AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆವಂತಿಪೋರಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾಪಡೆ

ಇದೀಗ ಹತ್ಯೆಯಾದ ಮೂವರು ಭಯೋತ್ಪಾದಕರಲ್ಲಿ, ಇಬ್ಬರು ಉಗ್ರರು ಜುಲೈ 23ರಂದು ಕಾಶ್ಮೀರದ ಸರ್ಕಾರಿ ಹೈಸ್ಕೂಲ್​​  ಜವಾನನ್ನು ಹತ್ಯೆ ಪ್ರಕರಣದಲ್ಲಿ ಬೇಕಾದವರಾಗಿದ್ದರು ಎಂದು ಕಾಶ್ಮೀರ ಐಜಿಪಿ ತಿಳಿಸಿದ್ದಾರೆ.

ಆವಂತಿಪೋರಾದಲ್ಲಿ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾಪಡೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 21, 2021 | 9:06 AM

Share

ಶ್ರೀನಗರ: ಜಮ್ಮು-ಕಾಶ್ಮೀರದ ಅವಂತಿಪೋರಾದ ನಾಗಬರೇನ್ ಟ್ರಾಲ್​​ನಲ್ಲಿ ಶನಿವಾರ ಮುಂಜಾನೆ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಈ ಮೂವರೂ ಉಗ್ರರು ಜೈಶ್​-ಇ-ಮೊಹಮ್ಮದ್​ (JeM) ಸಂಘಟನೆಗೆ ಸೇರಿದವರಾಗಿದ್ದಾರೆ ಎಂದು ಹೇಳಲಾಗಿದೆ. ಸ್ಥಳದಲ್ಲಿ ಇನ್ನೂ ಕೂಡ ಕಾರ್ಯಾಚರಣೆ ನಡೆಯುತ್ತಿದೆ. ಇನ್ನಷ್ಟು ಮಂದಿ ಭಯೋತ್ಪಾದಕರು ಅಡಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಅವರನ್ನು ಸೆರೆಹಿಡಿಯಲು ಭದ್ರತಾ ಪಡೆಗಳು ಮುಂದಾಗಿವೆ.

ಕಾಶ್ಮೀರದ ಪೊಲೀಸರು ಮತ್ತು ಭಾರತೀಯ ಸೇನಾಪಡೆಗಳು ಜಂಟಿಯಾಗಿ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಬಗ್ಗೆ ತಿಳಿಸಿರುವ ಕಾಶ್ಮೀರ ಪೊಲೀಸರು, ಹತ್ಯೆಯಾದ ಮೂವರು ಉಗ್ರರು ಜೈಷ್​-ಇ-ಮೊಹಮ್ಮದ್​ ಸಂಘಟನೆಗೆ ಸೇರಿದವರು ಎಂದು ಗೊತ್ತಾಗಿದೆ. ಆದರೆ ಇವರ ಹೆಸರು, ಮತ್ತಿತರ ವಿವರಗಳಿನ್ನೂ ಲಭ್ಯವಾಗಿಲ್ಲ ಎಂದಿದ್ದಾರೆ.  ಶುಕ್ರವಾರ ಮುಂಜಾನೆ ಆವಂತಿಪೋರಾದ  ಖ್ರೆ, ಪಾಂಪೋರ್​ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಎನ್​ಕೌಂಟರ್ ಕಾರ್ಯಾಚರಣೆ ನಡೆಸಿದ್ದವು. ಆಗಲೇ ಇಬ್ಬರು ಉಗ್ರರನ್ನು ಕೊಂದಿದ್ದರು. ಸದ್ಯ ಮೃತರಾದ ಎಲ್ಲ ಉಗ್ರರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನೂ ರಕ್ಷಣಾ ಪಡೆಗಳು ವಶಪಡಿಸಿಕೊಂಡಿವೆ.

ಇದೀಗ ಹತ್ಯೆಯಾದ ಮೂವರು ಭಯೋತ್ಪಾದಕರಲ್ಲಿ, ಇಬ್ಬರು ಉಗ್ರರು ಜುಲೈ 23ರಂದು ಕಾಶ್ಮೀರದ ಸರ್ಕಾರಿ ಹೈಸ್ಕೂಲ್​​  ಜವಾನನ್ನು ಹತ್ಯೆ ಪ್ರಕರಣದಲ್ಲಿ ಬೇಕಾದವರಾಗಿದ್ದರು. ಆ ಜವಾನನ ಹೆಸರು ಮುಸೈಬ್ ಮುಷ್ತಾಕ್ ಎಂದಾಗಿತ್ತು ಎಂದು ಕಾಶ್ಮೀರ ಐಜಿಪಿ ವಿಜಯ್​ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ಸೋಮವಾರದಿಂದ ಶಾಲೆ ಆರಂಭ; ಮಕ್ಕಳು, ಪೋಷಕರು ಮತ್ತು ಶಿಕ್ಷಕರು ಕಡ್ಡಾಯವಾಗಿ ಪಾಲಿಸಬೇಕಾದ ಅಂಶಗಳು ಇಲ್ಲಿವೆ

ಸೊನಾಲಿ ಬೇಂದ್ರೆಗೆ ರಾತ್ರಿ ಕರೆ ಮಾಡಿ ‘ಓಡಿ ಹೋಗಿ ಮದ್ವೆ ಆಗೋಣ ಬಾ’ ಎಂದಿದ್ರಾ ಸುನೀಲ್​ ಶೆಟ್ಟಿ? ಇಲ್ಲಿದೆ ಅಸಲಿ ವಿಷಯ

Published On - 8:57 am, Sat, 21 August 21

ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್