30 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ, ಮೂವರು ಯೋಧರು ಹುತಾತ್ಮ

ಹಿಮಾಚಲಪ್ರದೇಶದ ಕಿನ್ನೊರ್​ ಜಿಲ್ಲೆಯ ಕರಛಮದಲ್ಲಿ ಯೋಧರ ವಾಹನ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. 8 ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯೋಧರಿಗೆ ಡ್ರೈವಿಂಗ್​ ಕಲಿಸುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕಕ್ಕೆ ಉರುಳಿ ಅವಘಡ ಸಂಭವಿಸಿದೆ. ಬೆಳೆ ತ್ಯಾಜ್ಯಕ್ಕೆ ಬೆಂಕಿ ಪಂಜಾಬ್‌ನ ಲುಧಿಯಾನಾ ಹೆದ್ದಾರಿಯಲ್ಲಿ ಬೆಳೆ ತ್ಯಾಜ್ಯ ಸುಡುವಿಕೆ ಮುಂದುವರೆದಿದೆ. ರಾಷ್ಟ್ರ ರಾಜಧಾನಿ ಸುತ್ತಮುತ್ತ ರಾಜ್ಯದಲ್ಲಿ ತಾಜ್ಯ ಸುಡುವುದರಿಂದ ದೆಹಲಿಯಲ್ಲಿ ಸಾಕಷ್ಟು ವಾಯುಮಾಲಿನ್ಯ ವಾಗುತ್ತಿದ್ರೂ, ಬೆಳೆ […]

30 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ, ಮೂವರು ಯೋಧರು ಹುತಾತ್ಮ
ಸಾಧು ಶ್ರೀನಾಥ್​

Updated on: Nov 24, 2019 | 3:03 PM

ಹಿಮಾಚಲಪ್ರದೇಶದ ಕಿನ್ನೊರ್​ ಜಿಲ್ಲೆಯ ಕರಛಮದಲ್ಲಿ ಯೋಧರ ವಾಹನ 30 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. 8 ಯೋಧರು ಗಂಭೀರವಾಗಿ ಗಾಯಗೊಂಡಿದ್ದು, ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಯೋಧರಿಗೆ ಡ್ರೈವಿಂಗ್​ ಕಲಿಸುತ್ತಿರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಂದಕಕ್ಕೆ ಉರುಳಿ ಅವಘಡ ಸಂಭವಿಸಿದೆ.

ಬೆಳೆ ತ್ಯಾಜ್ಯಕ್ಕೆ ಬೆಂಕಿ
ಪಂಜಾಬ್‌ನ ಲುಧಿಯಾನಾ ಹೆದ್ದಾರಿಯಲ್ಲಿ ಬೆಳೆ ತ್ಯಾಜ್ಯ ಸುಡುವಿಕೆ ಮುಂದುವರೆದಿದೆ. ರಾಷ್ಟ್ರ ರಾಜಧಾನಿ ಸುತ್ತಮುತ್ತ ರಾಜ್ಯದಲ್ಲಿ ತಾಜ್ಯ ಸುಡುವುದರಿಂದ ದೆಹಲಿಯಲ್ಲಿ ಸಾಕಷ್ಟು ವಾಯುಮಾಲಿನ್ಯ ವಾಗುತ್ತಿದ್ರೂ, ಬೆಳೆ ತ್ಯಾಜ್ಯ ಸುಡುವುದನ್ನ ನಿಲ್ಲಿಸಿಲ್ಲ. ಬೆಳೆ ತಾಜ್ಯಕ್ಕೆ ಬೆಂಕಿ ಹಾಕಿದ್ರಿಂದ ಸಾಕಷ್ಟು ವಾಯುಮಾಲಿನ್ಯ ಆಗುತ್ತಿದ್ದು, ದಟ್ಟ ಹೊಗೆ ಆವರಿಸಿದೆ.

ಹರಿದು ಬಂದ ವಿದೇಶಿ ವಿನಿಮಯ
ಭಾರತಕ್ಕೆ ಮಿಲಿಯನ್ ಡಾಲರ್ ವಿದೇಶಿ ವಿನಿಮಯ ಹರಿದು ಬಂದಿದೆ. ಭಾರತದ ವಿದೇಶಿ ವಿನಿಮಯ ಸಂಗ್ರಹವು 2019ರ ನವೆಂಬರ್ 15ಕ್ಕೆ ಕೊನೆಗೊಂಡ ವಾರದಲ್ಲಿ ₹ 317 ಕೋಟಿಗೆ ಹೆಚ್ಚಾಗಿ 32.25 ಲಕ್ಷಕೋಟಿಗೆ ತಲುಪಿದೆ ಎಂದು ಆರ್‌ಬಿಐ ತಿಳಿಸಿದೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us