AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಾರಿ ಸಮುದಾಯಕ್ಕೆ ಶೀಘ್ರದಲ್ಲೇ ಮೀಸಲಾತಿ: ಜಮ್ಮು ಕಾಶ್ಮೀರದಲ್ಲಿ ಅಮಿತ್ ಶಾ

Amit Shah 370ನೇ  ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಬಗ್ಗೆ ಪ್ರಸ್ತಾಪಿಸಿದ ಶಾ, ​ 370ನೇ ವಿಧಿ ರದ್ದು ಮಾಡಿದ್ದನ್ನ ಇಲ್ಲಿಯ ಜನ ಬೆಂಬಲಿಸಿದ್ದಾರೆ.  ಅದು ರದ್ದುಗೊಂಡಾಗ  ಹಿಂಸಾತ್ಮಕ ಘಟನೆ ನಡೆಯಲಿಲ್ಲ.

ಪಹಾರಿ ಸಮುದಾಯಕ್ಕೆ ಶೀಘ್ರದಲ್ಲೇ ಮೀಸಲಾತಿ: ಜಮ್ಮು ಕಾಶ್ಮೀರದಲ್ಲಿ ಅಮಿತ್ ಶಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Oct 04, 2022 | 4:56 PM

Share

ರಜೌರಿ/ಜಮ್ಮು:  ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಇಂದು ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುಜ್ಜರ್ ಮತ್ತು ಬಕರ್ವಾಲ್‌ಗಳ ಹೊರತಾಗಿ ಪಹಾರಿ ಸಮುದಾಯಕ್ಕೆ ಶೀಘ್ರದಲ್ಲೇ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡ (ST) ಮೀಸಲಾತಿ ಸಿಗಲಿದೆ ಎಂದು ಮಂಗಳವಾರ ಘೋಷಿಸಿದ್ದಾರೆ . ಪಹಾರಿಗಳು ಎಸ್ ಟಿ ಸ್ಥಾನಮಾನವನ್ನು ಪಡೆದರೆ, ಇದು ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿಯನ್ನು ಗಳಿಸಿದ ಮೊದಲ ನಿದರ್ಶನವಾಗಲಿದ.ಅದಕ್ಕಾಗಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಬೇಕು. ಆಯೋಗವು (ಲೆಫ್ಟಿನೆಂಟ್ ಗವರ್ನರ್ ಸ್ಥಾಪಿಸಿದ) ವರದಿಯನ್ನು ಕಳುಹಿಸಿದ್ದು  ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಅದನ್ನು ಶೀಘ್ರದಲ್ಲೇ ನೀಡಲಾಗುವುದು” ಎಂದು ಶಾ ಹೇಳಿದ್ದಾರೆ.

ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರವೇ ಅಂತಹ ಮೀಸಲಾತಿ ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ. ಈಗ ಇಲ್ಲಿ ಅಲ್ಪಸಂಖ್ಯಾತರು, ದಲಿತರು, ಆದಿವಾಸಿಗಳು, ಪಹಾರಿಗಳು ತಮ್ಮ ಹಕ್ಕುಗಳನ್ನು ಪಡೆಯುತ್ತಾರೆ.

“ಕೆಲವರು” ಗುಜ್ಜರ್‌ಗಳು ಮತ್ತು ಬಕರ್‌ವಾಲ್‌ಗಳನ್ನು ಪಹಾರಿಗಳಿಗೆ ಎಸ್‌ಟಿ ಸ್ಥಾನಮಾನವನ್ನು ಪಡೆಯಲು “ಪ್ರಚೋದಿಸಲು ಪ್ರಯತ್ನಿಸಿದರು, ಆದರೆಜನರಿಗೆ ಅವರ ಬಣ್ಣ  ಗೊತ್ತಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಿದ ಸಾಂವಿಧಾನಿಕ ನಿಬಂಧನೆಗಳಾದ 35 ಎ ಮತ್ತು 370 ರನ್ನು ರದ್ದು ಪಡಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳಬೇಕೆಂದು ಅವರು ಜನರನ್ನು ಒತ್ತಾಯಿಸಿದರು.

ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ. ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿದ್ದು  ಅದರಲ್ಲಿ ಜಮ್ಮು ಮತ್ತು ಕಾಶ್ಮೀರವು ಚುನಾಯಿತ ವಿಧಾನಸಭೆಯನ್ನು ಹೊಂದಿದೆ,.  ಕ್ಷೇತ್ರಗಳನ್ನು ಗುರುತಿಸುವ ಮತ್ತು ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯು ಬಹುತೇಕ ಮುಗಿದಿರುವುದರಿಂದ ಅದರ ಮೊದಲ ಚುನಾವಣೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ.

ಇಲ್ಲಿ ಆಳ್ವಿಕೆ ನಡೆಸಿದ ಮೂರು ಕುಟುಂಬಗಳ ಹಿಡಿತದಿಂದ ಜಮ್ಮು ಮತ್ತು ಕಾಶ್ಮೀರವನ್ನು ಮುಕ್ತಗೊಳಿಸಲು ನಾನು ನಿಮ್ಮಲ್ಲಿ ಮನವಿ ಮಾಡಲು ಬಯಸುತ್ತೇನೆ ಎಂದು ಶಾ ಹೇಳಿದರು.

ಜಮ್ಮು ಮತ್ತು ಕಾಶ್ಮೀರ, ರಾಜ್ಯವಾಗಿದ್ದು, 2018 ರಲ್ಲಿ ಚುನಾಯಿತ ಸರ್ಕಾರವನ್ನು ಹೊಂದಿತ್ತು, ಇದರಲ್ಲಿ ಬಿಜೆಪಿ ಕಿರಿಯ ಪಾಲುದಾರರಾಗಿದ್ದರು ಮತ್ತು ಪಿಡಿಪಿಯ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗಿದ್ದರು. ಎನ್‌ಸಿ ಕೂಡ ಒಂದು ಕಾಲದಲ್ಲಿ ಕೇಂದ್ರದಲ್ಲಿ ಬಿಜೆಪಿಯ ಪಾಲುದಾರರಾಗಿದ್ದರು.

“ನ್ಯಾಯಯುತ ಚುನಾವಣೆಗಳ ಮೂಲಕ ಪಂಚಾಯತ್ ಮತ್ತು ಜಿಲ್ಲಾ ಕೌನ್ಸಿಲ್‌ಗಳಿಗೆ ಚುನಾಯಿತರಾದ 30,000 ಜನರೊಂದಿಗೆ ಈಗ ಅಧಿಕಾರವಿದೆ” ಎಂದು ಶಾ ಹೇಳಿದರು, ಈಗಾಗಲೇ ಗ್ರಾಮ ಮಟ್ಟದ ಚುನಾವಣೆಗಳು ನಡೆದಿವೆ ಎಂದು ಒತ್ತಿ ಹೇಳಿದರು. ಈ ಹಿಂದೆ ಕೇಂದ್ರದಿಂದ ಅಭಿವೃದ್ಧಿಗೆಂದು ಕಳುಹಿಸುವ ಹಣವನ್ನೆಲ್ಲ ಕೆಲವರು ಕಬಳಿಸುತ್ತಿದ್ದರು, ಆದರೆ ಈಗ ಎಲ್ಲವೂ ಕಲ್ಯಾಣಕ್ಕೆ ಖರ್ಚಾಗಿದೆ.

ಮೋದಿ ಸರ್ಕಾರವು ಭಯೋತ್ಪಾದಕರ ವಿರುದ್ಧ ಕೈಗೊಂಡಿರುವ “ಬಲವಾದ ಕ್ರಮ” ದಿಂದಾಗಿ ಈಗ ಭದ್ರತಾ ಪರಿಸ್ಥಿತಿ “ತುಂಬಾ ಉತ್ತಮವಾಗಿದೆ” ಎಂದು ಅವರು ಹೇಳಿದ್ದಾರೆ.  ಬಿ

370ನೇ  ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಬಗ್ಗೆ ಪ್ರಸ್ತಾಪಿಸಿದ ಶಾ, ​ 370ನೇ ವಿಧಿ ರದ್ದು ಮಾಡಿದನ್ನು ಇಲ್ಲಿಯ ಜನ ಬೆಂಬಲಿಸಿದ್ದಾರೆ.  ಅದು ರದ್ದುಗೊಂಡಾಗ  ಹಿಂಸಾತ್ಮಕ ಘಟನೆ ನಡೆಯಲಿಲ್ಲ. ಜನರು ಯಾವುದೇ ವಿರೋಧ ವ್ಯಕ್ತಪಡಿಸದೇ ನಮ್ಮ ಜೊತೆ ನಿಂತರು. ನಮಗೆ ಜನರು ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡಿದ್ದಾರೆ ಎಂದು ಹೇಳಿದ್ದಾರೆ .

Published On - 2:19 pm, Tue, 4 October 22

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ