AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆವಂತಿಪೋರಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾಪಡೆ

ಇದೀಗ ಹತ್ಯೆಯಾದ ಮೂವರು ಭಯೋತ್ಪಾದಕರಲ್ಲಿ, ಇಬ್ಬರು ಉಗ್ರರು ಜುಲೈ 23ರಂದು ಕಾಶ್ಮೀರದ ಸರ್ಕಾರಿ ಹೈಸ್ಕೂಲ್​​  ಜವಾನನ್ನು ಹತ್ಯೆ ಪ್ರಕರಣದಲ್ಲಿ ಬೇಕಾದವರಾಗಿದ್ದರು ಎಂದು ಕಾಶ್ಮೀರ ಐಜಿಪಿ ತಿಳಿಸಿದ್ದಾರೆ.

ಆವಂತಿಪೋರಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾಪಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 21, 2021 | 9:06 AM

Share

ಶ್ರೀನಗರ: ಜಮ್ಮು-ಕಾಶ್ಮೀರದ ಅವಂತಿಪೋರಾದ ನಾಗಬರೇನ್ ಟ್ರಾಲ್​​ನಲ್ಲಿ ಶನಿವಾರ ಮುಂಜಾನೆ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಮೂವರೂ ಉಗ್ರರು ಜೈಶ್​-ಇ-ಮೊಹಮ್ಮದ್​ (JeM) ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳದಲ್ಲಿ ಇನ್ನೂ ಕೂಡ ಕಾರ್ಯಾಚರಣೆ ನಡೆಯುತ್ತಿದೆ. ಇನ್ನಷ್ಟು ಮಂದಿ ಭಯೋತ್ಪಾದಕರು ಅಡಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರನ್ನು ಸೆರೆಹಿಡಿಯಲು ಭದ್ರತಾ ಪಡೆಗಳು ಮುಂದಾಗಿವೆ.

ಕಾಶ್ಮೀರದ ಪೊಲೀಸರು ಮತ್ತು ಭಾರತೀಯ ಸೇನಾಪಡೆಗಳು ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಬಗ್ಗೆ ತಿಳಿಸಿರುವ ಕಾಶ್ಮೀರ ಪೊಲೀಸರು, ಹತ್ಯೆಯಾದ ಮೂವರು ಉಗ್ರರು ಜೈಷ್​-ಇ-ಮೊಹಮ್ಮದ್​ ಸಂಘಟನೆಗೆ ಸೇರಿದವರು ಎಂದು ಗೊತ್ತಾಗಿದೆ. ಆದರೆ ಇವರ ಹೆಸರು, ಮತ್ತಿತರ ವಿವರಗಳಿನ್ನೂ ಲಭ್ಯವಾಗಿಲ್ಲ ಎಂದಿದ್ದಾರೆ.  ಶುಕ್ರವಾರ ಮುಂಜಾನೆ ಆವಂತಿಪೋರಾದ  ಖ್ರೆ, ಪಾಂಪೋರ್​ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಎನ್​ಕೌಂಟರ್ ಕಾರ್ಯಾಚರಣೆ ನಡೆಸಿದ್ದವು. ಆಗಲೇ ಇಬ್ಬರು ಉಗ್ರರನ್ನು ಕೊಂದಿದ್ದರು. ಸದ್ಯ ಮೃತರಾದ ಎಲ್ಲ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನೂ ರಕ್ಷಣಾ ಪಡೆಗಳು ವಶಪಡಿಸಿಕೊಂಡಿವೆ.

ಇದೀಗ ಹತ್ಯೆಯಾದ ಮೂವರು ಭಯೋತ್ಪಾದಕರಲ್ಲಿ, ಇಬ್ಬರು ಉಗ್ರರು ಜುಲೈ 23ರಂದು ಕಾಶ್ಮೀರದ ಸರ್ಕಾರಿ ಹೈಸ್ಕೂಲ್​​  ಜವಾನನ್ನು ಹತ್ಯೆ ಪ್ರಕರಣದಲ್ಲಿ ಬೇಕಾದವರಾಗಿದ್ದರು. ಆ ಜವಾನನ ಹೆಸರು ಮುಸೈಬ್ ಮುಷ್ತಾಕ್ ಎಂದಾಗಿತ್ತು ಎಂದು ಕಾಶ್ಮೀರ ಐಜಿಪಿ ವಿಜಯ್​ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಸೋಮವಾರದಿಂದ ಶಾಲೆ ಆರಂಭ; ಮಕ್ಕಳು, ಪೋಷಕರು ಮತ್ತು ಶಿಕ್ಷಕರು ಕಡ್ಡಾಯವಾಗಿ ಪಾಲಿಸಬೇಕಾದ ಅಂಶಗಳು ಇಲ್ಲಿವೆ

ಸೊನಾಲಿ ಬೇಂದ್ರೆಗೆ ರಾತ್ರಿ ಕರೆ ಮಾಡಿ ‘ಓಡಿ ಹೋಗಿ ಮದ್ವೆ ಆಗೋಣ ಬಾ’ ಎಂದಿದ್ರಾ ಸುನೀಲ್​ ಶೆಟ್ಟಿ? ಇಲ್ಲಿದೆ ಅಸಲಿ ವಿಷಯ

Published On - 8:57 am, Sat, 21 August 21

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ