AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಹಾರಿ ಸಮುದಾಯಕ್ಕೆ ಶೀಘ್ರದಲ್ಲೇ ಮೀಸಲಾತಿ: ಜಮ್ಮು ಕಾಶ್ಮೀರದಲ್ಲಿ ಅಮಿತ್ ಶಾ

Amit Shah 370ನೇ  ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಬಗ್ಗೆ ಪ್ರಸ್ತಾಪಿಸಿದ ಶಾ, ​ 370ನೇ ವಿಧಿ ರದ್ದು ಮಾಡಿದ್ದನ್ನ ಇಲ್ಲಿಯ ಜನ ಬೆಂಬಲಿಸಿದ್ದಾರೆ.  ಅದು ರದ್ದುಗೊಂಡಾಗ  ಹಿಂಸಾತ್ಮಕ ಘಟನೆ ನಡೆಯಲಿಲ್ಲ.

ಪಹಾರಿ ಸಮುದಾಯಕ್ಕೆ ಶೀಘ್ರದಲ್ಲೇ ಮೀಸಲಾತಿ: ಜಮ್ಮು ಕಾಶ್ಮೀರದಲ್ಲಿ ಅಮಿತ್ ಶಾ
TV9 Web
| Edited By: |

Updated on:Oct 04, 2022 | 4:56 PM

Share

ರಜೌರಿ/ಜಮ್ಮು:  ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ಇಂದು ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಗುಜ್ಜರ್ ಮತ್ತು ಬಕರ್ವಾಲ್‌ಗಳ ಹೊರತಾಗಿ ಪಹಾರಿ ಸಮುದಾಯಕ್ಕೆ ಶೀಘ್ರದಲ್ಲೇ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡ (ST) ಮೀಸಲಾತಿ ಸಿಗಲಿದೆ ಎಂದು ಮಂಗಳವಾರ ಘೋಷಿಸಿದ್ದಾರೆ . ಪಹಾರಿಗಳು ಎಸ್ ಟಿ ಸ್ಥಾನಮಾನವನ್ನು ಪಡೆದರೆ, ಇದು ಭಾರತದಲ್ಲಿ ಭಾಷಾವಾರು ಗುಂಪು ಮೀಸಲಾತಿಯನ್ನು ಗಳಿಸಿದ ಮೊದಲ ನಿದರ್ಶನವಾಗಲಿದ.ಅದಕ್ಕಾಗಿ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಬೇಕು. ಆಯೋಗವು (ಲೆಫ್ಟಿನೆಂಟ್ ಗವರ್ನರ್ ಸ್ಥಾಪಿಸಿದ) ವರದಿಯನ್ನು ಕಳುಹಿಸಿದ್ದು  ಗುಜ್ಜರ್, ಬಕರ್ವಾಲ್ ಮತ್ತು ಪಹಾರಿ ಸಮುದಾಯಗಳಿಗೆ ಮೀಸಲಾತಿಯನ್ನು ಶಿಫಾರಸು ಮಾಡಿದೆ. ಅದನ್ನು ಶೀಘ್ರದಲ್ಲೇ ನೀಡಲಾಗುವುದು” ಎಂದು ಶಾ ಹೇಳಿದ್ದಾರೆ.

ಆರ್ಟಿಕಲ್ 370 ರ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನವನ್ನು ತೆಗೆದುಹಾಕಿದ ನಂತರವೇ ಅಂತಹ ಮೀಸಲಾತಿ ಸಾಧ್ಯವಾಯಿತು ಎಂದು ಅವರು ಹೇಳಿದ್ದಾರೆ. ಈಗ ಇಲ್ಲಿ ಅಲ್ಪಸಂಖ್ಯಾತರು, ದಲಿತರು, ಆದಿವಾಸಿಗಳು, ಪಹಾರಿಗಳು ತಮ್ಮ ಹಕ್ಕುಗಳನ್ನು ಪಡೆಯುತ್ತಾರೆ.

“ಕೆಲವರು” ಗುಜ್ಜರ್‌ಗಳು ಮತ್ತು ಬಕರ್‌ವಾಲ್‌ಗಳನ್ನು ಪಹಾರಿಗಳಿಗೆ ಎಸ್‌ಟಿ ಸ್ಥಾನಮಾನವನ್ನು ಪಡೆಯಲು “ಪ್ರಚೋದಿಸಲು ಪ್ರಯತ್ನಿಸಿದರು, ಆದರೆಜನರಿಗೆ ಅವರ ಬಣ್ಣ  ಗೊತ್ತಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

ಆಗಸ್ಟ್ 5, 2019 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಕೆಲವು ಸ್ವಾಯತ್ತತೆಯನ್ನು ನೀಡಿದ ಸಾಂವಿಧಾನಿಕ ನಿಬಂಧನೆಗಳಾದ 35 ಎ ಮತ್ತು 370 ರನ್ನು ರದ್ದು ಪಡಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದ ಹೇಳಬೇಕೆಂದು ಅವರು ಜನರನ್ನು ಒತ್ತಾಯಿಸಿದರು.

ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಗಿದೆ. ಲಡಾಖ್ ಕೇಂದ್ರಾಡಳಿತ ಪ್ರದೇಶವಾಗಿದ್ದು  ಅದರಲ್ಲಿ ಜಮ್ಮು ಮತ್ತು ಕಾಶ್ಮೀರವು ಚುನಾಯಿತ ವಿಧಾನಸಭೆಯನ್ನು ಹೊಂದಿದೆ,.  ಕ್ಷೇತ್ರಗಳನ್ನು ಗುರುತಿಸುವ ಮತ್ತು ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯು ಬಹುತೇಕ ಮುಗಿದಿರುವುದರಿಂದ ಅದರ ಮೊದಲ ಚುನಾವಣೆ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿದೆ.

ಇಲ್ಲಿ ಆಳ್ವಿಕೆ ನಡೆಸಿದ ಮೂರು ಕುಟುಂಬಗಳ ಹಿಡಿತದಿಂದ ಜಮ್ಮು ಮತ್ತು ಕಾಶ್ಮೀರವನ್ನು ಮುಕ್ತಗೊಳಿಸಲು ನಾನು ನಿಮ್ಮಲ್ಲಿ ಮನವಿ ಮಾಡಲು ಬಯಸುತ್ತೇನೆ ಎಂದು ಶಾ ಹೇಳಿದರು.

ಜಮ್ಮು ಮತ್ತು ಕಾಶ್ಮೀರ, ರಾಜ್ಯವಾಗಿದ್ದು, 2018 ರಲ್ಲಿ ಚುನಾಯಿತ ಸರ್ಕಾರವನ್ನು ಹೊಂದಿತ್ತು, ಇದರಲ್ಲಿ ಬಿಜೆಪಿ ಕಿರಿಯ ಪಾಲುದಾರರಾಗಿದ್ದರು ಮತ್ತು ಪಿಡಿಪಿಯ ಮೆಹಬೂಬಾ ಮುಫ್ತಿ ಮುಖ್ಯಮಂತ್ರಿಯಾಗಿದ್ದರು. ಎನ್‌ಸಿ ಕೂಡ ಒಂದು ಕಾಲದಲ್ಲಿ ಕೇಂದ್ರದಲ್ಲಿ ಬಿಜೆಪಿಯ ಪಾಲುದಾರರಾಗಿದ್ದರು.

“ನ್ಯಾಯಯುತ ಚುನಾವಣೆಗಳ ಮೂಲಕ ಪಂಚಾಯತ್ ಮತ್ತು ಜಿಲ್ಲಾ ಕೌನ್ಸಿಲ್‌ಗಳಿಗೆ ಚುನಾಯಿತರಾದ 30,000 ಜನರೊಂದಿಗೆ ಈಗ ಅಧಿಕಾರವಿದೆ” ಎಂದು ಶಾ ಹೇಳಿದರು, ಈಗಾಗಲೇ ಗ್ರಾಮ ಮಟ್ಟದ ಚುನಾವಣೆಗಳು ನಡೆದಿವೆ ಎಂದು ಒತ್ತಿ ಹೇಳಿದರು. ಈ ಹಿಂದೆ ಕೇಂದ್ರದಿಂದ ಅಭಿವೃದ್ಧಿಗೆಂದು ಕಳುಹಿಸುವ ಹಣವನ್ನೆಲ್ಲ ಕೆಲವರು ಕಬಳಿಸುತ್ತಿದ್ದರು, ಆದರೆ ಈಗ ಎಲ್ಲವೂ ಕಲ್ಯಾಣಕ್ಕೆ ಖರ್ಚಾಗಿದೆ.

ಮೋದಿ ಸರ್ಕಾರವು ಭಯೋತ್ಪಾದಕರ ವಿರುದ್ಧ ಕೈಗೊಂಡಿರುವ “ಬಲವಾದ ಕ್ರಮ” ದಿಂದಾಗಿ ಈಗ ಭದ್ರತಾ ಪರಿಸ್ಥಿತಿ “ತುಂಬಾ ಉತ್ತಮವಾಗಿದೆ” ಎಂದು ಅವರು ಹೇಳಿದ್ದಾರೆ.  ಬಿ

370ನೇ  ವಿಧಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಬಗ್ಗೆ ಪ್ರಸ್ತಾಪಿಸಿದ ಶಾ, ​ 370ನೇ ವಿಧಿ ರದ್ದು ಮಾಡಿದನ್ನು ಇಲ್ಲಿಯ ಜನ ಬೆಂಬಲಿಸಿದ್ದಾರೆ.  ಅದು ರದ್ದುಗೊಂಡಾಗ  ಹಿಂಸಾತ್ಮಕ ಘಟನೆ ನಡೆಯಲಿಲ್ಲ. ಜನರು ಯಾವುದೇ ವಿರೋಧ ವ್ಯಕ್ತಪಡಿಸದೇ ನಮ್ಮ ಜೊತೆ ನಿಂತರು. ನಮಗೆ ಜನರು ದೊಡ್ಡ ಪ್ರಮಾಣದಲ್ಲಿ ಬೆಂಬಲ ನೀಡಿದ್ದಾರೆ ಎಂದು ಹೇಳಿದ್ದಾರೆ .

Published On - 2:19 pm, Tue, 4 October 22

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು