AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಟಾಕಿ ಅಂಗಡಿಗೆ ಬೆಂಕಿ; ತಾತನ ಜೊತೆಗೆ ಇಬ್ಬರು ಮೊಮ್ಮಕ್ಕಳು ಸಜೀವ ದಹನ

ಬೆಂಕಿ ಹೊತ್ತಿಕೊಂಡಾಗ ಮಕ್ಕಳು ತಮ್ಮ ಅಜ್ಜನ ಜೊತೆಗೆ ಇದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಅಂಗಡಿಯನ್ನು ಬೆಂಕಿಯ ಕೆನ್ನಾಲಗೆ ಆವರಿಸಿಕೊಂಡಾಗ ಮೂವರೂ ಒಳಗೆ ಸಿಲುಕಿದ್ದರು.

ಪಟಾಕಿ ಅಂಗಡಿಗೆ ಬೆಂಕಿ; ತಾತನ ಜೊತೆಗೆ ಇಬ್ಬರು ಮೊಮ್ಮಕ್ಕಳು ಸಜೀವ ದಹನ
ಅಗ್ನಿ ಅವಘಡ (ಪ್ರಾತಿನಿಧಿಕ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 18, 2021 | 9:58 PM

Share

ಚೆನ್ನೈ: ವೆಲ್ಲೂರು ಜಿಲ್ಲೆಯ ಕಾಟ್ಪಾಡಿ ಬಳಿಯ ಲಾಥೆರಿಯ ಪಟಾಕಿ ಅಂಗಡಿಯಲ್ಲಿ ಇಂದು (ಏಪ್ರಿಲ್ 18) ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ ಅಜ್ಜ ಮತ್ತು ಇಬ್ಬರು ಮೊಮ್ಮಕ್ಕಳು ಸಜೀವ ದಹನವಾಗಿದ್ದಾರೆ. ಮೃತರನ್ನು ಮೋಹನ್ (55) ಮತ್ತು ಅವರ ಮೊಮ್ಮಕ್ಕಳಾದ ತೇಜಸ್ (7) ಮತ್ತು ಧನುಷ್ (6) ಎಂದು ಗುರುತಿಸಲಾಗಿದೆ. ಪಟಾಕಿಗಳು ಮತ್ತು ದಿನಸಿ ಪದಾರ್ಥಗಳನ್ನು ಮಾರುವ ಅಂಗಡಿಯು ಲಾಥೆರಿ ಬಸ್ ನಿಲ್ದಾಣದ ಸಮೀಪ ಇತ್ತು. ಬೆಂಕಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಬೆಂಕಿ ಹೊತ್ತಿಕೊಂಡಾಗ ಮಕ್ಕಳು ತಮ್ಮ ಅಜ್ಜನ ಜೊತೆಗೆ ಇದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಅಂಗಡಿಯನ್ನು ಬೆಂಕಿಯ ಕೆನ್ನಾಲಗೆ ಆವರಿಸಿಕೊಂಡಾಗ ಮೂವರೂ ಒಳಗೆ ಸಿಲುಕಿದ್ದರು. ಅವಘಡದಲ್ಲಿ ಕಟ್ಟಡವು ಸಂಪೂರ್ಣ ನಾಶವಾಗಿದೆ.

ಅಗ್ನಿದುರಂತದ ವಿಷಯ ಗೊತ್ತಾದ ತಕ್ಷಣ ಕಾಟ್ಪಾಡಿ ಮತ್ತು ಗುಡಿಯಾತ್ತಮ್​ ಅಗ್ನಿಶಾಮಕ ಠಾಣೆಗಳಿಂದ ಅಗ್ನಿಶಾಮಕ ವಾಹನಗಳು ಲಾಥೆರಿಗೆ ಧಾವಿಸಿದವು. ಸುಟ್ಟು ಕರಕಲಾಗಿದ್ದ ದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಯಿತು.

ಸ್ಥಳಕ್ಕೆ ಭೇಟಿ ನೀಡಿದ ವೆಲ್ಲೂರು ಜಿಲ್ಲಾಧಿಕಾರಿ ಎ.ಷಣ್ಮುಗ ಸುಂದರಂ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಸೆಲ್ವಕುಮಾರ್ ಇತರ ಅಂಗಡಿಗಳಲ್ಲಿ ಕೈಗೊಂಡಿರುವ ಸುರಕ್ಷಾ ಕ್ರಮಗಳನ್ನು ಪರಿಶೀಲಿಸಿದರು. ಎಲ್ಲ ಪಟಾಕಿ ಅಂಗಡಿಗಳಲ್ಲಿಯೂ ಕಟ್ಟುನಿಟ್ಟಾಗಿ ಸುರಕ್ಷಾ ಕ್ರಮಗಳನ್ನು ಪಾಲಿಸಬೇಕು. ಭಾನುವಾರ ಪಟಾಕಿ ಮಾರುವಂತಿಲ್ಲ. ಪಟಾಕಿ ಅಂಗಡಿಗಳಲ್ಲಿ ಮಕ್ಕಳನ್ನು ಕೂರಿಸಿಕೊಳ್ಳುವಂತಿಲ್ಲ ಎಂದು ಜಿಲ್ಲಾಧಿಕಾರಿ ಹೇಳಿದರು.

ಮನೆಗೆ ಹೊರಟಿದ್ದ ಕೂಲಿ ಕಾರ್ಮಿಕರು ಮಸಣ ಸೇರಿದರು; ಲಾರಿ ಪಲ್ಟಿ, 6 ಮಂದಿ ಸಾವು ಹೈದರಾಬಾದ್​: ನಗರ ಸಮೀಪದ ಶಂಷಾಬಾದ್​ ಬಳಿ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, 15 ಮಂದಿಗೆ ಗಾಯಗಳಾಗಿವೆ. ಶಂಷಾಬಾದ್​ನಿಂದ ಷಾಬಾದ್​ ಕಡೆಗೆ ಹೊರಟಿದ್ದ ಇಟ್ಟಿಗೆ ಗೂಡಿನ ಕಾರ್ಮಿಕರಿದ್ದ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದು, ಉರುಳಿತು. ಲಾರಿಯಲ್ಲಿ 30ಕ್ಕೂ ಅಧಿಕ‌ ಕಾರ್ಮಿಕರಿದ್ದರು. ಇವರೆಲ್ಲರೂ ಇಟ್ಟಿಗೆ ಭಟ್ಟಿಯಲ್ಲಿ‌ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರು. ಕೆಲಸ ಮುಗಿದ‌ ನಂತರ ಲಾರಿಯಲ್ಲಿ‌ ಮನೆಗಳಿಗೆ ಹೊರಟಿದ್ದರು. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

(Three killed in fire accident at cracker shop near Vellore in Tamil Nadu)

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ 19,067 ಜನರಿಗೆ ಕೊರೊನಾ ದೃಢ, 81 ಸಾವು

Published On - 9:57 pm, Sun, 18 April 21

Follow Us
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ