AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಕುಟುಂಬಗಳು ಜಮ್ಮು ಕಾಶ್ಮೀರವನ್ನು ನಾಶಪಡಿಸಿದವು: ದೋಡಾದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ

ಈ ಬಾರಿ ಜಮ್ಮು ಮತ್ತು ಕಾಶ್ಮೀರದ ಚುನಾವಣೆಗಳು ಇಲ್ಲಿನ ಭವಿಷ್ಯವನ್ನು ನಿರ್ಧರಿಸಲಿವೆ. ಸ್ವಾತಂತ್ರ್ಯದ ನಂತರ, ನಮ್ಮ ಪ್ರೀತಿಯ ಜಮ್ಮು ಕಾಶ್ಮೀರ ವಿದೇಶಿ ಶಕ್ತಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದರ ನಂತರ, ‘ಕುಟುಂಬ ರಾಜಕಾರಣ’ ಈ ಸುಂದರ ರಾಜ್ಯವನ್ನು ಟೊಳ್ಳು ಮಾಡಲು ಪ್ರಾರಂಭಿಸಿತು. ಇಲ್ಲಿ ನೀವು ನಂಬಿದ ರಾಜಕೀಯ ಪಕ್ಷಗಳಿಗೆ ನಿಮ್ಮ ಮಕ್ಕಳ ಬಗ್ಗೆ ಕಾಳಜಿ ಇಲ್ಲ. ಆ ರಾಜಕೀಯ ಪಕ್ಷಗಳು ತಮ್ಮ ತಮ್ಮ ಮಕ್ಕಳನ್ನು ಮಾತ್ರ ಪ್ರಚಾರ ಮಾಡುತ್ತವೆ ಎಂದು ಮೋದಿ ಹೇಳಿದ್ದಾರೆ.

ಮೂರು ಕುಟುಂಬಗಳು ಜಮ್ಮು ಕಾಶ್ಮೀರವನ್ನು ನಾಶಪಡಿಸಿದವು: ದೋಡಾದಲ್ಲಿ ಪ್ರಧಾನಿ ಮೋದಿ ವಾಗ್ದಾಳಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Sep 14, 2024 | 3:20 PM

Share

ದೋಡಾ, ಸೆಪ್ಟೆಂಬರ್ 14: ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯು “ಮೂರು ಕುಟುಂಬಗಳು” ಮತ್ತು ಕೇಂದ್ರಾಡಳಿತ ಪ್ರದೇಶದ ಯುವಕರ ನಡುವಿನ ಹೋರಾಟವಾಗಿದೆ ಎಂದು ದೋಡಾದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಶನಿವಾರ ಹೇಳಿದ್ದಾರೆ. ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ (NC) ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಆ ಮೂರು ರಾಜಕೀಯ ಕುಟುಂಬಗಳು ಎಂದು ಹೇಳಿರುವ ಮೋದಿ, ಈ ಕುಟುಂಬಗಳ ಭ್ರಷ್ಟ ಆಚರಣೆಗಳು ಜಮ್ಮು ಮತ್ತು ಕಾಶ್ಮೀರವನ್ನು ನಾಶ ಮಾಡಿತು ಎಂದಿದ್ದಾರೆ.

ದಶಕಗಳಿಂದ ಜಮ್ಮು ಕಾಶ್ಮೀರದಲ್ಲಿನ ಹೀನಾಯ ಸ್ಥಿತಿಗೆ ಈ ಮೂರು ಕುಟುಂಬಗಳೇ ಕಾರಣ. ಅವರು ಭ್ರಷ್ಟಾಚಾರದಲ್ಲಿ ತೊಡಗಿದ್ದರು, ನಿಮ್ಮ ಮೂಲಭೂತ ಅಗತ್ಯಗಳಿಗಾಗಿ ನಿಮ್ಮನ್ನು ಹೋರಾಡುವಂತೆ ಮಾಡಿದರು. ಈ ಕುಟುಂಬಗಳು ಕಣಿವೆಯಲ್ಲಿ ಭಯೋತ್ಪಾದನೆ ಮತ್ತು ಉಗ್ರವಾದಕ್ಕೆ ಅಡಿಪಾಯ ಹಾಕಿದವು. ಅವರು ವೈಯಕ್ತಿಕ ಲಾಭಕ್ಕಾಗಿ ಭಯೋತ್ಪಾದನೆಯ ಪ್ರಚಾರಕ್ಕೆ ಸುರಕ್ಷಿತ ಆಶ್ರಯವನ್ನು ಒದಗಿಸಿದರು. “ಒಂದು ಕಡೆ, ಈ ಮೂರು ಕುಟುಂಬಗಳು ಮತ್ತು ಇನ್ನೊಂದು ಕಡೆ, ಜಮ್ಮು ಮತ್ತು ಕಾಶ್ಮೀರದ ನನ್ನ ಪುತ್ರರು ಮತ್ತು ಪುತ್ರಿಯರಿದ್ದಾರೆ. ಈ ಮೂರು ರಾಜಕೀಯ ಕುಟುಂಬಗಳೆಂದರೆ – ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ. ಈ ಮೂರು ಕುಟುಂಬಗಳು ನಿಮ್ಮೊಂದಿಗೆ ಸೇರಿ ಮಾಡಿದ್ದು ಪಾಪಕ್ಕಿಂತ ಕಡಿಮೆಯೇನಲ್ಲ. ಈ ಮೂರು ಕುಟುಂಬಗಳು ಇಲ್ಲಿ ಪ್ರತ್ಯೇಕತಾವಾದ ಮತ್ತು ಭಯೋತ್ಪಾದನೆಗೆ ಅಗತ್ಯವಾದ ನೆಲವನ್ನು ಸಿದ್ಧಪಡಿಸಿದವು. ಅದರಿಂದ ಯಾರಿಗೆ ಲಾಭವಾಯಿತು? ರಾಷ್ಟ್ರದ ಶತ್ರುಗಳಿಗೆ. ಅವರು ಭಯೋತ್ಪಾದನೆಯನ್ನು ಆಶ್ರಯಿಸುತ್ತಿದ್ದರು. ಇದರಿಂದ ಅವರ ಲಕ್ಷಾಂತರ ಅಂಗಡಿಗಳು ಏಳಿಗೆಯನ್ನು ಕಾಣುತ್ತವೆ. ದಶಕಗಳಿಂದ ಜಮ್ಮು ಮತ್ತು ಕಾಶ್ಮೀರವನ್ನು ಹಾಳುಗೆಡವಲು ಅವರೇ ಕಾರಣ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ತಮ್ಮ ಸರ್ಕಾರವು ಸಮೃದ್ಧ ಜಮ್ಮು ಮತ್ತು ಕಾಶ್ಮೀರವನ್ನು ಮಾಡಲಿದೆ ಎಂದು ವಾಗ್ದಾನ ಮಾಡಿದ ಮೋದಿ ಇದು “ಮೋದಿ ಕಿ ಗ್ಯಾರಂಟಿ” ಎಂದು ಹೇಳಿದರು.

“ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳು ನಮ್ಮನ್ನು ಆಶೀರ್ವದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಬಂದಿರುವುದನ್ನು ನಾನು ನೋಡುತ್ತೇನೆ. ನಿಮ್ಮೆಲ್ಲರಿಗೂ ನಾನು ಕೃತಜ್ಞನಾಗಿದ್ದೇನೆ. ನಿಮ್ಮ ಈ ಪ್ರೀತಿ ಮತ್ತು ಆಶೀರ್ವಾದವನ್ನು ನಾನು ನಿಮಗಾಗಿ ಮತ್ತು ದೇಶಕ್ಕಾಗಿ ಎರಡು ಮೂರು ಬಾರಿ ಶ್ರಮಿಸುವ ಮೂಲಕ ಮರುಪಾವತಿಸುತ್ತೇನೆ. ನಾವು ಒಟ್ಟಾಗಿ ಸುರಕ್ಷಿತ ಮತ್ತು ಸಮೃದ್ಧ ಜಮ್ಮು ಮತ್ತು ಕಾಶ್ಮೀರವನ್ನು ನಿರ್ಮಿಸುತ್ತೇವೆ. ಇದು ಮೋದಿಯವರ ಭರವಸೆ. ಅದೇ ವೇಳೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆಯು ಕೇಂದ್ರಾಡಳಿತ ಪ್ರದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

“ಈ ಬಾರಿ ಜಮ್ಮು ಮತ್ತು ಕಾಶ್ಮೀರದ ಚುನಾವಣೆಗಳು ಇಲ್ಲಿನ ಭವಿಷ್ಯವನ್ನು ನಿರ್ಧರಿಸಲಿವೆ. ಸ್ವಾತಂತ್ರ್ಯದ ನಂತರ, ನಮ್ಮ ಪ್ರೀತಿಯ ಜಮ್ಮು ಕಾಶ್ಮೀರ ವಿದೇಶಿ ಶಕ್ತಿಗಳ ಕೆಂಗಣ್ಣಿಗೆ ಗುರಿಯಾಗಿದೆ. ಇದರ ನಂತರ, ‘ಕುಟುಂಬ ರಾಜಕಾರಣ’ ಈ ಸುಂದರ ರಾಜ್ಯವನ್ನು ಟೊಳ್ಳು ಮಾಡಲು ಪ್ರಾರಂಭಿಸಿತು. ಇಲ್ಲಿ ನೀವು ನಂಬಿದ ರಾಜಕೀಯ ಪಕ್ಷಗಳಿಗೆ ನಿಮ್ಮ ಮಕ್ಕಳ ಬಗ್ಗೆ ಕಾಳಜಿ ಇಲ್ಲ. ಆ ರಾಜಕೀಯ ಪಕ್ಷಗಳು ತಮ್ಮ ತಮ್ಮ ಮಕ್ಕಳನ್ನು ಮಾತ್ರ ಪ್ರಚಾರ ಮಾಡುತ್ತವೆ. ಜಮ್ಮು ಮತ್ತು ಕಾಶ್ಮೀರ ಯುವಕರು ಭಯೋತ್ಪಾದನೆಯಿಂದ ಬಳಲುತ್ತಿದ್ದಾರೆ ಮತ್ತು ‘ಕುಟುಂಬ ರಾಜಕಾರಣ’ವನ್ನು ಉತ್ತೇಜಿಸುವ ಪಕ್ಷಗಳು ನಿಮ್ಮನ್ನು ದಾರಿ ತಪ್ಪಿಸುವ ಮೂಲಕ ಮೋಜು ಮಾಡುತ್ತಿವೆ. ಈ ಜನ ಜಮ್ಮು ಮತ್ತು ಕಾಶ್ಮೀರದಲ್ಲಿ ಎಲ್ಲಿಯೂ ಹೊಸ ನಾಯಕರನ್ನು ಹುಟ್ಟು ಹಾಕಲು ಬಿಡಲಿಲ್ಲ. 2000ನೇ ಇಸವಿಯ ನಂತರ ಇಲ್ಲಿ ಪಂಚಾಯತ್ ಚುನಾವಣೆ ನಡೆದಿಲ್ಲ ಎಂಬುದು ನಿಮಗೂ ಗೊತ್ತಿದೆ.

“ಕುಟುಂಬ ರಾಜಕಾರಣ” ಯುವಕರನ್ನು ಮುಂದೆ ಬರಲು ಬಿಡಲಿಲ್ಲ. ಅದಕ್ಕಾಗಿಯೇ 2014 ರಲ್ಲಿ ಅಧಿಕಾರಕ್ಕೆ ಬಂದ ನಂತರ ನಾನು ಜಮ್ಮು ಮತ್ತು ಕಾಶ್ಮೀರದಲ್ಲಿ ಯುವಕರ ಹೊಸ ನಾಯಕತ್ವವನ್ನು ತರಲು ಪ್ರಯತ್ನಿಸಿದೆ ಎಂದು ಅವರು ಹೇಳಿದರು.

2018ರಲ್ಲಿ ಇಲ್ಲಿ ಪಂಚಾಯತ್ ಚುನಾವಣೆ ನಡೆದಿತ್ತು. 2019 ರಲ್ಲಿ, ಬಿಡಿಸಿ ಚುನಾವಣೆಗಳು ನಡೆದವು. 2020 ರಲ್ಲಿ, ಮೊದಲ ಬಾರಿಗೆ ಡಿಡಿಸಿ ಚುನಾವಣೆಗಳು ನಡೆದವು. ಈ ಚುನಾವಣೆಗಳು ಏಕೆ ನಡೆದವು? ಇದರಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ತಳಮಟ್ಟವನ್ನು ತಲುಪುತ್ತದೆ ಎಂದು ಮೋದಿ ಹೇಳಿದ್ದಾರೆ.

ಲಾಲ್ ಚೌಕ್‌ಗೆ ಭೇಟಿ ನೀಡಲು ನನಗೆ ಭಯವಾಗುತ್ತಿದೆ ಎಂದು ಆಗಿನ ಕಾಂಗ್ರೆಸ್‌ನ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಹೇಳಿಕೆಯನ್ನು ಪ್ರಧಾನಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದಾರೆ.

“ಸಂಜೆಯ ನಂತರ ಅಘೋಷಿತ ಕರ್ಫ್ಯೂ ಇದ್ದ ಸಮಯವಿತ್ತು. ಕೇಂದ್ರ ಗೃಹ ಸಚಿವರು ಲಾಲ್ ಚೌಕ್ ಗೆ ಭೇಟಿ ನೀಡಲು ಹೆದರುವ ಪರಿಸ್ಥಿತಿ ನಿರ್ಮಾಣವಾಗಿತ್ತು,” ಎಂದು ಮೋದಿ ಹೇಳಿದ್ದಾರೆ.

“ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಈಗ ಕೊನೆಯುಸಿರೆಳೆದಿದೆ. ಕಳೆದ 10 ವರ್ಷಗಳಲ್ಲಿ ಇಲ್ಲಿ ಕಂಡ ಬದಲಾವಣೆಗಳು ಕನಸಿನ ಮಾತಲ್ಲ. ಒಂದು ಕಾಲದಲ್ಲಿ ಪೊಲೀಸರು ಮತ್ತು ಸೇನೆಯ ಮೇಲೆ ಎಸೆಯಲು ಎತ್ತಿಕೊಂಡ ಕಲ್ಲುಗಳನ್ನು ಈಗ ಹೊಸ ಜಮ್ಮು ಮತ್ತು ಕಾಶ್ಮೀರವನ್ನು ನಿರ್ಮಿಸಲು ಬಳಸಲಾಗುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಪ್ರತಿಯೊಂದು ಮಗುವೂ ಉತ್ತಮ ಶಿಕ್ಷಣವನ್ನು ಪಡೆಯಬೇಕೆಂದು ನಾನು ಬಯಸುತ್ತೇನೆ.

“ಕಳೆದ ಕೆಲವು ವರ್ಷಗಳಿಂದ, ಬಿಜೆಪಿ ಸರ್ಕಾರವು ಯುವಕರ ಒಳಿತಿಗಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ ವಿವಿಧ ಶಾಲೆಗಳು ಮತ್ತು ಕಾಲೇಜುಗಳನ್ನು ಉದ್ಘಾಟಿಸಿದೆ. ದೋಡಾದಲ್ಲಿ ವೈದ್ಯಕೀಯ ಕಾಲೇಜಿಗೆ ಬಹುಕಾಲದ ಬೇಡಿಕೆಯನ್ನು ಬಿಜೆಪಿ ಸರ್ಕಾರ ಇತ್ತೀಚೆಗೆ ಈಡೇರಿಸಿದೆ. ಬಿಜೆಪಿಯ ನಿರ್ಣಯ ಮತ್ತು ಬೆಂಬಲವು ಜಮ್ಮು ಮತ್ತು ಕಾಶ್ಮೀರಕ್ಕೆ ಶಾಂತಿ, ಸಮೃದ್ಧಿ ಮತ್ತು ಭದ್ರತೆಯನ್ನು ತರಬಹುದು ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಕುಟುಂಬಕ್ಕೆ ಹೊಸ ಸದಸ್ಯೆ; ದೀಪಜ್ಯೋತಿಗೆ ಮುತ್ತಿಡುವ ವಿಡಿಯೊ ಶೇರ್ ಮಾಡಿದ ಪ್ರಧಾನಿ

“ನಮ್ಮ ಅಭ್ಯರ್ಥಿಗಳನ್ನು ಭಾರಿ ಜನಾದೇಶದೊಂದಿಗೆ ಗೆಲ್ಲುವಂತೆ ಮಾಡಿ ಮತ್ತು ಕಣಿವೆಯಲ್ಲಿರುವ ಎಲ್ಲರಿಗೂ ಉಜ್ವಲ ಭವಿಷ್ಯವನ್ನು ಖಚಿತಪಡಿಸಿ. ಜಮ್ಮು ಮತ್ತು ಕಾಶ್ಮೀರದ ಯಾವುದೇ ಪ್ರಜೆ, ಅವನ ಧರ್ಮ, ಪ್ರದೇಶ ಮತ್ತು ಸಾಂಸ್ಕೃತಿಕ ಸಂಬಂಧವನ್ನು ಲೆಕ್ಕಿಸದೆ, ಬಿಜೆಪಿ ಸರ್ಕಾರಕ್ಕೆ ಆದ್ಯತೆಯಾಗಿದೆ. ನಿಮ್ಮ ಹಕ್ಕುಗಳನ್ನು ರಕ್ಷಿಸಲು ನಾನು ಭರವಸೆ ನೀಡುತ್ತೇನೆ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಬಲಪಡಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಚುನಾವಣೆಯನ್ನು ನಿಗದಿಪಡಿಸಲಾಗಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್