AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈಲಿಗೆ ಸಿಲುಕಿ ಹೆಣ್ಣಾನೆ ಮತ್ತು ಅದರ 2 ಪುಟ್ಟ ಮರಿಗಳು ದುರ್ಮರಣ; ತಮಿಳುನಾಡಲ್ಲೊಂದು ದುರಂತ

ಇಂಥದ್ದೇ ಒಂದು ಘಟನೆ 2021ರ ಮಾರ್ಚ್​ ತಿಂಗಳಲ್ಲಿ ನಡೆದಿತ್ತು. ಪಲಕ್ಕಾಡ್ ಮತ್ತು ಕೊಯಂಬತ್ತೂರ್​​ನ  ಮಧ್ಯದಲ್ಲಿರುವ ರೈಲ್ವೆ ಹಳಿಯ ಮೇಲೆ ಆನೆಯೊಂದು ರೈಲಿಗೆ ಡಿಕ್ಕಿಯಾಗಿ ಮೃತಪಟ್ಟಿತ್ತು.

ರೈಲಿಗೆ ಸಿಲುಕಿ ಹೆಣ್ಣಾನೆ ಮತ್ತು ಅದರ 2 ಪುಟ್ಟ ಮರಿಗಳು ದುರ್ಮರಣ; ತಮಿಳುನಾಡಲ್ಲೊಂದು ದುರಂತ
ಸಾವನ್ನಪ್ಪಿದ ಆನೆಗಳು
TV9 Web
| Edited By: |

Updated on: Nov 27, 2021 | 8:56 AM

Share

ಕೊಯಂಬತ್ತೂರ್​: ಒಂದು ಹೆಣ್ಣಾನೆ ಮತ್ತು ಅದರ ಎರಡು ಪುಟ್ಟ ಹೆಣ್ಣು ಮರಿಗಳು ರೈಲು ಡಿಕ್ಕಿ ಹೊಡೆದು ಮೃತಪಟ್ಟ ಹೃದಯವಿದ್ರಾವಕ ಘಟನೆ ಶುಕ್ರವಾರ ರಾತ್ರಿ ತಮಿಳುನಾಡು-ಕೇರಳದ ಗಡಿಯಾದ ನವಕ್ಕರೈ ಸಮೀಪದ ಮಾವುತ್ತಂಪತ್ತಿ ಗ್ರಾಮದ ಬಳಿ ನಡೆದಿದೆ. ತಾಯಿ ಆನೆಗೆ ಸುಮಾರು 25 ವರ್ಷವಾಗಿರಬಹುದು ಹಾಗೂ ಮರಿಗಳಿಗೆ 12 ವರ್ಷ ಆಗಿದೆ ಎಂದು ಸ್ಥಳೀಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ 9.05ರ ಹೊತ್ತಿಗೆ ಮಹೀಂದ್ರಾಮೇಡು ಎಂಬಲ್ಲಿ, ಮಂಗಳೂರು-ಚೆನ್ನೈ ಎಕ್ಸ್​​ಪ್ರೆಸ್​ ರೈಲಿಗೆ ಈ ಆನೆಗಳು ಬಲಿಯಾಗಿವೆ. ರೈಲಿಗೆ ಸಿಲುಕಿದ ಈ ಆನೆಗಳು ಹಳಿಯ ಮೇಲೆ ಕೆಲವು ಮೀಟರ್​​ಗಳಷ್ಟು ದೂರ ಎಳೆಯಲ್ಪಟ್ಟಿವೆ. 

ಆನೆಗಳು ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ಮಾಡಿದ್ದಾರೆ.  ರಾತ್ರಿ ಕತ್ತಲಿದ್ದರೂ ಆನೆಯ ಮೃತದೇಹಗಳನ್ನು ಹಳಿಯ ಮೇಲಿಂದ ತೆಗೆಯಲಾಗಿದ್ದು, ಇಂದು ಪೋಸ್ಟ್​ಮಾರ್ಟಮ್​ ಮಾಡಲಾಗುವುದು ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.  ಘಟನೆಯ ಪ್ರಾಥಮಿಕ ತನಿಖೆ ನಡೆಸಲು ಜಿಲ್ಲಾ ಅರಣ್ಯಾಧಿಕಾರಿ ಟಿ.ಕೆ.ಅಶೋಕ್​ ಕುಮಾರ್ ಸೇರಿ ಇಲಾಖೆಯ ಇತರ ಉನ್ನತ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.  ಹಾಗೇ, ರೈಲಿನ ಲೋಕೋ ಪೈಲಟ್​ ನೀಡಿದ ಮಾಹಿತಿ ಅನ್ವಯ ರೈಲ್ವೆ ಪೊಲೀಸರೂ ಕೂಡ ಸ್ಥಳಕ್ಕೆ ತೆರಳಿದ್ದಾರೆ.

ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳೀಯರು ಕೂಡ ಆನೆಗಳ ಮೃತದೇಹ ನೋಡಲು ಸ್ಥಳಕ್ಕೆ ಧಾವಿಸುತ್ತಿದ್ದಾರೆ. ಮೂಕಪ್ರಾಣಿಗಳ ಸಾವಿಗೆ ಬೇಸರ ವ್ಯಕ್ತಪಡಿಸಿದ್ದಾರೆ. ಇಂಥದ್ದೇ ಒಂದು ಘಟನೆ 2021ರ ಮಾರ್ಚ್​ ತಿಂಗಳಲ್ಲಿ ನಡೆದಿತ್ತು. ಪಲಕ್ಕಾಡ್ ಮತ್ತು ಕೊಯಂಬತ್ತೂರ್​​ನ  ಮಧ್ಯದಲ್ಲಿರುವ ರೈಲ್ವೆ ಹಳಿಯ ಮೇಲೆ ಆನೆಯೊಂದು ರೈಲಿಗೆ ಡಿಕ್ಕಿಯಾಗಿ ಮೃತಪಟ್ಟಿತ್ತು. 2016ರಲ್ಲಿ ಇದೇ ರೀತಿ 15 ವರ್ಷದ ಹೆಣ್ಣಾನೆಯೊಂದು ಸಾವನ್ನಪ್ಪಿತ್ತು.

ಇದನ್ನೂ ಓದಿ:  ಬಿಗ್​ ಬಾಸ್​ ನಿರೂಪಕರ ಬದಲಾವಣೆ; ಹೊಸ ಜವಾಬ್ದಾರಿ ಹೊತ್ತುಕೊಂಡ ನಟಿ ರಮ್ಯಾ ಕೃಷ್ಣ​

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ