AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

QR Code Scam: OLXನಲ್ಲಿ ಸೋಫಾ ಕೊಳ್ಳುವುದಾಗಿ ಹೇಳಿ ಅರವಿಂದ್ ಕೇಜ್ರಿವಾಲ್ ಪುತ್ರಿಗೆ ಮೋಸ ಮಾಡಿದ ಆರೋಪಿಗಳು ಅರೆಸ್ಟ್

QR Code Scam: ಸಜೀದ್, ಕಪಿಲ್ ಮತ್ತು ಮನ್ವೇಂದ್ರ ಎಂಬುವವರು ಸೆರೆಸಿಕ್ಕಿದ್ದು, ಇ-ಕಾಮರ್ಸ್​ ಸೈಟ್​ನಲ್ಲಿ ನಕಲಿ ಖಾತೆ ತೆರೆದು ಜನರಿಗೆ ಟೋಪಿ ಹಾಕುತ್ತಿದ್ದ ಇನ್ನೊಬ್ಬ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.

QR Code Scam: OLXನಲ್ಲಿ ಸೋಫಾ ಕೊಳ್ಳುವುದಾಗಿ ಹೇಳಿ ಅರವಿಂದ್ ಕೇಜ್ರಿವಾಲ್ ಪುತ್ರಿಗೆ ಮೋಸ ಮಾಡಿದ ಆರೋಪಿಗಳು ಅರೆಸ್ಟ್
ಅರವಿಂದ್​ ಕೇಜ್ರಿವಾಲ್, ಹರ್ಷಿತಾ ಕೇಜ್ರಿವಾಲ್
Follow us
Skanda
| Updated By: ರಶ್ಮಿ ಕಲ್ಲಕಟ್ಟ

Updated on: Feb 15, 2021 | 5:30 PM

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪುತ್ರಿ ಹರ್ಷಿತಾ ಕೇಜ್ರಿವಾಲ್ ಕಳೆದ ವಾರವಷ್ಟೇ ಸುದ್ದಿಯಾಗಿದ್ದರು. OLXನಲ್ಲಿ ಸೋಫಾ ಮಾರಲು ಹೋಗಿ ₹34 ಸಾವಿರ ಕಳೆದುಕೊಂಡಿದ್ದ ಹರ್ಷಿತಾ, QR Code Scamಗೆ ಒಳಗಾಗಿದ್ದರು. ಆದರೆ ಇದೀಗ ಅವರಿಗೆ ಮೋಸ ಮಾಡಿದ ಆರೋಪದ ಮೇಲೆ ಮೂವರು ಕಿರಾತಕರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಸಜೀದ್, ಕಪಿಲ್ ಮತ್ತು ಮನ್ವೇಂದ್ರ ಎಂಬುವವರು ಸೆರೆಸಿಕ್ಕಿದ್ದು, ಇ-ಕಾಮರ್ಸ್​ ಸೈಟ್​ನಲ್ಲಿ ನಕಲಿ ಖಾತೆ ತೆರೆದು ಜನರಿಗೆ ಟೋಪಿ ಹಾಕುತ್ತಿದ್ದ ಇನ್ನೊಬ್ಬ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಪ್ರಕರಣ ಏನು? ಅರವಿಂದ್ ಕೇಜ್ರಿವಾಲ್ ಮಗಳು ಹರ್ಷಿತಾ OLXನಲ್ಲಿ ಸೋಫಾ ಮಾರುವುದಾಗಿ ಜಾಹೀರಾತು ನೀಡಿದ್ದಾರೆ. ಅದನ್ನು ಗಮನಿಸಿದ ಖದೀಮರು ಸೋಫಾವನ್ನು ತಾವೇ ಕೊಳ್ಳುವುದಾಗಿ ಹೇಳಿ ಆಕೆಗೆ ಉಪಾಯವಾಗಿ ಬಲೆ ಬೀಸಿದ್ದಾರೆ. ಸೋಫಾಕ್ಕೆ ತಗಲುವ ಮೊತ್ತವನ್ನು ಆನ್​ಲೈನ್ ಮೂಲಕ ಪಾವತಿಸುತ್ತೇವೆ. ಆ ಹಣವನ್ನು ಪಡೆಯಲು QR Code ಸ್ಕ್ಯಾನ್ ಮಾಡಿಕೊಳ್ಳಿ ಎಂದ ಖದೀಮರು ಯಾವತ್ತಿನಂತೆ ತಮ್ಮ ದಾಳ ಎಸೆದಿದ್ದಾರೆ. ಅದನ್ನರಿಯದ ಹರ್ಷಿತಾ ಕೇಜ್ರಿವಾಲ್ ಎರಡು ಬಾರಿ ಕೋಡ್ ಸ್ಕ್ಯಾನ್ ಮಾಡಿದ್ದು, ಮೊದಲು ₹20,000 ಹಾಗೂ ಎರಡನೆಯ ಬಾರಿ ₹14,000 ಸೇರಿದಂತೆ ಒಟ್ಟು ₹34,000 ಕಳೆದುಕೊಂಡಿದ್ದಾರೆ. ಹೀಗೆ ಕ್ಯೂಆರ್​ ಕೋಡ್ ಸ್ಕ್ಯಾನ್ ಮಾಡಿದರೆ ತಮ್ಮ ಅಕೌಂಟಿನಿಂದಲೇ ಹಣ ಕಡಿತವಾಗುತ್ತದೆ ಎಂದು ಗೊತ್ತಾಗುವಷ್ಟರಲ್ಲೇ ಆ ಮೊತ್ತ ಖದೀಮರ ಖಾತೆ ಸೇರಿದೆ. ನಂತರ ಆ ಬಗ್ಗೆ ದೂರು ದಾಖಲಿಸಿದ್ದ ಪರಿಣಾಮ ಮೂವರು ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ.

ಇದನ್ನೂ ಓದಿ: OLXನಲ್ಲಿ ಸೋಫಾ ಮಾರಲು ಹೋಗಿ 34 ಸಾವಿರ ರೂಪಾಯಿ ಕಳೆದುಕೊಂಡ ಅರವಿಂದ್ ಕೇಜ್ರಿವಾಲ್ ಮಗಳು

ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
ಗುತ್ತಿಗೆದಾರರಿಗೆ ಹಣ ಪಾವತಿಯಾಗದ ಕಾರಣ ಸಾಯಿ ಲೇಔಟ್​ನಲ್ಲಿ ಸಮಸ್ಯೆ: ನಿಖಿಲ್
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
‘ಅವನು ಸಾಯೋ ಬದಲು ಇವನು ಸಾಯಬಾರದಾ ಎಂದಿದ್ರು’: ಮಡೆನೂರು ಮನು
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಕೇಂದ್ರಕ್ಕೆ ಪವರ್ ಇಲ್ಲ...ರಾಮನಗರ ಹೆಸರು ಬದಲಾವಣೆ ಬಗ್ಗೆ ಡಿಕೆಶಿ ಸ್ಪಷ್ಟನೆ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಬಿಡಿಎನಲ್ಲಿ ಬಾಕಿಯುಳಿಸಿಕೊಂಡಿರುವ ಸಂಸ್ಥೆಗಳ ಬಡ್ಡಿ ಒಮ್ಮೆ ಮನ್ನಾ: ಡಿಕೆಶಿ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಖರ್ಗೆ ಬಾಯಲ್ಲಿ ಪಾಪಿ ಪಾಕಿಸ್ತಾನದ ಹೆಸರು ಬರಬಾರದು: ವಿ ಸೋಮಣ್ಣ
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು