QR Code Scam: OLXನಲ್ಲಿ ಸೋಫಾ ಕೊಳ್ಳುವುದಾಗಿ ಹೇಳಿ ಅರವಿಂದ್ ಕೇಜ್ರಿವಾಲ್ ಪುತ್ರಿಗೆ ಮೋಸ ಮಾಡಿದ ಆರೋಪಿಗಳು ಅರೆಸ್ಟ್

QR Code Scam: ಸಜೀದ್, ಕಪಿಲ್ ಮತ್ತು ಮನ್ವೇಂದ್ರ ಎಂಬುವವರು ಸೆರೆಸಿಕ್ಕಿದ್ದು, ಇ-ಕಾಮರ್ಸ್​ ಸೈಟ್​ನಲ್ಲಿ ನಕಲಿ ಖಾತೆ ತೆರೆದು ಜನರಿಗೆ ಟೋಪಿ ಹಾಕುತ್ತಿದ್ದ ಇನ್ನೊಬ್ಬ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.

QR Code Scam: OLXನಲ್ಲಿ ಸೋಫಾ ಕೊಳ್ಳುವುದಾಗಿ ಹೇಳಿ ಅರವಿಂದ್ ಕೇಜ್ರಿವಾಲ್ ಪುತ್ರಿಗೆ ಮೋಸ ಮಾಡಿದ ಆರೋಪಿಗಳು ಅರೆಸ್ಟ್
ಅರವಿಂದ್​ ಕೇಜ್ರಿವಾಲ್, ಹರ್ಷಿತಾ ಕೇಜ್ರಿವಾಲ್
Follow us
| Updated By: ರಶ್ಮಿ ಕಲ್ಲಕಟ್ಟ

Updated on: Feb 15, 2021 | 5:30 PM

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪುತ್ರಿ ಹರ್ಷಿತಾ ಕೇಜ್ರಿವಾಲ್ ಕಳೆದ ವಾರವಷ್ಟೇ ಸುದ್ದಿಯಾಗಿದ್ದರು. OLXನಲ್ಲಿ ಸೋಫಾ ಮಾರಲು ಹೋಗಿ ₹34 ಸಾವಿರ ಕಳೆದುಕೊಂಡಿದ್ದ ಹರ್ಷಿತಾ, QR Code Scamಗೆ ಒಳಗಾಗಿದ್ದರು. ಆದರೆ ಇದೀಗ ಅವರಿಗೆ ಮೋಸ ಮಾಡಿದ ಆರೋಪದ ಮೇಲೆ ಮೂವರು ಕಿರಾತಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಜೀದ್, ಕಪಿಲ್ ಮತ್ತು ಮನ್ವೇಂದ್ರ ಎಂಬುವವರು ಸೆರೆಸಿಕ್ಕಿದ್ದು, ಇ-ಕಾಮರ್ಸ್​ ಸೈಟ್​ನಲ್ಲಿ ನಕಲಿ ಖಾತೆ ತೆರೆದು ಜನರಿಗೆ ಟೋಪಿ ಹಾಕುತ್ತಿದ್ದ ಇನ್ನೊಬ್ಬ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಪ್ರಕರಣ ಏನು? ಅರವಿಂದ್ ಕೇಜ್ರಿವಾಲ್ ಮಗಳು ಹರ್ಷಿತಾ OLXನಲ್ಲಿ ಸೋಫಾ ಮಾರುವುದಾಗಿ ಜಾಹೀರಾತು ನೀಡಿದ್ದಾರೆ. ಅದನ್ನು ಗಮನಿಸಿದ ಖದೀಮರು ಸೋಫಾವನ್ನು ತಾವೇ ಕೊಳ್ಳುವುದಾಗಿ ಹೇಳಿ ಆಕೆಗೆ ಉಪಾಯವಾಗಿ ಬಲೆ ಬೀಸಿದ್ದಾರೆ. ಸೋಫಾಕ್ಕೆ ತಗಲುವ ಮೊತ್ತವನ್ನು ಆನ್​ಲೈನ್ ಮೂಲಕ ಪಾವತಿಸುತ್ತೇವೆ. ಆ ಹಣವನ್ನು ಪಡೆಯಲು QR Code ಸ್ಕ್ಯಾನ್ ಮಾಡಿಕೊಳ್ಳಿ ಎಂದ ಖದೀಮರು ಯಾವತ್ತಿನಂತೆ ತಮ್ಮ ದಾಳ ಎಸೆದಿದ್ದಾರೆ. ಅದನ್ನರಿಯದ ಹರ್ಷಿತಾ ಕೇಜ್ರಿವಾಲ್ ಎರಡು ಬಾರಿ ಕೋಡ್ ಸ್ಕ್ಯಾನ್ ಮಾಡಿದ್ದು, ಮೊದಲು ₹20,000 ಹಾಗೂ ಎರಡನೆಯ ಬಾರಿ ₹14,000 ಸೇರಿದಂತೆ ಒಟ್ಟು ₹34,000 ಕಳೆದುಕೊಂಡಿದ್ದಾರೆ. ಹೀಗೆ ಕ್ಯೂಆರ್​ ಕೋಡ್ ಸ್ಕ್ಯಾನ್ ಮಾಡಿದರೆ ತಮ್ಮ ಅಕೌಂಟಿನಿಂದಲೇ ಹಣ ಕಡಿತವಾಗುತ್ತದೆ ಎಂದು ಗೊತ್ತಾಗುವಷ್ಟರಲ್ಲೇ ಆ ಮೊತ್ತ ಖದೀಮರ ಖಾತೆ ಸೇರಿದೆ. ನಂತರ ಆ ಬಗ್ಗೆ ದೂರು ದಾಖಲಿಸಿದ್ದ ಪರಿಣಾಮ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ: OLXನಲ್ಲಿ ಸೋಫಾ ಮಾರಲು ಹೋಗಿ 34 ಸಾವಿರ ರೂಪಾಯಿ ಕಳೆದುಕೊಂಡ ಅರವಿಂದ್ ಕೇಜ್ರಿವಾಲ್ ಮಗಳು

ತಾಜಾ ಸುದ್ದಿ
ಬಾಂಗ್ಲಾ ಪಿತಾಮಹ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಮೇಲೆ ಮೂತ್ರ ಮಾಡಿದ ಜನ!
ಬಾಂಗ್ಲಾ ಪಿತಾಮಹ ಶೇಖ್ ಮುಜಿಬುರ್ ರೆಹಮಾನ್ ಪ್ರತಿಮೆ ಮೇಲೆ ಮೂತ್ರ ಮಾಡಿದ ಜನ!
ಡಾ.ಜಿ ಪರಮೇಶ್ವರ ಬರ್ತ್​ಡೇ ಆಚರಣೆ ವೇಳೆ ಉರುಳಿದ ತೆಂಗಿನಮರ; ತಪ್ಪಿದ ಅನಾಹುತ
ಡಾ.ಜಿ ಪರಮೇಶ್ವರ ಬರ್ತ್​ಡೇ ಆಚರಣೆ ವೇಳೆ ಉರುಳಿದ ತೆಂಗಿನಮರ; ತಪ್ಪಿದ ಅನಾಹುತ
ಬಾಡಿಗಾರ್ಡ್​ ಮೇಲೆ ಏಕಾಏಕಿ ಗರಂ ಆದ ಯಶ್​; ಧರ್ಮಸ್ಥಳದಲ್ಲಿ ಅಂಥದ್ದೇನಾಯ್ತು?
ಬಾಡಿಗಾರ್ಡ್​ ಮೇಲೆ ಏಕಾಏಕಿ ಗರಂ ಆದ ಯಶ್​; ಧರ್ಮಸ್ಥಳದಲ್ಲಿ ಅಂಥದ್ದೇನಾಯ್ತು?
ವಿಡಿಯೋ: ಕುಟುಂಬದೊಟ್ಟಿಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಶ್
ವಿಡಿಯೋ: ಕುಟುಂಬದೊಟ್ಟಿಗೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದ ಯಶ್
ಮೇಕೆದಾಟು ಬಗ್ಗೆ ಎಚ್​​ಡಿಕೆ ಯೂಟರ್ನ್​, ವಿಡಿಯೋ ಸಮೇತ ಟಾಂಗ್ ಕೊಟ್ಟ ಡಿಕೆಶಿ
ಮೇಕೆದಾಟು ಬಗ್ಗೆ ಎಚ್​​ಡಿಕೆ ಯೂಟರ್ನ್​, ವಿಡಿಯೋ ಸಮೇತ ಟಾಂಗ್ ಕೊಟ್ಟ ಡಿಕೆಶಿ
ATMನಲ್ಲಿ ಹಣ ಡ್ರಾ ಮಾಡಲು ಸಹಾಯ ಕೇಳುವಾಗ ಎಚ್ಚರ! ಮಾಯವಾಗುತ್ತೆ ನಿಮ್ಮ​ ಹಣ
ATMನಲ್ಲಿ ಹಣ ಡ್ರಾ ಮಾಡಲು ಸಹಾಯ ಕೇಳುವಾಗ ಎಚ್ಚರ! ಮಾಯವಾಗುತ್ತೆ ನಿಮ್ಮ​ ಹಣ
ದೆಹಲಿಯಿಂದ ಬರುತ್ತಿದ್ದಂತೆಯೇ ರಾಜ್ಯಪಾಲರನ್ನು ಭೇಟಿಯಾದ ಟಿಜೆ ಅಬ್ರಹಾಂ
ದೆಹಲಿಯಿಂದ ಬರುತ್ತಿದ್ದಂತೆಯೇ ರಾಜ್ಯಪಾಲರನ್ನು ಭೇಟಿಯಾದ ಟಿಜೆ ಅಬ್ರಹಾಂ
ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಜತೆ ಆರ್ ಅಶೋಕ್, ಸಿಟಿ ರವಿ ಸಖತ್ ಡ್ಯಾನ್ಸ್
ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಜತೆ ಆರ್ ಅಶೋಕ್, ಸಿಟಿ ರವಿ ಸಖತ್ ಡ್ಯಾನ್ಸ್
ಕೋಲಾರ: ಮಹಿಳಾ ಕಾರ್ಯಕರ್ತರ ಜೊತೆ ಕುಣಿದು ಕುಪ್ಪಳಿಸಿದ ಶಾಸಕ ನಾರಾಯಣಸ್ವಾಮಿ
ಕೋಲಾರ: ಮಹಿಳಾ ಕಾರ್ಯಕರ್ತರ ಜೊತೆ ಕುಣಿದು ಕುಪ್ಪಳಿಸಿದ ಶಾಸಕ ನಾರಾಯಣಸ್ವಾಮಿ
ಜಮೀರ್​ಗೆ​ ಹೇಳಿಕೆಗೆ ಸಾರಾ ಮಹೇಶ್ ತಿರುಗೇಟು​​
ಜಮೀರ್​ಗೆ​ ಹೇಳಿಕೆಗೆ ಸಾರಾ ಮಹೇಶ್ ತಿರುಗೇಟು​​