AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

QR Code Scam: OLXನಲ್ಲಿ ಸೋಫಾ ಕೊಳ್ಳುವುದಾಗಿ ಹೇಳಿ ಅರವಿಂದ್ ಕೇಜ್ರಿವಾಲ್ ಪುತ್ರಿಗೆ ಮೋಸ ಮಾಡಿದ ಆರೋಪಿಗಳು ಅರೆಸ್ಟ್

QR Code Scam: ಸಜೀದ್, ಕಪಿಲ್ ಮತ್ತು ಮನ್ವೇಂದ್ರ ಎಂಬುವವರು ಸೆರೆಸಿಕ್ಕಿದ್ದು, ಇ-ಕಾಮರ್ಸ್​ ಸೈಟ್​ನಲ್ಲಿ ನಕಲಿ ಖಾತೆ ತೆರೆದು ಜನರಿಗೆ ಟೋಪಿ ಹಾಕುತ್ತಿದ್ದ ಇನ್ನೊಬ್ಬ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.

QR Code Scam: OLXನಲ್ಲಿ ಸೋಫಾ ಕೊಳ್ಳುವುದಾಗಿ ಹೇಳಿ ಅರವಿಂದ್ ಕೇಜ್ರಿವಾಲ್ ಪುತ್ರಿಗೆ ಮೋಸ ಮಾಡಿದ ಆರೋಪಿಗಳು ಅರೆಸ್ಟ್
ಅರವಿಂದ್​ ಕೇಜ್ರಿವಾಲ್, ಹರ್ಷಿತಾ ಕೇಜ್ರಿವಾಲ್
Skanda
| Edited By: ರಶ್ಮಿ ಕಲ್ಲಕಟ್ಟ|

Updated on: Feb 15, 2021 | 5:30 PM

Share

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪುತ್ರಿ ಹರ್ಷಿತಾ ಕೇಜ್ರಿವಾಲ್ ಕಳೆದ ವಾರವಷ್ಟೇ ಸುದ್ದಿಯಾಗಿದ್ದರು. OLXನಲ್ಲಿ ಸೋಫಾ ಮಾರಲು ಹೋಗಿ ₹34 ಸಾವಿರ ಕಳೆದುಕೊಂಡಿದ್ದ ಹರ್ಷಿತಾ, QR Code Scamಗೆ ಒಳಗಾಗಿದ್ದರು. ಆದರೆ ಇದೀಗ ಅವರಿಗೆ ಮೋಸ ಮಾಡಿದ ಆರೋಪದ ಮೇಲೆ ಮೂವರು ಕಿರಾತಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಜೀದ್, ಕಪಿಲ್ ಮತ್ತು ಮನ್ವೇಂದ್ರ ಎಂಬುವವರು ಸೆರೆಸಿಕ್ಕಿದ್ದು, ಇ-ಕಾಮರ್ಸ್​ ಸೈಟ್​ನಲ್ಲಿ ನಕಲಿ ಖಾತೆ ತೆರೆದು ಜನರಿಗೆ ಟೋಪಿ ಹಾಕುತ್ತಿದ್ದ ಇನ್ನೊಬ್ಬ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಪ್ರಕರಣ ಏನು? ಅರವಿಂದ್ ಕೇಜ್ರಿವಾಲ್ ಮಗಳು ಹರ್ಷಿತಾ OLXನಲ್ಲಿ ಸೋಫಾ ಮಾರುವುದಾಗಿ ಜಾಹೀರಾತು ನೀಡಿದ್ದಾರೆ. ಅದನ್ನು ಗಮನಿಸಿದ ಖದೀಮರು ಸೋಫಾವನ್ನು ತಾವೇ ಕೊಳ್ಳುವುದಾಗಿ ಹೇಳಿ ಆಕೆಗೆ ಉಪಾಯವಾಗಿ ಬಲೆ ಬೀಸಿದ್ದಾರೆ. ಸೋಫಾಕ್ಕೆ ತಗಲುವ ಮೊತ್ತವನ್ನು ಆನ್​ಲೈನ್ ಮೂಲಕ ಪಾವತಿಸುತ್ತೇವೆ. ಆ ಹಣವನ್ನು ಪಡೆಯಲು QR Code ಸ್ಕ್ಯಾನ್ ಮಾಡಿಕೊಳ್ಳಿ ಎಂದ ಖದೀಮರು ಯಾವತ್ತಿನಂತೆ ತಮ್ಮ ದಾಳ ಎಸೆದಿದ್ದಾರೆ. ಅದನ್ನರಿಯದ ಹರ್ಷಿತಾ ಕೇಜ್ರಿವಾಲ್ ಎರಡು ಬಾರಿ ಕೋಡ್ ಸ್ಕ್ಯಾನ್ ಮಾಡಿದ್ದು, ಮೊದಲು ₹20,000 ಹಾಗೂ ಎರಡನೆಯ ಬಾರಿ ₹14,000 ಸೇರಿದಂತೆ ಒಟ್ಟು ₹34,000 ಕಳೆದುಕೊಂಡಿದ್ದಾರೆ. ಹೀಗೆ ಕ್ಯೂಆರ್​ ಕೋಡ್ ಸ್ಕ್ಯಾನ್ ಮಾಡಿದರೆ ತಮ್ಮ ಅಕೌಂಟಿನಿಂದಲೇ ಹಣ ಕಡಿತವಾಗುತ್ತದೆ ಎಂದು ಗೊತ್ತಾಗುವಷ್ಟರಲ್ಲೇ ಆ ಮೊತ್ತ ಖದೀಮರ ಖಾತೆ ಸೇರಿದೆ. ನಂತರ ಆ ಬಗ್ಗೆ ದೂರು ದಾಖಲಿಸಿದ್ದ ಪರಿಣಾಮ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ: OLXನಲ್ಲಿ ಸೋಫಾ ಮಾರಲು ಹೋಗಿ 34 ಸಾವಿರ ರೂಪಾಯಿ ಕಳೆದುಕೊಂಡ ಅರವಿಂದ್ ಕೇಜ್ರಿವಾಲ್ ಮಗಳು

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ