AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naxal Attack: ಒಡಿಶಾದಲ್ಲಿ ನಕ್ಸಲ್ ದಾಳಿ; ಹುತಾತ್ಮರಾದ ಮೂವರು ಸಿಆರ್​​ಪಿಎಫ್ ಯೋಧರು

ನುವಾಪಾಡಾದಲ್ಲಿ ನಕ್ಸಲರ ಗುಂಡಿನ ದಾಳಿಯಿಂದಾಗಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಸಿಆರ್​ಇಎಫ್ ಸಿಬ್ಬಂದಿ ರಸ್ತೆ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರು ಅವರ ಮೇಲೆ ದಾಳಿ ನಡೆಸಿದ್ದಾರೆ

Naxal Attack: ಒಡಿಶಾದಲ್ಲಿ ನಕ್ಸಲ್ ದಾಳಿ; ಹುತಾತ್ಮರಾದ ಮೂವರು ಸಿಆರ್​​ಪಿಎಫ್ ಯೋಧರು
ನಕ್ಸಲರ ದಾಳಿImage Credit source: DNA
TV9 Web
| Edited By: |

Updated on: Jun 22, 2022 | 8:03 AM

Share

ಒಡಿಶಾ: ಒಡಿಶಾದ ನುವಾಪಾಡಾ ಜಿಲ್ಲೆಯಲ್ಲಿ ನಿನ್ನೆ (ಮಂಗಳವಾರ) ಮಧ್ಯಾಹ್ನ ನಡೆದ ನಕ್ಸಲರ ದಾಳಿಯಲ್ಲಿ (Naxal Attack) ಮೂವರು ಸಿಆರ್‌ಪಿಎಫ್ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭೇದೆನ್ ಬ್ಲಾಕ್‌ನ ಸಹಜಪಾನಿ ಗ್ರಾಮದ ಬಳಿಯ ಪಟಧಾರ ಮೀಸಲು ಅರಣ್ಯದಲ್ಲಿ ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ.

ನುವಾಪಾಡಾದಲ್ಲಿ ನಕ್ಸಲರ ಗುಂಡಿನ ದಾಳಿಯಿಂದಾಗಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ನಮ್ಮ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳುತ್ತಿದ್ದಾರೆ ಎಂದು ಒಡಿಶಾದ ಪೊಲೀಸ್ ಮಹಾನಿರ್ದೇಶಕ ಎಸ್‌ಕೆ ಬನ್ಸಾಲ್ ತಿಳಿಸಿದ್ದಾರೆ. ಸಿಆರ್​ಇಎಫ್ ಸಿಬ್ಬಂದಿ ರಸ್ತೆ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ನಕ್ಸಲರು ಅವರ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನಾ ಪಡೆಗಳ ಚಲನವಲನದ ಬಗ್ಗೆ ನಕ್ಸಲರಿಗೆ ಮೊದಲೇ ಮಾಹಿತಿ ಇತ್ತು ಎಂದು ಶಂಕಿಸಲಾಗಿದೆ. ನಕ್ಸಲರು ಸುಧಾರಿತ ಅಥವಾ ಕಚ್ಚಾ ನಿರ್ಮಿತ ಬ್ಯಾರೆಲ್ ಗ್ರೆನೇಡ್ ಲಾಂಚರ್‌ಗಳನ್ನು (ಬಿಜಿಎಲ್) ಬಳಸಿ ಸೇನಾ ಸಿಬ್ಬಂದಿಯ ಮೇಲೆ ದಾಳಿ ನಡೆಸಿದ್ದಾರೆ. ಪ್ರಾಥಮಿಕ ವರದಿಯ ಪ್ರಕಾರ, ಘಟನೆ ನಡೆದಾಗ ಏಳು ಯೋಧರು ಆ ಸ್ಥಳದಲ್ಲಿದ್ದರು ಎಂದು ಭುವನೇಶ್ವರದಲ್ಲಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಅರೆಸ್ಟ್ ಆದ ಇಬ್ಬರು ನಕ್ಸಲರನ್ನ 10 ದಿನ ಕುಂದಾಪುರ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ ನ್ಯಾಯಾಲಯ; ಬಂಧಿತ ನಕ್ಸಲರ ವಿಚಾರಣೆ

ಮೃತರನ್ನು ಉತ್ತರ ಪ್ರದೇಶ ಮೂಲದ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ಶಿಶು ಪಾಲ್ ಸಿಂಗ್, ಹರಿಯಾಣ ಮೂಲದ ಎಎಸ್‌ಐ ಶಿವ ಲಾಲ್ ಮತ್ತು ಬಿಹಾರ ಮೂಲದ ಕಾನ್‌ಸ್ಟೆಬಲ್ ಧರ್ಮೇಂದ್ರ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ಅವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (CRPF) 19ನೇ ಬೆಟಾಲಿಯನ್‌ನಲ್ಲಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ