AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mumbai: ಮುಂಬೈ ಜುಹು ಬಳಿ ಸಮುದ್ರದಲ್ಲಿ ಮುಳುಗಿದ 4 ಬಾಲಕರು; ಮುಂದುವರಿದ ಹುಡುಕಾಟ

ಮುಂಬೈಯ ಜುಹುವಿನ ಸಮುದ್ರದಲ್ಲಿ ನಾಲ್ವರು ಬಾಲಕರು ಮುಳುಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದು ಇವರಿಗಾಗಿ ತೀವ್ರ ಹುಡುಕಾಟ ಮುಂದುವರಿದಿದೆ.

Mumbai: ಮುಂಬೈ ಜುಹು ಬಳಿ ಸಮುದ್ರದಲ್ಲಿ ಮುಳುಗಿದ 4 ಬಾಲಕರು; ಮುಂದುವರಿದ ಹುಡುಕಾಟ
ಜುಹು ಬೀಚ್
Follow us
ರಶ್ಮಿ ಕಲ್ಲಕಟ್ಟ
|

Updated on:Jun 12, 2023 | 8:07 PM

ಬಿಪೋರ್​​ಜಾಯ್  ಚಂಡಮಾರುತದ (Cyclone Biparjoy) ಅಬ್ಬರದ ನಡುವೆಯೇ ಮುಂಬೈಯ (Mumbai) ಜುಹುವಿನ ಸಮುದ್ರದಲ್ಲಿ (Juhu Beach) ನಾಲ್ವರು ಬಾಲಕರು ಮುಳುಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇವರಿಗಾಗಿ ಹುಡುಕಾಟ ಮುಂದುವರಿದಿದೆ. ಒಟ್ಟು 5 ಬಾಲಕರು ಸಮುದ್ರದಲ್ಲಿ ಮುಳುಗಿದ್ದರು, ಇವರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಇಂಡಿಯಾ ಟಿವಿ ನ್ಯೂಸ್ ಡಾಟ್ ಕಾಮ್ ವರದಿ ಮಾಡಿದೆ. ಸೋಮವಾರ ಮುಂಬೈನ ಜುಹು ಬೀಚ್‌ನಲ್ಲಿ ಐವರು ಮುಳುಗಿದ್ದು, ಈ ಪೈಕಿ ಒಬ್ಬರನ್ನು ಸ್ಥಳೀಯರು ರಕ್ಷಿಸಿದ್ದು, 4 ಮಂದಿ ನಾಪತ್ತೆಯಾಗಿದ್ದಾರೆ ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೂಲಗಳ ಪ್ರಕಾರ, ಜುಹು ಕಡಲತೀರದಲ್ಲಿ 5 ಜನರು ವಾಕ್ ಮಾಡಲು ಹೋದಾಗ ಭಾರೀ ಅಲೆಗಳು ಅವರನ್ನು ಎಳೆದೊಯ್ದಿದೆ.

ಮುಂಬೈ ಪ್ರಸ್ತುತ ಬಿಪೋರ್​​ಜಾಯ್  ಚಂಡಮಾರುತದ ಪರಿಣಾಮಗಳನ್ನು ಎದುರಿಸುತ್ತಿದೆ. ಮಹಾರಾಷ್ಟ್ರದ ರಾಜಧಾನಿಯ ಮೇಲೆ ಚಂಡಮಾರುತದ ಪ್ರಭಾವವು ನಿಧಾನವಾಗಿ ಹೆಚ್ಚು ಸ್ಪಷ್ಟವಾಗುತ್ತಿದೆ. ವಾರಾಂತ್ಯದ ಆರಂಭದಿಂದಲೂ ಬಿರುಸಾದ ಗಾಳಿ ಅನುಭವಿಸುತ್ತಿರುವ ಕರಾವಳಿ ನಗರವು ಮುಂದಿನ ಒಂದು ಅಥವಾ ಎರಡು ದಿನಗಳವರೆಗೆ ಬಲವಾದ ಗಾಳಿ ಮತ್ತು  ಮಳೆಗೆ ಸಾಕ್ಷಿಯಾಗುವ ಸಾಧ್ಯತೆಯಿದೆ.

12 ರಿಂದ 15 ವರ್ಷ ವಯಸ್ಸಿನ ಹುಡುಗರು ತೀರದಿಂದ ಸುಮಾರು ಅರ್ಧ ಕಿಲೋಮೀಟರ್ ಸಮುದ್ರದಲ್ಲಿ ಮುಳುಗಿದರು. ಇದರಲ್ಲಿ ಒಬ್ಬನನ್ನು , ಸ್ಥಳೀಯ ಮೀನುಗಾರರಿಂದ ರಕ್ಷಿಸಿದ್ದಾರೆ

ಸಮುದ್ರದಲ್ಲಿ ಹೆಚ್ಚಿನ ಉಬ್ಬರವಿಳಿತವು ಶೋಧ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: CoWin ಪೋರ್ಟಲ್ ಸುರಕ್ಷಿತ, ಡೇಟಾ ಸೋರಿಕೆ ವರದಿ ಆಧಾರರಹಿತ: ಕೇಂದ್ರ ಸರ್ಕಾರ

ಪ್ರತಿ ಮುಂಬೈ ಬೀಚ್‌ನಲ್ಲಿ, ನಗರದ ನಾಗರಿಕ ಸಂಸ್ಥೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಅಥವಾ BMC ಯಿಂದ ಜೀವರಕ್ಷಕರನ್ನು ನೇಮಿಸಲಾಗಿದೆ. ಕಡಲತೀರಗಳಲ್ಲಿ ಹಲವಾರು ಕೆಂಪು ಬಾವುಟ ನೆಟ್ಟಿದ್ದು  ಇದು ದೊಡ್ಡ ಅಲೆಗಳು ಮತ್ತು ಬಲವಾದ ಪ್ರವಾಹಗಳನ್ನು ಸೂಚಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Mon, 12 June 23

ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಬೆಂಗಳೂರಿನ ದೊಡ್ಡಕಲ್ಲಸಂದ್ರ ರಸ್ತೆಯ ದುಸ್ಥಿತಿ: ವಿಡಿಯೋ ಮಾಡಿ ತೋರಿಸಿದ ನಟ
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ