AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ, 3 ಬೋಗಿಗಳು ಅಗ್ನಿಗಾಹುತಿ

ವಿಶಾಖಪಟ್ಟಣಂನಲ್ಲಿ ನಿಂತಿದ್ದ ರೈಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಬೋಗಿಗಳು ಬೆಂಕಿಗಾಹುತಿಯಾಗಿವೆ.ಎಕ್ಸ್​ಪ್ರೆಸ್​ ರೈಲಿನ ಮೂರು ಹವಾನಿಯಂತ್ರಿತ ಕೋಚ್​ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರ್ಬಾ-ವಿಶಾಖಪಟ್ಟಣಂ ಎಕ್ಸ್​ಪ್ರೆಸ್​ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದು ನಿಂತಿದ್ದ ರೈಲಾಗಿದ್ದರಿಂದ ಬೆಂಕಿ ಹೊತ್ತಿಕೊಳ್ಳುವ ವೇಳೆಗೆ ಪ್ರಯಾಣಿಕರೆಲ್ಲಾ ಇಳಿದಿದ್ದರು.

ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ, 3 ಬೋಗಿಗಳು ಅಗ್ನಿಗಾಹುತಿ
ಬೆಂಕಿ
ನಯನಾ ರಾಜೀವ್
|

Updated on:Aug 04, 2024 | 3:21 PM

Share

ವಿಶಾಖಪಟ್ಟಣಂನಲ್ಲಿ ಭಾನುವಾರ ಸಸಂಭವಿಸಿದ ಅಗ್ನಿ ಅವಘಡದಲ್ಲಿ ಮೂರು ಬೋಗಿಗಳು ಬೆಂಕಿಗಾಹುತಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಕ್ಸ್​ಪ್ರೆಸ್​ ರೈಲಿನ ಮೂರು ಹವಾನಿಯಂತ್ರಿತ ಕೋಚ್​ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರ್ಬಾ-ವಿಶಾಖಪಟ್ಟಣಂ ಎಕ್ಸ್​ಪ್ರೆಸ್​ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದು ನಿಂತಿದ್ದ ರೈಲಾಗಿದ್ದರಿಂದ ಬೆಂಕಿ ಹೊತ್ತಿಕೊಳ್ಳುವ ವೇಳೆಗೆ ಪ್ರಯಾಣಿಕರೆಲ್ಲಾ ಇಳಿದಿದ್ದರು.

ರೈಲು ಬೆಳಗ್ಗೆ ಛತ್ತೀಸ್‌ಗಢದ ಕೊರ್ಬಾದಿಂದ ಪ್ಲಾಟ್‌ಫಾರ್ಮ್ ನಂಬರ್ ನಾಲ್ಕಕ್ಕೆ ಬಂದಿತ್ತು ಮತ್ತು ನಂತರ ತಿರುಪತಿಗೆ ಹೊರಡಬೇಕಿತ್ತು. ಕೊರ್ಬಾ ಎಕ್ಸ್‌ಪ್ರೆಸ್ ಬೆಳಿಗ್ಗೆ 6.30 ಕ್ಕೆ ಬಂದಿತು ಮತ್ತು ಕೋಚಿಂಗ್ ಡಿಪೋಗೆ ನಿರ್ವಹಣೆಗಾಗಿ ಹೋಗಬೇಕಾಗಿತ್ತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈಲಿಗೆ ಬೀಗ ಹಾಕಲಾಗಿದ್ದು, ವಿದ್ಯುತ್ ಸ್ಥಗಿತಗೊಳಿಸಲಾಗಿದೆ ಎಂದರು.

ಬೆಳಗ್ಗೆ 9.20ರ ವೇಳೆಗೆ ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿತ್ತು, ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಬಿ7 ಬೋಗಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಿ6 ಹಾಗೂ ಎಂ1 ಬೋಗಿಗಳು ಭಾಗಶಃ ಹಾನಿಗೊಳಗಾಗಿವೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದವು.

ಮತ್ತಷ್ಟು ಓದಿ: Indian Railways: ಈ ಬಾಕ್ಸ್‌ಗಳು ರೈಲ್ವೆ ಟ್ರ್ಯಾಕ್‌ ಪಕ್ಕದಲ್ಲಿ ಏಕೆ ಇರುತ್ತವೆ ನಿಮಗೆ ತಿಳಿದಿದೆಯೇ? ಇವುಗಳಿಂದ ರೈಲ್ವೆಗೆ ಏನು ಉಪಯೋಗ?

ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಂಟಿ ಪೊಲೀಸ್ ಆಯುಕ್ತ ಫಕೀರಪ್ಪ ತಿಳಿಸಿದ್ದಾರೆ. ಬೆಂಕಿಯ ಕಾರಣದ ಬಗ್ಗೆ ರೈಲ್ವೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ಹಾನಿಗೊಳಗಾದ ಬೋಗಿಗಳನ್ನು ಹೊರತುಪಡಿಸಿ, ರೈಲ್ವೇ ಸಿಬ್ಬಂದಿ ನಿರ್ವಹಣೆಗಾಗಿ ರೈಲನ್ನು ಡಿಪೋಗೆ ಸ್ಥಳಾಂತರಿಸಿದರು.

ಕೋಚ್‌ಗಳಲ್ಲಿ ದಹನಕಾರಿ ವಸ್ತುಗಳು ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಸ್ವಲ್ಪ ಸಮಯ ತೆಗೆದುಕೊಂಡರು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:20 pm, Sun, 4 August 24

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?