AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್​ ಟ್ರಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು; ಮೂವರ ದುರ್ಮರಣ, ಒಬ್ಬನಿಗೆ ಗಾಯ

ಮೂರು ಮೃತದೇಹಗಳನ್ನು ರೋಹ್ಟಕ್​​ನ ಪಿಜಿಐ ಆಸ್ಪತ್ರೆಗೆ, ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಗಾಯಗೊಂಡ ಒಬ್ಬಾತನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ.

ಟ್ರ್ಯಾಕ್ಟರ್​ ಟ್ರಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು; ಮೂವರ ದುರ್ಮರಣ, ಒಬ್ಬನಿಗೆ ಗಾಯ
ರೊಹ್ಟಕ್​​ನಲ್ಲಿ ಕಾರು ಅಪಘಾತ
TV9 Web
| Edited By: |

Updated on: Feb 06, 2022 | 9:36 AM

Share

ಕಾರೊಂದು ಟ್ರ್ಯಾಕ್ಟರ್​ ಟ್ರಾಲಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಮೂವರು ಮೃತಪಟ್ಟು, ಒಬ್ಬರು ಗಾಯಗೊಂಡ ಘಟನೆ ಹರ್ಯಾಣದ ರೊಹ್ಟಕ್​​ ಜಿಲ್ಲೆಯ (Rohtak District)ಲಾಹ್ಲಿಯಲ್ಲಿ ನಡೆದಿದೆ. ಮೃತರಾದ ಮೂವರಲ್ಲಿ ಇಬ್ಬರ ಗುರುತು ಸಿಕ್ಕಿದೆ. ಅದರಲ್ಲಿ ಒಬ್ಬನ ಹೆಸರು ವಿವೇಕ್​ ಎಂದಾಗಿದ್ದು ರೋಹ್ಟಕ್​ನ ಚುನ್ನಿಪುರದವನು. ಇನ್ನೊಬ್ಬಾತ ಪಂಜಾಬ್​ನ ಜಿರಕ್​ಪುರದವನು ಎಂದು ಹೇಳಲಾಗಿದೆ. ಮೂರನೇಯವರ ಹೆಸರಾಗಲಿ, ಊರಾಗಲಿ ಇನ್ನೂ ತಿಳಿದಿಲ್ಲ. 

ಮೂರು ಮೃತದೇಹಗಳನ್ನು ರೋಹ್ಟಕ್​​ನ ಪಿಜಿಐ ಆಸ್ಪತ್ರೆಗೆ, ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಗಾಯಗೊಂಡ ಒಬ್ಬಾತನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಕಲನೌರ್​ ಸ್ಟೇಶನ್​ ಅಧಿಕಾರಿ ಸುಶೀಲಾ ತಿಳಿಸಿದ್ದಾರೆ. ಪಂಜಾಬ್ ರಾಜ್ಯದ ನಂಬರ್​ ಪ್ಲೇಟ್​ ಇರುವ ಕಾರು ಕಲನೌರ್​​ನಿಂದ ರೋಹ್ಕಟ್​ ಕಡೆಗೆ ಹೋಗುತ್ತಿತ್ತು. ಟ್ರ್ಯಾಕ್ಟರ್​ ಟ್ರಾಲಿ ಎದುರಿನಿಂದ ಬರುತ್ತಿತ್ತು. ಕಾರು ತುಂಬ ವೇಗದಿಂದ ಹೋಗುತ್ತಿತ್ತು. ಒಂದು ತಿರುವಿನಲ್ಲಿ ಟ್ರಾಲಿಯ ಹಿಂಬದಿಗೆ ಕಾರು ಡಿಕ್ಕಿಯಾಗಿದೆ. ಕಾರು ಚೂರುಚೂರಾಗಿದೆ. ಇದೊಂದು ಭಯಾನಕ ಅಪಘಾತವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. ಹಾಗೇ, ಪೊಲೀಸರು ತನಿಖೆಯನ್ನೂ ಪ್ರಾರಂಭ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಾಯಚೂರು: ತೊಗರಿಯ ಗುಣಮಟ್ಟ ಪರೀಕ್ಷೆಗೆ ಅನುಗುಣವಾಗಿ ಬೆಲೆ ನಿಗದಿ; ದರ ಕುಸಿತದಿಂದ ರೈತರು ಕಂಗಾಲು

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್