AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಗೆ ಡಿಕ್ಕಿ ಹೊಡೆದ ಬೈಕ್, ಮೂವರು ಸಾವು

ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ಡನೆದಿದೆ. ತಡರಾತ್ರಿ ಮೂವರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೃತರು ರಾಹ್ಲಿ ವಿಧಾನಸಭಾ ಕ್ಷೇತ್ರದ ನಿವಾಸಿಗಳಾಗಿದ್ದು, ತೆಂಡುಖೇಡಾದಿಂದ ಝಾಪನ್‌ಗೆ ಪ್ರಯಾಣಿಸುತ್ತಿದ್ದರು. ಝಾಪನ್ ಬಳಿ, ಬೈರ್ಮಾ ನದಿಯ ಮೇಲೆ ನಿರ್ಮಿಸಲಾದ ಸೇತುವೆಯು ಕಳೆದ ವರ್ಷ ಸುರಿದ ಭಾರೀ ಮಳೆಯ ಸಮಯದಲ್ಲಿ ತೀವ್ರವಾಗಿ ಹಾನಿಗೊಳಗಾಗಿ ಭಾಗಶಃ ಕೊಚ್ಚಿಹೋಗಿತ್ತು.

ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆಗೆ ಡಿಕ್ಕಿ ಹೊಡೆದ ಬೈಕ್, ಮೂವರು ಸಾವು
ಬೈಕ್
ನಯನಾ ರಾಜೀವ್
|

Updated on: Feb 15, 2026 | 1:11 PM

Share

ಮಧ್ಯಪ್ರದೇಶ, ಫೆಬ್ರವರಿ 15: ಕಳೆದ ವರ್ಷ ಮಳೆಗೆ ಕೊಚ್ಚಿ ಹೋಗಿದ್ದ ಸೇತುವೆ(Bridge)ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ಡನೆದಿದೆ. ತಡರಾತ್ರಿ ಮೂವರು ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮೃತರು ರಾಹ್ಲಿ ವಿಧಾನಸಭಾ ಕ್ಷೇತ್ರದ ನಿವಾಸಿಗಳಾಗಿದ್ದು, ತೆಂಡುಖೇಡಾದಿಂದ ಝಾಪನ್‌ಗೆ ಪ್ರಯಾಣಿಸುತ್ತಿದ್ದರು. ಝಾಪನ್ ಬಳಿ, ಬೈರ್ಮಾ ನದಿಯ ಮೇಲೆ ನಿರ್ಮಿಸಲಾದ ಸೇತುವೆಯು ಕಳೆದ ವರ್ಷ ಸುರಿದ ಭಾರೀ ಮಳೆಯ ಸಮಯದಲ್ಲಿ ತೀವ್ರವಾಗಿ ಹಾನಿಗೊಳಗಾಗಿ ಭಾಗಶಃ ಕೊಚ್ಚಿಹೋಗಿತ್ತು.

ಮುರಿದ ಸೇತುವೆ ಮೇಲೆ ಪ್ರವೇಶಿಸದಂತೆ ವಾಹನಗಳ ಸಂಚಾರವನ್ನು ತಡೆಯಲು ಯಾವುದೇ ಬ್ಯಾರಿಕೇಡಿಂಗ್ ಅಥವಾ ಎಚ್ಚರಿಕೆ ಫಲಕವನ್ನು ಅಳವಡಿಸಿರಲಿಲ್ಲ. ಕತ್ತಲೆಯಲ್ಲಿ ಸೇತುವೆ ಹಾನಿಗೊಳಗಾಗಿರುವುದನ್ನು ಅರಿಯದ ಅವರು, ಅತಿ ವೇಗದಲ್ಲಿ ಬೈಕ್ ಚಲಾಯಿಸಿಕೊಂಡು ಹೋಗಿ ನೇರವಾಗಿ ಮುರಿದ ಭಾಗಕ್ಕೆ ಡಿಕ್ಕಿ ಹೊಡೆದು ಬಿದ್ದಿದ್ದಾರೆ. ಪರಿಣಾಮ ಎಷ್ಟು ತೀವ್ರವಾಗಿತ್ತೆಂದರೆ, ಮೋಟಾರ್ ಸೈಕಲ್ ಸೇತುವೆಯ ಕುಸಿದ ಭಾಗದ ಕೆಳಗೆ ಸಿಲುಕಿಕೊಂಡಿತ್ತು. ಮೂವರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮೃತರನ್ನು 21 ವರ್ಷದ ಅಜಯ್ ಘೋಸಿ, 21 ವರ್ಷದ ಅಮಿತ್ ಕುರ್ಮಿ ​​ಮತ್ತು 22 ವರ್ಷದ ಪವನ್ ಕುರ್ಮಿ ​​ಎಂದು ಗುರುತಿಸಲಾಗಿದೆ. ವರದಿಗಳ ಪ್ರಕಾರ, ಅಪಘಾತದ ನಂತರ ಮೂವರು ಸ್ಥಳದಲ್ಲೇ ಸಾಕಷ್ಟು ಸಮಯದವರೆಗೆ ಇದ್ದರು ಮತ್ತು ಜನರು ಅವರನ್ನು ಗಮನಿಸುವ ಹೊತ್ತಿಗೆ ಅವರು ಆಗಲೇ ಮೃತಪಟ್ಟಿದ್ದರು.

ಮತ್ತಷ್ಟು ಓದಿ: ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಈ ಘಟನೆಯು ಆಡಳಿತಾತ್ಮಕ ನಿರ್ಲಕ್ಷ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಳೆದ ವರ್ಷದ ಮಳೆಯಲ್ಲಿ ಸೇತುವೆ ಹಾನಿಗೊಳಗಾಗಿದ್ದರೂ, ಅಧಿಕಾರಿಗಳು ಮಾರ್ಗವನ್ನು ಮುಚ್ಚಲಿಲ್ಲ ಅಥವಾ ಬ್ಯಾರಿಕೇಡ್‌ಗಳು ಅಥವಾ ಎಚ್ಚರಿಕೆ ಫಲಕಗಳನ್ನು ಅಳವಡಿಸಿರಲಿಲ್ಲ ಏಕೆ ಎಂಬುದು ಪ್ರಶ್ನೆಯಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ