AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳಚರಂಡಿ ದುರಸ್ತಿ ಕಾಮಗಾರಿ ವೇಳೆ ವಸತಿ ಗಡಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು

ಇಂದು ಬೆಳಗ್ಗೆ ನೋಯ್ಡಾದಲ್ಲಿ ವಸತಿಯೊಂದರ ಗಡಿ ಗೋಡೆ ಕುಸಿದ ಪರಿಣಾಮ ಮೂವರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದಾರೆ. ನೋಯ್ಡಾ ಪ್ರಾಧಿಕಾರವು ಸೆ.21ರಲ್ಲಿ ಜಲ ವಾಯು ವಿಹಾರ್ ಬಳಿ ಒಳಚರಂಡಿ ದುರಸ್ತಿ ಕಾಮಗಾರಿಯ ಗುತ್ತಿಗೆಯನ್ನು ನೀಡಿತ್ತು. ಕಾರ್ಮಿಕರು ಇಟ್ಟಿಗೆಗಳನ್ನು ಹೊರತೆಗೆಯುವಾಗ ಗೋಡೆ ಕುಸಿದಿದೆ ಎಂದು ತಿಳಿಸಲಾಗಿದೆ.

ಒಳಚರಂಡಿ ದುರಸ್ತಿ ಕಾಮಗಾರಿ ವೇಳೆ ವಸತಿ ಗಡಿ ಗೋಡೆ ಕುಸಿದು ಮೂವರು ಕಾರ್ಮಿಕರು ಸಾವು
TV9 Web
| Edited By: |

Updated on:Sep 20, 2022 | 11:37 AM

Share

ಉತ್ತರಪ್ರದೇಶ: ಇಂದು ಬೆಳಗ್ಗೆ ನೋಯ್ಡಾದಲ್ಲಿ ವಸತಿಯೊಂದರ ಗಡಿ ಗೋಡೆ ಕುಸಿದ ಪರಿಣಾಮ ಮೂವರು ಕಟ್ಟಡ ಕಾರ್ಮಿಕರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಕ್ಕಾಗಿ ಅವಶೇಷಗಳನ್ನು ತೆರವುಗೊಳಿಸಲು ಬುಲ್ಡೋಜರ್‌ಗಳು ಕಾರ್ಯನಿರ್ವಹಿಸುತ್ತಿದೆ.

ನೋಯ್ಡಾ ಪ್ರಾಧಿಕಾರವು ಸೆ.21ರಲ್ಲಿ ಜಲ ವಾಯು ವಿಹಾರ್ ಬಳಿ ಒಳಚರಂಡಿ ದುರಸ್ತಿ ಕಾಮಗಾರಿಯ ಗುತ್ತಿಗೆಯನ್ನು ನೀಡಿತ್ತು. ಕಾರ್ಮಿಕರು ಇಟ್ಟಿಗೆಗಳನ್ನು ಹೊರತೆಗೆಯುವಾಗ ಗೋಡೆ ಕುಸಿದಿದೆ ಎಂದು ತಿಳಿಸಲಾಗಿದೆ. ಈ ಬಗ್ಗೆ ತನಿಖೆ ಮಾಡಲಾಗುವುದು. ಜಿಲ್ಲಾ ಆಸ್ಪತ್ರೆ ಮತ್ತು ಕೈಲಾಶ್ ಆಸ್ಪತ್ರೆಯಲ್ಲಿ ತಲಾ 2 ಸಾವುಗಳ ಮಾಹಿತಿಯನ್ನು ಸ್ವೀಕರಿಸಲಾಗಿದೆ (ಒಟ್ಟು 4) ಎಂದು ನೋಯ್ಡಾ ಡಿಎಂ ತಿಳಿಸಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೋಯ್ಡಾ ಸೆಕ್ಟರ್ 21ರಲ್ಲಿ ಗೋಡೆ ಕುಸಿದ ಘಟನೆಯಿಂದಾಗಿ ಜೀವಹಾನಿಯ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಅವರು ತಕ್ಷಣ ಸ್ಥಳಕ್ಕೆ ಭೇಟಿ ನೀಡುವುದಾಗಿ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಲು ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಸುಹಾಸ್ ಎಲ್.ವೈ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳ ವಿವರಗಳನ್ನು ಪತ್ತೆ ಮಾಡಲಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಪ್ರದೇಶದಲ್ಲಿ ಶೋಧ ನಡೆಸಲಾಗುತ್ತಿದೆ. ಎಲ್ಲಾ ತಂಡಗಳು ಇಲ್ಲಿವೆ ಎಂದು ಅವರು ಮಾಧ್ಯಮಗಳಿಗೆ ತಿಳಿಸಿದರು.

ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ಇರುವ ಒಳಚರಂಡಿ ವ್ಯವಸ್ಥೆ ಸರಿಪಡಿಸಲು ನೋಯ್ಡಾ ಅಭಿವೃದ್ಧಿ ಪ್ರಾಧಿಕಾರ ಗುತ್ತಿಗೆ ನೀಡಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕಾರ್ಮಿಕರು ಇಟ್ಟಿಗೆಗಳನ್ನು ಹೊರತೆಗೆಯುವಾಗ ಗೋಡೆ ಕುಸಿದಿದೆ ಮತ್ತು ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದರು.

Published On - 11:25 am, Tue, 20 September 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ