ ತೀವ್ರ ಹುಡುಕಾಟ ಮುಂದುವರಿದಿದೆ.

Mumbai: ಮುಂಬೈ ಜುಹು ಬಳಿ ಸಮುದ್ರದಲ್ಲಿ ಮುಳುಗಿದ 4 ಬಾಲಕರು; ಮುಂದುವರಿದ ಹುಡುಕಾಟ
ಜುಹು ಬೀಚ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jun 12, 2023 | 8:07 PM

Share

ಬಿಪೋರ್​​ಜಾಯ್  ಚಂಡಮಾರುತದ (Cyclone Biparjoy) ಅಬ್ಬರದ ನಡುವೆಯೇ ಮುಂಬೈಯ (Mumbai) ಜುಹುವಿನ ಸಮುದ್ರದಲ್ಲಿ (Juhu Beach) ನಾಲ್ವರು ಬಾಲಕರು ಮುಳುಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇವರಿಗಾಗಿ ಹುಡುಕಾಟ ಮುಂದುವರಿದಿದೆ. ಒಟ್ಟು 5 ಬಾಲಕರು ಸಮುದ್ರದಲ್ಲಿ ಮುಳುಗಿದ್ದರು, ಇವರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಇಂಡಿಯಾ ಟಿವಿ ನ್ಯೂಸ್ ಡಾಟ್ ಕಾಮ್ ವರದಿ ಮಾಡಿದೆ. ಸೋಮವಾರ ಮುಂಬೈನ ಜುಹು ಬೀಚ್‌ನಲ್ಲಿ ಐವರು ಮುಳುಗಿದ್ದು, ಈ ಪೈಕಿ ಒಬ್ಬರನ್ನು ಸ್ಥಳೀಯರು ರಕ್ಷಿಸಿದ್ದು, 4 ಮಂದಿ ನಾಪತ್ತೆಯಾಗಿದ್ದಾರೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಜುಹು ಕಡಲತೀರದಲ್ಲಿ 5 ಜನರು ವಾಕ್ ಮಾಡಲು ಹೋದಾಗ ಭಾರೀ ಅಲೆಗಳು ಅವರನ್ನು ಎಳೆದೊಯ್ದಿದೆ.

ಮುಂಬೈ ಪ್ರಸ್ತುತ ಬಿಪೋರ್​​ಜಾಯ್  ಚಂಡಮಾರುತದ ಪರಿಣಾಮಗಳನ್ನು ಎದುರಿಸುತ್ತಿದೆ. ಮಹಾರಾಷ್ಟ್ರದ ರಾಜಧಾನಿಯ ಮೇಲೆ ಚಂಡಮಾರುತದ ಪ್ರಭಾವವು ನಿಧಾನವಾಗಿ ಹೆಚ್ಚು ಸ್ಪಷ್ಟವಾಗುತ್ತಿದೆ. ವಾರಾಂತ್ಯದ ಆರಂಭದಿಂದಲೂ ಬಿರುಸಾದ ಗಾಳಿ ಅನುಭವಿಸುತ್ತಿರುವ ಕರಾವಳಿ ನಗರವು ಮುಂದಿನ ಒಂದು ಅಥವಾ ಎರಡು ದಿನಗಳವರೆಗೆ ಬಲವಾದ ಗಾಳಿ ಮತ್ತು  ಮಳೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ.

12 ರಿಂದ 15 ವರ್ಷ ವಯಸ್ಸಿನ ಹುಡುಗರು ತೀರದಿಂದ ಸುಮಾರು ಅರ್ಧ ಕಿಲೋಮೀಟರ್ ಸಮುದ್ರದಲ್ಲಿ ಮುಳುಗಿದರು. ಇದರಲ್ಲಿ ಒಬ್ಬನನ್ನು , ಸ್ಥಳೀಯ ಮೀನುಗಾರರಿಂದ ರಕ್ಷಿಸಿದ್ದಾರೆ

ಸಮುದ್ರದಲ್ಲಿ ಹೆಚ್ಚಿನ ಉಬ್ಬರವಿಳಿತವು ಶೋಧ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: CoWin ಪೋರ್ಟಲ್ ಸುರಕ್ಷಿತ, ಡೇಟಾ ಸೋರಿಕೆ ವರದಿ ಆಧಾರರಹಿತ: ಕೇಂದ್ರ ಸರ್ಕಾರ

ಪ್ರತಿ ಮುಂಬೈ ಬೀಚ್‌ನಲ್ಲಿ, ನಗರದ ನಾಗರಿಕ ಸಂಸ್ಥೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಥವಾ BMC ಯಿಂದ ಜೀವರಕ್ಷಕರನ್ನು ನೇಮಿಸಲಾಗಿದೆ. ಕಡಲತೀರಗಳಲ್ಲಿ ಹಲವಾರು ಕೆಂಪು ಬಾವುಟ ನೆಟ್ಟಿದ್ದು  ಇದು ದೊಡ್ಡ ಅಲೆಗಳು ಮತ್ತು ಬಲವಾದ ಪ್ರವಾಹಗಳನ್ನು ಸೂಚಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Mon, 12 June 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?