AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್​ ಟ್ರಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು; ಮೂವರ ದುರ್ಮರಣ, ಒಬ್ಬನಿಗೆ ಗಾಯ

ಮೂರು ಮೃತದೇಹಗಳನ್ನು ರೋಹ್ಟಕ್​​ನ ಪಿಜಿಐ ಆಸ್ಪತ್ರೆಗೆ, ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಗಾಯಗೊಂಡ ಒಬ್ಬಾತನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ.

ಟ್ರ್ಯಾಕ್ಟರ್​ ಟ್ರಾಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು; ಮೂವರ ದುರ್ಮರಣ, ಒಬ್ಬನಿಗೆ ಗಾಯ
ರೊಹ್ಟಕ್​​ನಲ್ಲಿ ಕಾರು ಅಪಘಾತ
TV9 Web
| Edited By: |

Updated on: Feb 06, 2022 | 9:36 AM

Share

ಕಾರೊಂದು ಟ್ರ್ಯಾಕ್ಟರ್​ ಟ್ರಾಲಿಗೆ ಡಿಕ್ಕಿ (Accident) ಹೊಡೆದ ಪರಿಣಾಮ ಮೂವರು ಮೃತಪಟ್ಟು, ಒಬ್ಬರು ಗಾಯಗೊಂಡ ಘಟನೆ ಹರ್ಯಾಣದ ರೊಹ್ಟಕ್​​ ಜಿಲ್ಲೆಯ (Rohtak District)ಲಾಹ್ಲಿಯಲ್ಲಿ ನಡೆದಿದೆ. ಮೃತರಾದ ಮೂವರಲ್ಲಿ ಇಬ್ಬರ ಗುರುತು ಸಿಕ್ಕಿದೆ. ಅದರಲ್ಲಿ ಒಬ್ಬನ ಹೆಸರು ವಿವೇಕ್​ ಎಂದಾಗಿದ್ದು ರೋಹ್ಟಕ್​ನ ಚುನ್ನಿಪುರದವನು. ಇನ್ನೊಬ್ಬಾತ ಪಂಜಾಬ್​ನ ಜಿರಕ್​ಪುರದವನು ಎಂದು ಹೇಳಲಾಗಿದೆ. ಮೂರನೇಯವರ ಹೆಸರಾಗಲಿ, ಊರಾಗಲಿ ಇನ್ನೂ ತಿಳಿದಿಲ್ಲ. 

ಮೂರು ಮೃತದೇಹಗಳನ್ನು ರೋಹ್ಟಕ್​​ನ ಪಿಜಿಐ ಆಸ್ಪತ್ರೆಗೆ, ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಗಾಯಗೊಂಡ ಒಬ್ಬಾತನನ್ನು ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಕಲನೌರ್​ ಸ್ಟೇಶನ್​ ಅಧಿಕಾರಿ ಸುಶೀಲಾ ತಿಳಿಸಿದ್ದಾರೆ. ಪಂಜಾಬ್ ರಾಜ್ಯದ ನಂಬರ್​ ಪ್ಲೇಟ್​ ಇರುವ ಕಾರು ಕಲನೌರ್​​ನಿಂದ ರೋಹ್ಕಟ್​ ಕಡೆಗೆ ಹೋಗುತ್ತಿತ್ತು. ಟ್ರ್ಯಾಕ್ಟರ್​ ಟ್ರಾಲಿ ಎದುರಿನಿಂದ ಬರುತ್ತಿತ್ತು. ಕಾರು ತುಂಬ ವೇಗದಿಂದ ಹೋಗುತ್ತಿತ್ತು. ಒಂದು ತಿರುವಿನಲ್ಲಿ ಟ್ರಾಲಿಯ ಹಿಂಬದಿಗೆ ಕಾರು ಡಿಕ್ಕಿಯಾಗಿದೆ. ಕಾರು ಚೂರುಚೂರಾಗಿದೆ. ಇದೊಂದು ಭಯಾನಕ ಅಪಘಾತವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾಗಿ ಎಎನ್​ಐ ವರದಿ ಮಾಡಿದೆ. ಹಾಗೇ, ಪೊಲೀಸರು ತನಿಖೆಯನ್ನೂ ಪ್ರಾರಂಭ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ರಾಯಚೂರು: ತೊಗರಿಯ ಗುಣಮಟ್ಟ ಪರೀಕ್ಷೆಗೆ ಅನುಗುಣವಾಗಿ ಬೆಲೆ ನಿಗದಿ; ದರ ಕುಸಿತದಿಂದ ರೈತರು ಕಂಗಾಲು

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!