AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ, 3 ಬೋಗಿಗಳು ಅಗ್ನಿಗಾಹುತಿ

ವಿಶಾಖಪಟ್ಟಣಂನಲ್ಲಿ ನಿಂತಿದ್ದ ರೈಲಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಬೋಗಿಗಳು ಬೆಂಕಿಗಾಹುತಿಯಾಗಿವೆ.ಎಕ್ಸ್​ಪ್ರೆಸ್​ ರೈಲಿನ ಮೂರು ಹವಾನಿಯಂತ್ರಿತ ಕೋಚ್​ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರ್ಬಾ-ವಿಶಾಖಪಟ್ಟಣಂ ಎಕ್ಸ್​ಪ್ರೆಸ್​ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದು ನಿಂತಿದ್ದ ರೈಲಾಗಿದ್ದರಿಂದ ಬೆಂಕಿ ಹೊತ್ತಿಕೊಳ್ಳುವ ವೇಳೆಗೆ ಪ್ರಯಾಣಿಕರೆಲ್ಲಾ ಇಳಿದಿದ್ದರು.

ವಿಶಾಖಪಟ್ಟಣಂ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿಗೆ ಬೆಂಕಿ, 3 ಬೋಗಿಗಳು ಅಗ್ನಿಗಾಹುತಿ
ಬೆಂಕಿ
ನಯನಾ ರಾಜೀವ್
|

Updated on:Aug 04, 2024 | 3:21 PM

Share

ವಿಶಾಖಪಟ್ಟಣಂನಲ್ಲಿ ಭಾನುವಾರ ಸಸಂಭವಿಸಿದ ಅಗ್ನಿ ಅವಘಡದಲ್ಲಿ ಮೂರು ಬೋಗಿಗಳು ಬೆಂಕಿಗಾಹುತಿಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಎಕ್ಸ್​ಪ್ರೆಸ್​ ರೈಲಿನ ಮೂರು ಹವಾನಿಯಂತ್ರಿತ ಕೋಚ್​ಗಳು ಸುಟ್ಟು ಭಸ್ಮವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರ್ಬಾ-ವಿಶಾಖಪಟ್ಟಣಂ ಎಕ್ಸ್​ಪ್ರೆಸ್​ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದು ನಿಂತಿದ್ದ ರೈಲಾಗಿದ್ದರಿಂದ ಬೆಂಕಿ ಹೊತ್ತಿಕೊಳ್ಳುವ ವೇಳೆಗೆ ಪ್ರಯಾಣಿಕರೆಲ್ಲಾ ಇಳಿದಿದ್ದರು.

ರೈಲು ಬೆಳಗ್ಗೆ ಛತ್ತೀಸ್‌ಗಢದ ಕೊರ್ಬಾದಿಂದ ಪ್ಲಾಟ್‌ಫಾರ್ಮ್ ನಂಬರ್ ನಾಲ್ಕಕ್ಕೆ ಬಂದಿತ್ತು ಮತ್ತು ನಂತರ ತಿರುಪತಿಗೆ ಹೊರಡಬೇಕಿತ್ತು. ಕೊರ್ಬಾ ಎಕ್ಸ್‌ಪ್ರೆಸ್ ಬೆಳಿಗ್ಗೆ 6.30 ಕ್ಕೆ ಬಂದಿತು ಮತ್ತು ಕೋಚಿಂಗ್ ಡಿಪೋಗೆ ನಿರ್ವಹಣೆಗಾಗಿ ಹೋಗಬೇಕಾಗಿತ್ತು ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈಲಿಗೆ ಬೀಗ ಹಾಕಲಾಗಿದ್ದು, ವಿದ್ಯುತ್ ಸ್ಥಗಿತಗೊಳಿಸಲಾಗಿದೆ ಎಂದರು.

ಬೆಳಗ್ಗೆ 9.20ರ ವೇಳೆಗೆ ಬೋಗಿಗಳಲ್ಲಿ ಹೊಗೆ ಕಾಣಿಸಿಕೊಂಡಿತ್ತು, ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿತ್ತು. ಬಿ7 ಬೋಗಿ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಬಿ6 ಹಾಗೂ ಎಂ1 ಬೋಗಿಗಳು ಭಾಗಶಃ ಹಾನಿಗೊಳಗಾಗಿವೆ. ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದವು.

ಮತ್ತಷ್ಟು ಓದಿ: Indian Railways: ಈ ಬಾಕ್ಸ್‌ಗಳು ರೈಲ್ವೆ ಟ್ರ್ಯಾಕ್‌ ಪಕ್ಕದಲ್ಲಿ ಏಕೆ ಇರುತ್ತವೆ ನಿಮಗೆ ತಿಳಿದಿದೆಯೇ? ಇವುಗಳಿಂದ ರೈಲ್ವೆಗೆ ಏನು ಉಪಯೋಗ?

ಅಪಘಾತದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ಜಂಟಿ ಪೊಲೀಸ್ ಆಯುಕ್ತ ಫಕೀರಪ್ಪ ತಿಳಿಸಿದ್ದಾರೆ. ಬೆಂಕಿಯ ಕಾರಣದ ಬಗ್ಗೆ ರೈಲ್ವೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ಹಾನಿಗೊಳಗಾದ ಬೋಗಿಗಳನ್ನು ಹೊರತುಪಡಿಸಿ, ರೈಲ್ವೇ ಸಿಬ್ಬಂದಿ ನಿರ್ವಹಣೆಗಾಗಿ ರೈಲನ್ನು ಡಿಪೋಗೆ ಸ್ಥಳಾಂತರಿಸಿದರು.

ಕೋಚ್‌ಗಳಲ್ಲಿ ದಹನಕಾರಿ ವಸ್ತುಗಳು ಇರುವುದರಿಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲು ಸ್ವಲ್ಪ ಸಮಯ ತೆಗೆದುಕೊಂಡರು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:20 pm, Sun, 4 August 24

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ